
ಭಟ್ಕಳ:ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದಲ್ಲಿ ಇದೇ ಜನವರಿ 28, 2026ರಂದು ನಡೆಯಲಿರುವ ರಾಜ್ಯ ಮಟ್ಟದ ಪತ್ರಕರ್ತರ ವಿಚಾರ ಸಂಕಿರಣ ಮತ್ತು ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭದ ಕಾರ್ಯಕ್ರಮ ಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸುವಂತೆ ಆಮಂತ್ರಣ ಪತ್ರಿಕೆಯನ್ನು ಭಟ್ಕಳ ತಂಜಿಮ್ ಅಧ್ಯಕ್ಷ ಇನಾಯತುಲ್ಲ ಶಾಭಂದ್ರಿ ಅವರಿಗೆ ಬುಧುವಾರ ಸಂಜೆ ಕಾನಿಪ ಧ್ವನಿ ಭಟ್ಕಳ ಪದಾಧಿಕಾರಿಗಳು ಭಟ್ಕಳ ತಂಜಿಮ್ ಕಚೇರಿಯಲ್ಲಿ ಭೇಟಿಯಾಗಿ ನೀಡಿದರು.ಇದೆ ಸಂದರ್ಭದಲ್ಲಿ ತಂಜಿಮ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ರಕೀಬ್ ಎಂ.ಜೆ ಅವರಿಗೂ ಕೂಡ ಕಾರ್ಯಕ್ರಮ ಕ್ಕೆ ಆಮಂತ್ರಣ ನೀಡಲಾಯಿತು.

ಈ ಕಾರ್ಯಕ್ರಮವು ಭಟ್ಕಳದ ನಾಗಯಕ್ಷೆ ಧರ್ಮಾರ್ಥ ಸಭಾಭವನದಲ್ಲಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಭಟ್ಕಳ ಘಟಕದ ಆಶ್ರಯದಲ್ಲಿಆಯೋಜಿಸಲಾಗಿದ್ದು, ಪೂಜ್ಯ ಶ್ರೀ ಮಾರುತಿ ಗುರೂಜಿ ಅವರು ಸಮಾರಂಭಕ್ಕೆ ದಿವ್ಯ ಸಾನಿಧ್ಯವನ್ನು ವಹಿಸಲಿದ್ದಾರೆ.

ಕಾರ್ಯಕ್ರಮವನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಲೋಕಾಯುಕ್ತರಾದ ಸಂತೋಷ್ ಹೆಗಡೆ ಮತ್ತು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಮಂಕಾಳ್ ವೈದ್ಯ ಅವರು ಉದ್ಘಾಟಿಸಲಿದ್ದಾರೆ. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿಯ ರಾಜ್ಯಾಧ್ಯಕ್ಷರ ಉಪಸ್ಥಿತಿಯಲ್ಲಿ ಗ್ಯಾರಂಟಿ ನ್ಯೂಸ್ ಮುಖ್ಯಸ್ಥೆ ರಾಧಾ ಹಿರೇಗೌಡರ್ ಹಾಗೂ ಶ್ರೀ ಗಂಗಾಧರ್ ಮೊದಲಿಯಾರ್ ಅವರು ವಿಶೇಷ ಆಹ್ವಾನಿತರಾಗಿರುತ್ತಾರೆ.ಇದೇ ಸಂದರ್ಭದಲ್ಲಿ ಮಾಜಿ ಸಚಿವ ಶಿವಾನಂದ ನಾಯ್ಕ್, ಭಟ್ಕಳ ತಂಜಿಮ್ ಸಂಸ್ಥೆಯ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಹೈಕೋರ್ಟ್ ವಕೀಲ ನಾಗೇಂದ್ರ ನಾಯ್ಕ್, ಸುಪ್ರೀಂ ಕೋರ್ಟ್ ವಕೀಲ ಮಂಜುನಾಥ್, ನಾಗಯಕ್ಷೆ ದೇವಸ್ಥಾನದ ಧರ್ಮದರ್ಶಿ ಶ್ರೀ ರಾಮದಾಸ ಪ್ರಭು ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು, ನ್ಯಾಯಮೂರ್ತಿ ಸಂತೋಷ್ ಹೆಗಡೆ ಅವರೊಂದಿಗೆ ವಿದ್ಯಾರ್ಥಿಗಳ ಸಂವಾದ, ರಾಜ್ಯದ ಸಾಧಕರಿಗೆ ರಾಜ್ಯ ಪ್ರಶಸ್ತಿ ಪ್ರದಾನ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಾಗೂ ಪತ್ರಿಕಾ ವಿತರಕರಿಗೆ ವಿಶೇಷ ಗೌರವ ಪ್ರಶಸ್ತಿ ನೀಡಲಾಗುವುದು.ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯದ ಕಾ.ನಿ.ಪ ಧ್ವನಿ ಸಂಘದ ರಾಜ್ಯದ 28 ಜಿಲ್ಲೆಗಳಿಂದ ಸುಮಾರು 200 ಕ್ಕೂ ಹೆಚ್ಚು ತಾಲುಕುಗಳಿಂದ 1000 ಸಾವಿರಕ್ಕೂ ಹೆಚ್ಚು ಪದಾಧಿಕಾರಿಗಳು ಆಗಮಿಸುತ್ತಿದ್ದಾರೆ.

