• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, December 7, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಾಂಗ್ರೆಸ್ ಸರ್ಕಾರದಲ್ಲಿ ದೇಶದ್ರೋಹಿಗಳಿಗೆ ಪ್ರೋತ್ಸಾಹ ಮತ್ತು ರಕ್ಷಣೆ ಸಿಗುತ್ತಿದೆ – ಭಟ್ಕಳದ ಮಾಜಿ ಶಾಸಕ ಸುನೀಲ್ ನಾಯ್ಕ

Kannada News Desk by Kannada News Desk
April 25, 2024
in ರಾಜ್ಯ ಸುದ್ದಿ
0
ಕಾಂಗ್ರೆಸ್ ಸರ್ಕಾರದಲ್ಲಿ ದೇಶದ್ರೋಹಿಗಳಿಗೆ ಪ್ರೋತ್ಸಾಹ ಮತ್ತು ರಕ್ಷಣೆ ಸಿಗುತ್ತಿದೆ – ಭಟ್ಕಳದ ಮಾಜಿ ಶಾಸಕ ಸುನೀಲ್ ನಾಯ್ಕ
0
SHARES
630
VIEWS
WhatsappTelegram Share on FacebookShare on TwitterLinkedin

ಕಾಂಗ್ರೆಸ್ ಸರ್ಕಾರದಲ್ಲಿ ದೇಶದ್ರೋಹಿಗಳಿಗೆ ಪ್ರೋತ್ಸಾಹ ಮತ್ತು ರಕ್ಷಣೆ ಸಿಗುತ್ತಿದೆ – ಭಟ್ಕಳದ ಮಾಜಿ ಶಾಸಕ ಸುನೀಲ್ ನಾಯ್ಕ

ಭಟ್ಕಳ: ನೇಹಾ ಕೊಲೆ ಪ್ರಕರಣದಲ್ಲಿ ವಿಡಿಯೋ ಚಿತ್ರೀಕರಣ ಸಿಗದಿದ್ದರೆ ಕಾಂಗ್ರೆಸ್ ಕೊಲೆ ಅಲ್ಲ ಅದು ಸಹಜ ಸಾವು ಎನ್ನುತ್ತಿತ್ತು ಎಂದು ಬಿಜೆಪಿ ಮಾಜಿ ಶಾಸಕ ಸುನೀಲ ನಾಯ್ಕ ಹೇಳಿದ್ದಾರೆ.ಅವರು ಭಟ್ಕಳ ವಿಶ್ವ ಹಿಂದೂ ಪರಿಷತ್ ಮತ್ತು ಹಿಂದೂ ಸಂಘಟನೆ ನೇತೃತ್ವದಲ್ಲಿ ಬ್ರಹತ್ ಪ್ರತಿಭಟನೆ ನಡೆಸಿ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿ ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಇಂಥ ಪ್ರಕರಣಗಳು ಹೆಚ್ಚಾಗಿ ಮರುಕಳಿಸುತ್ತಿವೆ . ಕಳೆದ 5, ವರ್ಷ ಭಾರತೀಯ ಜನತಾ ಪಾರ್ಟಿ ಅಧಿಕಾರದಲ್ಲಿರುವಾಗ ನಾನು ಶಾಸಕನಾಗಿರುವಾಗ ಇಂಥ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದು 9 ತಿಂಗಳಿನಲ್ಲಿ ಇಂಥ ಕೊಲೆಗಳು ಹೆಚ್ಚಾಗಿ ನಡೆಯುತ್ತಿರುವುದು ಕಂಡು ಬಂದಿದೆ. ಇದಕ್ಕೆ ಸಂಪೂರ್ಣ ಸಹಕಾರ ಕೊಟ್ಟಿರುವುದು ಕಾಂಗ್ರೆಸ್ ಸರ್ಕಾರವಾಗಿದೆ. ಇದಕ್ಕೆ ನೇರವಾಗಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇರ ಹೊಣೆಯಾಗಿದ್ದಾರೆ. ನೇಹಾ ಕೊಲೆ ಪ್ರಕರಣದಲ್ಲಿ ವಿಡಿಯೋ ಚಿತ್ರೀಕರಣ ಇಲ್ಲದ ಪಕ್ಷದಲ್ಲಿ ಕಾಂಗ್ರೆಸ್ನವರು ಇದನ್ನು ಕೊಲೆಯೇ ಅಲ್ಲ ಎಂದು ಹೇಳುತ್ತಿದ್ದರು.

ಕಳೆದ ವಿಧಾನಸಭೆ ಕಲಾಪ ನಡೆಯುವ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದ ವ್ಯಕ್ತಿಯನ್ನು ಬಂಧಿಸದೆ ಪಾಕಿಸ್ತಾನ ಜಿಂದಾಬಾದ್ ಎಂದು ಹೇಳಲಿಲ್ಲ ಎಂದು ಹೇಳಿದ ಕಾಂಗ್ರೆಸ್ ಸರ್ಕಾರ ಸ್ನೇಹ ಕೊಲೆ ಪ್ರಕರಣದಲ್ಲಿ ವಿಡಿಯೋ ಚಿತ್ರೀಕರಣ ಇಲ್ಲದಿದ್ದರ ಇದು ಕೊಲೆಯಲ್ಲಿ ಎಂದು ಹೇಳುತ್ತಿದ್ದರು
ಕಾಂಗ್ರೆಸ್ ಸರ್ಕಾರ ಇಂಥ ದೇಶದ್ರೋಹಿಗಳಿಗೆ ದುಷ್ಟರಿಗೆ ಪ್ರೋತ್ಸಾಹ ನೀಡುತ್ತಾ ಬಂದಿರುವ ಸರ್ಕಾರವಾಗಿದೆ. ಜನರಿಗೆ ನ್ಯಾಯ ಕೊಡಿಸಲು ಭಾರತೀಯ ಜನತಾ ಪಾರ್ಟಿ ಜನರೊಂದಿಗೆ ನಿಲ್ಲುತ್ತದೆ ಸಂಪೂರ್ಣ ನ್ಯಾಯ ಕೊಡಿಸಲು ಭಾರತೀಯ ಜನತಾ ಪಾರ್ಟಿಯೊಂದಿಗೆ ನಾನು ಇದ್ದೇನೆ ವಿಶ್ವ ಹಿಂದೂ ಪರಿಷತ್ ಸಂಘಟನೆ ಮೂಲಕ ಎಸಿ ಅವರಿಗೆ ಮನವಿ ಕೊಡುವ ಕೆಲಸ ಮಾಡುತಿದ್ದೇವೆ ಎಂದರು.

ನಂತರ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯ್ಕ ಆಸರಕೇರಿ ಮಾತನಾಡಿ ಹಿಂದೂ ಧರ್ಮದ ಹೆಣ್ಣು ಮಕ್ಕಳು ಕಾಲೇಜುಗಳಿಗೆ ಹೋಗಿ ಓದುವುದು ಕಷ್ಟದ ಸಂಗತಿಯಾಗಿದೆ ಜಿಹಾದಿ ಮನಸ್ಥಿತಿಯವರು ನಮ್ಮ ಯುವತಿಯರನ್ನು ಪ್ರೀತಿಯಲ್ಲಿ ಬಿಳಿಸಿ ಟಾರ್ಗೆಟ್ ಮಾಡಿ ಮತಾಂತರ ಮಾಡುತ್ತಿದ್ದಾರೆ ಅದಕ್ಕೆ ಒಪ್ಪದಿದ್ದರೆ ಕೊಲೆ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾರೆ .ಇದಕ್ಕೆ ಕಾಂಗ್ರೆಸ್ ಸರ್ಕಾರ ಬೆಂಬಲವಾಗಿ ನಿಂತಿದೆ. ಇಂಥ ನೀಚ ಕೃತ್ಯ ನಡೆಸುವವರಿಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದೆ .
ಪ್ರತಿ ವರ್ಷ ಆರು ತಿಂಗಳಿಗೊಮ್ಮೆ ಇಂಥ ಕೊಲೆ ಪ್ರಕರಣಗಳು ನಮ್ಮ ರಾಜ್ಯದಲ್ಲಿ ನಡೆಯುತ್ತಾ ಬಂದಿದೆ. ಸರ್ಕಾರದ ಮುಸ್ಲಿಂ ತುಷ್ಟಿಕರಣ ನೀತಿಯಿಂದ ಹಿಂದುಗಳ ಮೇಲೆ ಹಲ್ಲೆ ಹಾಗೂ ಕೊಲೆಯಂತ ಪ್ರಕರಣಗಳು ಮೇಲಿಂದ ಮೇಲೆ ನಡೆಯುತ್ತಾ ಬಂದಿವೆ.ಹಿಂದುಗಳು ಹಿಂಸೆ ಅನುಭವಿಸುತ್ತಾ ಬಂದಿದ್ದಾರೆ.

ಮತಾಂದ ಶಕ್ತಿಗಳ ಹತ್ತಿಕ್ಕುವಲ್ಲಿ ಪೋಲಿಸ್ ಇಲಾಖೆ ಮೃದು ಧೋರಣೆಯನ್ನು ತೋರುತ್ತಿದೆ. ಇಲ್ಲಿ ನಾವು ಎಷ್ಟು ಸನ್ನಿವೇಶಗಳನ್ನು ನೋಡಿ ಕಣ್ಣಿದ್ದು ಕುರುಡರಂತೆ ಇರಬೇಕಾದ ಪರಿಸ್ಥಿತಿ ಬಂದಿದೆ. ಹಿಂದುಗಳು ಪ್ರತಿಯೊಬ್ಬರೂ ಇದರ ಬಗ್ಗೆ ಎಚ್ಚರಿಕೆಗೊಳ್ಳಬೇಕಾಗಿದೆ.
ಹುಬ್ಬಳ್ಳಿಯಲ್ಲಿ ನಡೆದ ಘಟನೆಗಳು ಭಟ್ಕಳದಲ್ಲೂ ಮರುಕಳಿಸುವ ಸಾಧ್ಯತೆ ಇದೆ. ನಮ್ಮ ಮನೆಯ ಯುವತಿಯರಿಗೆ ನಾವು ಬುದ್ದಿ ಹೇಳಬೇಕು ಅನ್ಯ ಧರ್ಮಿಯರ ಅಂಗಡಿಗಳಿಗೆ ಕೆಲಸಕ್ಕೆ ಯುವತಿಯರನ್ನು ಕಳಿಸುತ್ತಿದ್ದೀರಿ ಎಷ್ಟು ಯುವತಿಯರು ಕಣ್ಮರೆಯಾಗುತ್ತಿದ್ದಾರೆ. ನಿಮ್ಮ ಮನೆಯ ಬಾಲಕಿಯರ ರಕ್ಷಣೆ ನಿಮ್ಮ ಕೈಯಲ್ಲಿದೆ ಬಡತನ ನಿರುದ್ಯೋಗ ಇರಬಹುದು ಅನ್ಯ ಧರ್ಮೀಯರ ಅಂಗಡಿಗಳಲ್ಲಿ ಕೆಲಸ ಅದು ನಮಗೆ ಅನಿವಾರ್ಯವಾಗಬಾರದು.

ಭಟ್ಕಳದಲ್ಲಿ ಎಷ್ಟು ಅನಧಿಕೃತ ಚಟುವಟಿಕೆಗಳು ನಡೆಯುತ್ತಿವೆ ಅಸಂಖ್ಯಾತ ಕೆಲಸಗಳಿವೆ ಅವರನ್ನು ರಾಜ್ಯ ಮರ್ಯಾದೆಯಿಂದ ನೋಡುತ್ತೀರಿ. ಆದರೆ ನೀವು ಅದೆಲ್ಲವನ್ನು ಬಿಟ್ಟು ಹಿಂದು ಕಾರ್ಯಕರ್ತರ ಮೇಲೆ ತಾತ್ಸಾರದಿಂದ ನೋಡುತ್ತೀರಿ ಮತ್ತು ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸುತ್ತಿದ್ದೀರಿ ಇಂಥ ಪ್ರವೃತ್ತಿಯನ್ನು ಬಿಡಬೇಕಾಗಿದೆ ಎಂದ ಅವರ ಬೇರೆ ರಾಜ್ಯದಲ್ಲಿ ಅಪರಾಧ ಕೃತ್ಯ ನಡೆಸಿ ಭಟ್ಕಳದಲ್ಲಿ ಬಂದು ನೆಲೆಸಿದ್ದವರ ಬಗ್ಗೆ ಭಟ್ಕಳ ಪೊಲೀಸರು ಗಮನ ಹರಿಸಿ ಅವರನ್ನು ಗಡಿಪಾರು ಮಾಡುವ ಬದಲು ರಾಷ್ಟ್ರದ ಹಿತಕ್ಕಾಗಿ ಹಾಗೂ ಹಿಂದೂಗಳಿಗೆ ಅನ್ಯಾಯವಾದ ವೇಳೆ ಹೋರಾಟ ಮಾಡುವರನ್ನು ಗಡಿಪಾರು ಮಾಡುವುದಲ್ಲ. 1993 ರಿಂದ ಹಿಂದೂ ಕಾರ್ಯಾಕರ್ತರಿಗೆ ಹಾಗೂ ಹೋರಾಟಗಾರರಿಗೆ ಇದು ಹೊಸತಲ್ಲ. ಹಿಂದೂಗಳು ಇರುವುದರಿಂದ ಪೊಲೀಸರು ಭಟ್ಕಳದಲ್ಲಿ ಸುಗಮವಾಗಿ ಕರ್ತವ್ಯ ನಿರ್ವಹಿಸುತ್ತಿದ್ದೀರಾ ಎಂದು ಸ್ಪಷ್ಟವಾಗಿ ಹೇಳುತ್ತಿದ್ದೇನೆ. ಹಿಂದೂಗಳಿಂದ ಯಾವುದೇ ಪೊಲೀಸರಿಗೆ ತೊಂದರೆಯಾಗಿಲ್ಲ. ಕಳೆದ ಬಾರಿ ಗೋ ರಕ್ಷಣೆ ಮಾಡುವ ವೇಳೆಯಲ್ಲಿ ಕರ್ತವ್ಯ ನಿರತ ಪೊಲೀಸರ ಮೇಲೆ ಗಾಡಿ ಹತ್ತಿದ್ದ ವೇಳೆ ನಿಮ್ಮ ಬೆಂಬಲಕ್ಕೆ ನಿಂತಿದ್ದು ಇದೆ ನಮ್ಮ ಭಟ್ಕಳದ ಹಿಂದೂ ಸಮುದಾಯದವರು ಎಂದು ನೆನಪಿಡಿ ಎಂದು ಖಡಕ್ ಎಚ್ಚರಿಕೆ ನೀಡಿದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಯಕ್ಷಗಾನದ ಲೋಕದ ಗಾನಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ನಿಧನ

Next Post

ಪ್ರಧಾನಿ ಮೋದಿಯರು ಮತ್ತು ಬಿಜೆಪಿಗರು ಮಾತು ಕೊಟ್ಟಂತೆ ೧೫ ಲಕ್ಷ ಕೊಟ್ಟು ಮತ ಕೇಳಲು ಬರಲಿ- ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಳ ಎಸ್ ವೈದ್ಯ

Kannada News Desk

Kannada News Desk

Next Post
ಪ್ರಧಾನಿ ಮೋದಿಯರು ಮತ್ತು ಬಿಜೆಪಿಗರು ಮಾತು ಕೊಟ್ಟಂತೆ ೧೫ ಲಕ್ಷ ಕೊಟ್ಟು ಮತ ಕೇಳಲು ಬರಲಿ- ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಳ ಎಸ್ ವೈದ್ಯ

ಪ್ರಧಾನಿ ಮೋದಿಯರು ಮತ್ತು ಬಿಜೆಪಿಗರು ಮಾತು ಕೊಟ್ಟಂತೆ ೧೫ ಲಕ್ಷ ಕೊಟ್ಟು ಮತ ಕೇಳಲು ಬರಲಿ- ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಾಂಕಳ ಎಸ್ ವೈದ್ಯ

Please login to join discussion

ಕ್ಯಾಲೆಂಡರ್

April 2024
MTWTFSS
1234567
891011121314
15161718192021
22232425262728
2930 
« Mar   May »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d