50000 ಸಾವಿರ ರೂಪಾಯಿ ಲಂಚ ಪಡೆಯುವಾಗ ರೆಡ್ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ
ಎಸಿಪಿ ಜೀಪ್ ಡ್ರೈವರ್ ಹಾಗೂ ಹೆಡ್ ಕಾನ್ಸ್ಟೇಬಲ್
ಬೆಂಗಳೂರು-ಬೆಂಗಳೂರಿನ ಪೀಣ್ಯದಲ್ಲಿ ಎಸಿಪಿ ಜೀಪ್ ಡ್ರೈವರ್ ಹಾಗೂ ಹೆಡ್ ಕಾನ್ಸ್ಟೇಬಲ್ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಪೀಣ್ಯ ಎಸಿಪಿ ಜೀಪ್ ಡ್ರೈವರ್ ನಾಗರಾಜ್ ಹಾಗೂ ಪೀಣ್ಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಗಂಗಹನುಮಯ್ಯ 50 ಸಾವಿರ ಹಣ ಪಡೆಯುವಾಗ ಲಾಕ್ ಆಗಿದ್ದಾರೆ.
ಇನ್ಸ್ಪೆಕ್ಟರ್ ವಿಜಯಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿ ನಗದು ಸಮೇತ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಸುಂಕದಕಟ್ಟೆಯ ಮಾರುತಿನಗರದ ಚೇತನ್ ಎಂಬುವವರು ಗ್ಯಾಸ್ ಸಿಲಿಂಡರ್ ಗೋದಾಮು ತೆರೆಯಲು ಅನುಮತಿಗಾಗಿ ಅರ್ಜಿ ಸಲ್ಲಿಸಿದ್ದರು
ಅನುಮತಿ ಪತ್ರ ನೀಡಲು 2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ದೂರು ಬಂದಿತ್ತು. ಡಿವೈಎಸ್ಪಿ ಉಮಾದೇವಿ ಅವರ ನೇತೃತ್ವದಲ್ಲಿ ನಡೆದ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ 50 ಸಾವಿರ ರೂ. ಲಂಚ ಪಡೆಯುವಾಗ ಹೆಡ್ಕಾನ್ಸ್ಟೆಬಲ್ ಹಾಗೂ ಜೀಪ್ ಚಾಲಕ ಸಿಕ್ಕಿಬಿದ್ದಿದ್ದಾರೆ.ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದು ಮುಂದಿನ ಹಂತದ ತನಿಖೆ ನಡೆಸುತ್ತಿದ್ದಾರೆ.