
ಯುವತಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ ಕೊಲೆಗಡುಕರು
ಕೊಡಗು-ಯುವತಿಯೋರ್ವಳನ್ನು ಬರ್ಬರವಾಗಿ ಕೊಚ್ಚಿ ಕೊಲೆಗೈದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆಯಲ್ಲಿ ನಡೆದಿದೆ. ಘಟನೆಯಿಂದ ಕೊಡಗಿನ ಜನರು ಬೆಚ್ಚಿಬಿದ್ದಿದ್ದಾರೆ.

ಕೊಲೆಯಾದ ಯುವತಿಯನ್ನು ವಿರಾಜಪೇಟೆ ತಾಲ್ಲೂಕಿನ ನಾಂಗಲ ಗ್ರಾಮದ ಬುಟ್ಟಿಯಂಡಪ್ಪ ಮಾದಪ್ಪ, ಸುನಂದ ಅವರ ಪುತ್ರಿ ಬುಟ್ಟಿಯಂಡ ಆರತಿ (24) ಎಂದು ಗುರುತಿಸಲಾಗಿದೆ.
ಘಟನಾ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ಕಾರಣ ಪೊಲೀಸ್ ತನಿಖೆಯಿಂದ ತಿಳಿದು ಬರಬೇಕಿದೆ.

