
ಭಟ್ಕಳ:ಪಾಂಡಿಚೇರಿಯಲ್ಲಿ ಇತ್ತೀಚೆಗೆ ನಡೆದ 21ನೇ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೆಟಿಕ್ ಸ್ಪರ್ಧೆಯಲ್ಲಿ ಕುಂದಾಪುರದ ಓಕ್ವುಡ್ ಇಂಡಿಯನ್ ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಕು. ನಮಸ್ಯಾ ಸುರೇಶ್ ಅವರು ಅತ್ಯುತ್ತಮ ಸಾಧನೆ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಜೆಡ್ ಆರ್ ಎಲ್ ವಿಭಾಗದಲ್ಲಿ ಸ್ಪರ್ಧಿಸಿದ್ದ ನಮಸ್ಯಾ, ದೇಶದ ವಿವಿಧ ರಾಜ್ಯಗಳಿಂದ ಭಾಗವಹಿಸಿದ್ದ ಸುಮಾರು 2200 ವಿದ್ಯಾರ್ಥಿಗಳ ನಡುವೆ ಪ್ರಥಮ ರನ್ನರ್ ಅಪ್ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಅವರ ಈ ಸಾಧನೆ ಶಾಲೆ, ಶಿಕ್ಷಕರು ಹಾಗೂ ಪೋಷಕರಿಗೆ ಹೆಮ್ಮೆಯ ವಿಷಯವಾಗಿದೆ.
ಈ ಯಶಸ್ಸಿನ ಹಿಂದೆ ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಕುಂದಾಪುರ ಕೇಂದ್ರದ ಮುಖ್ಯಸ್ಥ ಪ್ರಸನ್ನ ಕೆ.ಬಿ ಅವರ ಮಾರ್ಗದರ್ಶನ ಹಾಗೂ ಬೋಧಕರಾದ ಮಹಾಲಕ್ಷ್ಮಿ ಮತ್ತು ದೀಪಾ ಅವರ ಸಮರ್ಪಿತ ತರಬೇತಿ ಪ್ರಮುಖ ಪಾತ್ರ ವಹಿಸಿದೆ.

ಕು. ನಮಸ್ಯಾ ಅವರು ಭಟ್ಕಳದ ಹಿರಿಯ ಪತ್ರಕರ್ತ ಹಾಗೂ ಭಟ್ಕಳ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಸುರೇಶ್ ನಾಯ್ಕ ಮೂಡಭಟ್ಕಳ ಮತ್ತು ಕುಂದಾಪುರ ಬಂಡಾರ್ಕಸ್ ಕಾಲೇಜಿನ ಉಪನ್ಯಾಸಕಿ ಸುಮಲತಾ ಸುರೇಶ್ ಅವರ ಪುತ್ರಿಯಾಗಿದ್ದಾರೆ.

