• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, October 21, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಉತ್ತರ ಕನ್ನಡ ಜನರು ಯಾವುದೇ ಕಾರಣಕ್ಕೂ ಹಣ ನೀಡಿ ಕುಡಿಯುವ ನೀರು ಪಡೆಯಬಾರದು, ಪ್ರತಿಯೊಬ್ಬರಿಗೂ ಅಧಿಕಾರಿಗಳು ನೀರು ಪೂರೈಕೆ ಮಾಡಲಿದ್ದಾರೆ:ಸಚಿವ ಮಾಂಕಳ ವೈದ್ಯ

Kannada News Desk by Kannada News Desk
March 26, 2025
in ಉತ್ತರ ಕನ್ನಡ
0
ಉತ್ತರ ಕನ್ನಡ ಜನರು ಯಾವುದೇ ಕಾರಣಕ್ಕೂ ಹಣ ನೀಡಿ ಕುಡಿಯುವ ನೀರು ಪಡೆಯಬಾರದು, ಪ್ರತಿಯೊಬ್ಬರಿಗೂ ಅಧಿಕಾರಿಗಳು ನೀರು ಪೂರೈಕೆ ಮಾಡಲಿದ್ದಾರೆ:ಸಚಿವ ಮಾಂಕಳ ವೈದ್ಯ
0
SHARES
346
VIEWS
WhatsappTelegram Share on FacebookShare on TwitterLinkedin

 


ಕಾರವಾರ-ಉತ್ತರ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿ ಸರ್ಕಾರ ಸಾವಿರ ಕೋಟಿ ರೂ ವೆಚ್ಚದ ಕಾಮಗಾರಿ ನಡೆಸುತ್ತಿದೆ. ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

`ಜನರು ಯಾವುದೇ ಕಾರಣಕ್ಕೂ ಹಣ ನೀಡಿ ಕುಡಿಯುವ ನೀರು ಪಡೆಯಬಾರದು. ಪ್ರತಿಯೊಬ್ಬರಿಗೂ ಅಧಿಕಾರಿಗಳು ನೀರು ಪೂರೈಕೆ ಮಾಡಲಿದ್ದಾರೆ. ಸಾರ್ವಜನಿಕರಿಗೆ ನೀರು ಪೂರೈಕೆ ಮಾಡಲು ಹಣಕಾಸಿನ ಯಾವುದೇ ಕೊರತೆಯಾಗದಂತೆ ಕ್ರಮ ಜರುಗಿಸಲಾಗುತ್ತದೆ. ಖಾಸಗಿ ವ್ಯಕ್ತಿಗಳು ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವೆ’ ಎಂದು ಎಚ್ಚರಿಸಿದರು.

`ಈ ಬಾರಿಯ ಬೇಸಿಗೆಯಲ್ಲಿ ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಕುಡಿಯುವ ನಿರಿನ ಸಮಸ್ಯೆ ಆಗದಂತೆ ಎಚ್ಚರಿಕೆವಹಿಸಬೇಕು. ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಮುನ್ನಚ್ಚರಿಕಾ ಕ್ರಮ ಜರುಗಿಸಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. `ಉತ್ತರಕ ಕನ್ನಡ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಅನೇಕ ಯೋಜನೆಗಳನ್ನು ಕೈಗೊಂಡಿದ್ದು, ಈಗಾಗಲೇ 1000 ಕೋಟಿ ರೂಪಾಯಿಗೂ ಅಧಿಕ ವೆಚ್ಚದಲ್ಲಿ ಜಿಲ್ಲೆಯಾದ್ಯಂತ ಕುಡಿಯುವ ನೀರಿನ ಕಾಮಗಾರಿಗಳು ನಡೆಯುತ್ತಿದೆ. ಈಗಾಗಲೇ ಕೆಲವು ಗ್ರಾಮಗಳಿಗೆ ಕುಡಿಯುವ ನೀರಿನ ಸೌಲಭ್ಯ ಪೂರೈಸಲಾಗಿದೆ’ ಎಂದವರು ವಿವರಿಸಿದರು.

`ಜಿಲ್ಲೆಯಲ್ಲಿ ಕಳೆದ ಬಾರಿ ಶೇ 49ರಷ್ಟು ಹೆಚ್ಚು ಮಳೆಯಾದರೂ ಕೆಲವು ಪ್ರದೇಶದಲ್ಲಿ ಈ ಬಾರಿ ಕುಡಿಯುವ ನೀರಿನ ಸಮಸ್ಯೆ ಸಂಭವಿಸುವ ಸೂಚನೆಯಿದ್ದು, ಅದಕ್ಕಾಗಿ ಸೂಕ್ತ ಮುನ್ನೆಚರಿಕೆ ಕ್ರಮಕೈಗೊಳ್ಳಬೇಕು’ ಎಂದವರು ಹೇಳಿದ್ದಾರೆ. `ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದಲ್ಲಿ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ಕುಡಿಯುವ ನೀರಿನ ಸಮಸ್ಯೆಗಳ ಕುರಿತಂತೆ ದೂರು ನೀಡಲು ನಗರ ಸ್ಥಳೀಯ ಸಂಸ್ಥೆ, ತಾಲೂಕು ಕಚೇರಿ ಜಿಲ್ಲಾ ಪಂಚಾಯತ್ ಮತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ’ ಎಂದವರು ಹೇಳಿದರು.

`ಜಿಲ್ಲೆಯ ಕರಾವಳಿ ಭಾಗದ ಐದು ತಾಲೂಕುಗಳಲ್ಲಿ ಉಪ್ಪು ನೀರು ಸಿಹಿ ನೀರಿನ ಜೊತೆ ಮಿಶ್ರಣವಾಗುವುದನ್ನು ತಡೆಯುವ ಪ್ರಯತ್ನ ನಡೆದಿದೆ. ಸಣ್ಣ ಸಣ್ಣ ಹಳ್ಳ ಮತ್ತು ನದಿಗಳಿಗೆ ಕಿಂಡಿ ಆಣೆಕಟ್ಟುಗಳನ್ನು ನಿರ್ಮಿಸಿ ಮಳೆಗಾಲದಲ್ಲಿ ಗೇಟ್ ತೆಗೆಯುವ ಮತ್ತು ಬೇಸಿಗೆಗಾಲದಲ್ಲಿ ಗೇಟ್ ಮುಚ್ಚುವ ಮೂಲಕ ಸಿಹಿ ನೀರಿಗೆ ಉಪ್ಪು ನೀರು ಮಿಶ್ರಣವಾಗದ ರೀತಿಯಲ್ಲಿ ಯೋಜನೆ ರೂಪಿಸಲಾಗಿದೆ’ ಎಂದರು. `ನಗರ ಸ್ಥಳೀಯ ಸಂಸ್ಥೆಗಳು ಮತ್ತು ನಗರ ನಿರು ಸರಬರಾಜು ಮಂಡಳಿ ಮೂಲಕ ಈಗಾಗಲೇ ಅನುದಾನ ಬಿಡುಗಡೆ ಮಾಡಲಾಗಿದ್ದು, ಮುಂದಿನ 2 ವರ್ಷಗಳಲ್ಲಿ ಕುಡಿಯುವ ನೀರಿನ ಸರಬರಾಜುವಿನಲ್ಲಿ ವ್ಯತ್ಯಯವಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ದಿನದ 24 ಗಂಟೆಯು ಕುಡಿಯುವ ನೀರು ಪೂರೈಕೆಗೆ ಯೋಜನೆ ರೂಪಿಸಲಾಗಿದೆ’ ಎಂದರು.

ಕುಡಿಯುವ ನೀರಿನ ಕಾಮಗಾರಿಗಳಿಗೆ ವಿದ್ಯುತ್ ಸಂಪರ್ಕಗಳನ್ನು ತಕ್ಷಣದಲ್ಲಿ ನಿಡುವಂತೆ ಹೆಸ್ಕಾಂ ಅಧಿಕಾರಿಗಳಿಗೆ ಮತ್ತು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಶೀಘ್ರವಾಗಿ ಅನುಮತಿಗಳನ್ನು ನಿಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

25 ವರ್ಷಗಳ ನಂತರ ಐತಿಹಾಸಿಕ ಕ್ಷೇತ್ರ ಗೋಕರ್ಣಕ್ಕೆ ಭೇಟಿ ನೀಡಿ ಆತ್ಮಲಿಂಗ ದರ್ಶನ ಪಡೆದ ಗೃಹ ಸಚಿವ ಜಿ ಪರಮೇಶ್ವರ್

Next Post

ಕತಗಾಲನಲ್ಲಿ ಮಣ್ಣಿನ ಆರೋಗ್ಯ ನೀರಿನ ಸಂರಕ್ಷಣೆ ಜಲಮರುಪೂರಣ ಮತ್ತು ವಿದ್ಯುತ್ ದಕ್ಷತಾ ಪಂಪ್‌ಸೆಟ್ ಗಳ ಕುರಿತಾದ ‌ಮಾಹಿತಿ ಕಾರ್ಯಗಾರ ಯಶಸ್ವಿ

Kannada News Desk

Kannada News Desk

Next Post
ಕತಗಾಲನಲ್ಲಿ ಮಣ್ಣಿನ ಆರೋಗ್ಯ ನೀರಿನ ಸಂರಕ್ಷಣೆ ಜಲಮರುಪೂರಣ ಮತ್ತು ವಿದ್ಯುತ್ ದಕ್ಷತಾ ಪಂಪ್‌ಸೆಟ್ ಗಳ ಕುರಿತಾದ ‌ಮಾಹಿತಿ ಕಾರ್ಯಗಾರ ಯಶಸ್ವಿ

ಕತಗಾಲನಲ್ಲಿ ಮಣ್ಣಿನ ಆರೋಗ್ಯ ನೀರಿನ ಸಂರಕ್ಷಣೆ ಜಲಮರುಪೂರಣ ಮತ್ತು ವಿದ್ಯುತ್ ದಕ್ಷತಾ ಪಂಪ್‌ಸೆಟ್ ಗಳ ಕುರಿತಾದ ‌ಮಾಹಿತಿ ಕಾರ್ಯಗಾರ ಯಶಸ್ವಿ

Please login to join discussion

ಕ್ಯಾಲೆಂಡರ್

March 2025
MTWTFSS
 12
3456789
10111213141516
17181920212223
24252627282930
31 
« Feb   Apr »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d