• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, October 21, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಹಿಂದೂ ಧರ್ಮಕ್ಕೆ ಅಪಾಯ ಇರುವುದು ಬಿಜೆಪಿಗರಿಂದಲೇ ಹೊರತು ಬೇರಾರಿಂದಲೂ ಅಲ್ಲ – ಡಾ.ಅಂಜಲಿ ನಿಂಬಾಳ್ಕರ್

Kannada News Desk by Kannada News Desk
April 26, 2024
in ಉತ್ತರ ಕನ್ನಡ
0
ಹಿಂದೂ ಧರ್ಮಕ್ಕೆ ಅಪಾಯ ಇರುವುದು ಬಿಜೆಪಿಗರಿಂದಲೇ ಹೊರತು ಬೇರಾರಿಂದಲೂ ಅಲ್ಲ – ಡಾ.ಅಂಜಲಿ ನಿಂಬಾಳ್ಕರ್
0
SHARES
377
VIEWS
WhatsappTelegram Share on FacebookShare on TwitterLinkedin

ಹಿಂದೂ ಧರ್ಮಕ್ಕೆ ಅಪಾಯ ಇರುವುದು ಬಿಜೆಪಿಗರಿಂದಲೇ ಹೊರತು ಬೇರಾರಿಂದಲೂ ಅಲ್ಲ – ಡಾ.ಅಂಜಲಿ ನಿಂಬಾಳ್ಕರ್

ಹಳಿಯಾಳ: ಬಿಜೆಪಿಗರು ರಾಜಕೀಯ ಮಾಡುವುದಕ್ಕಾಗಿ ಯಾವ ದೇವರನ್ನೂ ಬಿಟ್ಟಿಲ್ಲ, ಯಾವ ಸಂತರ ಹೆಸರನ್ನೂ ಬಿಟ್ಟಿಲ್ಲ. ಹಿಂದೂ ಧರ್ಮಕ್ಕೆ ಅಪಾಯ ಇರುವುದು ಬಿಜೆಪಿಗರಿಂದಲೇ ಹೊರತು ಬೇರಾರಿಂದಲೂ ಅಲ್ಲ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ಹೇಳಿದರು.

ತೇರಗಾಂವ ಜಿಲ್ಲಾ ಪಂಚಾಯತ ವ್ಯಾಪ್ತಿಯ ಕಾಂಗ್ರೆಸ್ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಗರು ನಾವೇ ಹಿಂದುತ್ವ ರಕ್ಷಣೆ ಮಾಡುತ್ತಿರುವವರು ಎನ್ನುತ್ತಾರೆ. ಮೊಘಲರು, ಬ್ರಿಟಿಷರು ಬಂದಾಗಲೂ ಹಿಂದೂ ಧರ್ಮಕ್ಕೆ ತೊಂದರೆಯಾಗಲು ಯಾರೂ ಬಿಟ್ಟಿರಲಿಲ್ಲ. ಆದರೆ ಅಂಥ ಮೋಸ ಈಗ ಬಿಜೆಪಿಯಿಂದ ಆಗುತ್ತಿದೆ.‌ ಛತ್ರಪತಿ ಶಿವಾಜಿ, ಶ್ರೀರಾಮರಿಗೆ ಅಪಮಾನ ಮಾಡುತ್ತಿದ್ದಾರೆ. ರಾಮ ಯಾವತ್ತೂ ಸೀತಾ, ಲಕ್ಷ್ಮಣ, ಹನುಮಂತ ಸಮೇತ ಇರಬೇಕು. ಎಲ್ಲಾ ಮಂತ್ರಗಳಲ್ಲೂ ಸಿಯಾರಾಮ್ (ಸೀತಾರಾಮ್) ಎಂದೇ ಇರುತ್ತದೆ. ಆದರೆ ಬಿಜೆಪಿಗರು ಮಾತ್ರ ರಾಮನನ್ನ ಒಂಟಿಯಾಗಿಸಿದ್ದಾರೆ. ಮನೆ ನಡೆಸುವ ಹೆಂಡತಿ, ಹೆತ್ತ ತಾಯಿ ಹೆಣ್ಣು ಇವರಿಗೆ ಬೇಡವಾದರಾ? ಯುವಕರಿಗೆ ವಾಟ್ಸಪ್ ಯೂನಿವರ್ಸಿಟಿ ತೋರಿಸಿ ಇತಿಹಾಸ, ಧರ್ಮವನ್ನೂ ಹಾಳು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿಗರಿಂದ ನಮ್ಮ ಧರ್ಮ, ಸಂಸ್ಕೃತಿ, ರಕ್ಷಣೆ ಮಾಡಬೇಕಿದೆ. ನಾನು ಹಿಂದೂ ಧರ್ಮದಲ್ಲಿ ಹುಟ್ಟಿರಲು ನನಗೆ ಹೆಮ್ಮೆ ಇದೆ. ಬಿಜೆಪಿಗರಿಂದ ಹಿಂದುತ್ವದ ಪಾಠ ಕಲಿಬೇಕಿಲ್ಲ. ಶಿವಾಜಿಯವರು ಎಲ್ಲಾ ಜಾತಿಗಳು ಸೇರಿ ಹಿಂದೂ ಧರ್ಮ ಎಂದಿದ್ದರು. ಯಾವುದೇ ಒಂದು ಜಾತಿಗೆ ಸೀಮಿತವಾದುದಲ್ಲ. ಆ ಹಿಂದೂ ಧರ್ಮವನ್ನ ಬಿಜೆಪಿಗರೇ ಹಾಳು ಮಾಡುತ್ತಿದ್ದಾರೆ ಎಂದ ಅವರು, ಬಿಜೆಪಿಗರು ಕಾಂಗ್ರೆಸ್ ೭೦ ವರ್ಷದಲ್ಲಿ ಏನು ಮಾಡಿದೆ ಎಂದು ಕೇಳುತ್ತಾರೆ. ಆ ಪುಣ್ಯಾತ್ಮರಿಗೆ ಹೇಳಬೇಕು, ನೀವಿರುವ ಗುಜರಾತ್‌ಗೆ ನೀರು ಪೂರೈಸುವ ಬೃಹತ್ ಅಣೆಕಟ್ಟು ಕಟ್ಟಿದ್ದು ಕಾಂಗ್ರೆಸ್. ಆದರೆ ಇವರಿಂದ ಹಳ್ಳಿಗಳಲ್ಲಿ ಚಿಕ್ಕ ಚರಂಡಿಗಳನ್ನೂ ನಿರ್ಮಿಸಲಾಗುತ್ತಿಲ್ಲ. ಸುಳ್ಳು, ಜಾತಿ, ಧರ್ಮದ ಮೇಲೆ ಮತ ಕೇಳಲು ಬಂದಿಲ್ಲ. ಅಭಿವೃದ್ಧಿ ಕೆಲಸಗಳ ಮೇಲೆ ಮತ ಯಾಚಿಸಲು ಬಂದಿದ್ದೇನೆ. ಈ ಬಾರಿ ಒಂದು ಅವಕಾಶ ನನಗೆ ನೀಡಿ ಬದಲಾವಣೆ ನೋಡಿ ಎಂದರು.

ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಮಾತನಾಡಿ, ರಾಷ್ಟ್ರ ರಾಜ್ಯ, ತಾಲೂಕಿನ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ದೊಡ್ಡದು. ಆದರೂ ಮಹಿಳೆಯರಿಗೆ ಲೋಕಸಭಾ ಟಿಕೆಟ್ ಸಿಗುವುದು ತುಂಬಾ ಕಷ್ಟವಾಗಿದೆ. ಉತ್ತರ ಕನ್ನಡ ಭಾಗದಲ್ಲಿ ಇದುವರೆಗೂ ಬಿಜೆಪಿ ಮಹಿಳೆಯರಿಗೆ ಒಮ್ಮೆಯೂ ಟಿಕೆಟ್ ನೀಡಿಲ್ಲ. ಆದರೆ ಕಾಂಗ್ರೆಸ್, ಗ್ಯಾರಂಟಿಯ ಜೊತೆಗೆ ಮಹಿಳಾ ಅಭ್ಯರ್ಥಿಯನ್ನ ನೀಡಿ ಮಹಿಳಾ ಸಬಲೀಕರಣಕ್ಕಾಗಿ ಪ್ರಯತ್ನಿಸುತ್ತಿದೆ. ಮಹಿಳೆಯರು ಕೂಡ ಗ್ಯಾರಂಟಿ ನೀಡಿ ನೆರವಾದ ಕಾಂಗ್ರೆಸ್ ಪರ ಮತ ಚಲಾಯಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೈತಾನ‌ ಬಾರ್ಬೋಜ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಸಂತೋಷ ರೇಣಕೆ, ರವಿ ತೋರಣಗಟ್ಟಿ, ಪುರಸಭೆ ಮಾಜಿ ಅಧ್ಯಕ್ಷ ಅಜರ್ ಬಸರಿಕಟ್ಟಿ, ಡಿ ವಾಯ್ ಡಾಂಗೆ ಮುಂತಾದವರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಲೋಕಸಭಾ ಚುನಾವಣೆ ಗೆಲುವಿಗೆ ಕಾಂಗ್ರೇಸ್ ಪಕ್ಷದಿಂದ ಸಾಂಘಿಕ ಹೋರಾಟ- ರವೀಂದ್ರ ನಾಯ್ಕ.

Next Post

ಅರಣ್ಯ ಭೂಮಿ ಹಕ್ಕು ನೀಡುವುದು ಜನಪ್ರತಿನಿಧಿಗಳ ಧರ್ಮ- ರಂಜಿತಾ ರವೀಂದ್ರ.

Kannada News Desk

Kannada News Desk

Next Post
ಅರಣ್ಯ ಭೂಮಿ ಹಕ್ಕು ನೀಡುವುದು ಜನಪ್ರತಿನಿಧಿಗಳ ಧರ್ಮ- ರಂಜಿತಾ ರವೀಂದ್ರ.

ಅರಣ್ಯ ಭೂಮಿ ಹಕ್ಕು ನೀಡುವುದು ಜನಪ್ರತಿನಿಧಿಗಳ ಧರ್ಮ- ರಂಜಿತಾ ರವೀಂದ್ರ.

Please login to join discussion

ಕ್ಯಾಲೆಂಡರ್

April 2024
MTWTFSS
1234567
891011121314
15161718192021
22232425262728
2930 
« Mar   May »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d