• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, May 29, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳ ದುರಂತ ಸಂತ್ರಸ್ತರಿಗೆ ₹1.85 ಕೋಟಿ ಪರಿಹಾರ ವಿತರಣೆ: ಅನಾಥ ಮಕ್ಕಳ ಮನೆ ನಿರ್ಮಾಣಕ್ಕೆ ಹೆಚ್ಚುವರಿ ನೆರವು ನೀಡಿದ ಶಾಸಕ ಮಂಕಾಳ ವೈದ್ಯ

Kannada News Desk by Kannada News Desk
May 29, 2026
in ಉತ್ತರ ಕನ್ನಡ
0
ಭಟ್ಕಳ ದುರಂತ ಸಂತ್ರಸ್ತರಿಗೆ ₹1.85 ಕೋಟಿ ಪರಿಹಾರ ವಿತರಣೆ: ಅನಾಥ ಮಕ್ಕಳ ಮನೆ ನಿರ್ಮಾಣಕ್ಕೆ ಹೆಚ್ಚುವರಿ ನೆರವು ನೀಡಿದ ಶಾಸಕ ಮಂಕಾಳ ವೈದ್ಯ
0
SHARES
57
VIEWS
WhatsappTelegram Share on FacebookShare on TwitterLinkedin

 

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿ ಸಮೀಪ ಸಂಭವಿಸಿದ್ದ ಕಪ್ಪೆಚಿಪ್ಪು ದುರಂತದಲ್ಲಿ ಮೃತಪಟ್ಟ 11 ಮಂದಿಯ ಕುಟುಂಬಗಳಿಗೆ ವಿವಿಧ ಮೂಲಗಳಿಂದ ಒಟ್ಟು ಸುಮಾರು ₹1.85 ಕೋಟಿ ಪರಿಹಾರ ವಿತರಣೆ ಮಾಡಲಾಗಿದೆ. ಸಂತ್ರಸ್ತರ ಮನೆಗಳಿಗೆ ಭೇಟಿ ನೀಡಿದ ಶಾಸಕ ಮಂಕಾಳ ಎಸ್. ವೈದ್ಯ ಹಾಗೂ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ ಅವರು ಕುಟುಂಬಗಳಿಗೆ ಪರಿಹಾರದ ಚೆಕ್‌ಗಳನ್ನು ಹಸ್ತಾಂತರಿಸಿ ಸಾಂತ್ವನ ಹೇಳಿದರು.


ಪ್ರತಿ ಕುಟುಂಬಕ್ಕೂ ₹16.50 ಲಕ್ಷಗಳ ಪರಿಹಾರ ನೀಡಲಾಗಿದ್ದು, ಇದರಲ್ಲಿ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ತಲಾ ₹5 ಲಕ್ಷದಂತೆ ಒಟ್ಟು ₹55 ಲಕ್ಷ ಹಾಗೂ ಮೀನುಗಾರಿಕೆ ಇಲಾಖೆಯಿಂದ ತಲಾ ₹10 ಲಕ್ಷದಂತೆ ಒಟ್ಟು ₹1.10 ಕೋಟಿ ಮಂಜೂರು ಮಾಡಲಾಗಿದೆ. ಇದಕ್ಕೆ ಹೆಚ್ಚುವರಿಯಾಗಿ ಶಾಸಕ ಮಂಕಾಳ ವೈದ್ಯ ಅವರು ತಮ್ಮ ವೈಯಕ್ತಿಕ ನಿಧಿಯಿಂದ ಪ್ರತಿ ಕುಟುಂಬಕ್ಕೆ ₹1 ಲಕ್ಷದಂತೆ ಒಟ್ಟು ₹11 ಲಕ್ಷ ನೆರವು ನೀಡಿದ್ದಾರೆ. ಜೊತೆಗೆ ಜನತಾ ಕೋ-ಆಪರೇಟಿವ್ ಬ್ಯಾಂಕ್ ವತಿಯಿಂದ ತಲಾ ₹50 ಸಾವಿರದಂತೆ ₹5.50 ಲಕ್ಷ ವಿತರಿಸಲಾಗಿದೆ.
ಈ ದುರ್ಘಟನೆಯಲ್ಲಿ ಮೃತಪಟ್ಟ ಲಕ್ಷ್ಮಿ ಶಿವರಾಮ ನಾಯ್ಕ ಅವರ ಕುಟುಂಬದ ಪರಿಸ್ಥಿತಿ ವಿಶೇಷವಾಗಿ ಮನಕಲಕುವಂತಿತ್ತು. ಕುಟುಂಬವು ಈಗಾಗಲೇ ತಂದೆಯನ್ನು ಕಳೆದುಕೊಂಡಿದ್ದು, ತಾಯಿಯ ಸಾವಿನ ಬಳಿಕ ನಾಲ್ವರು ಮಕ್ಕಳು ಆಶ್ರಯವಿಲ್ಲದ ಸ್ಥಿತಿಗೆ ತಲುಪಿದ್ದಾರೆ. ಈ ಹಿನ್ನೆಲೆ ಶಾಸಕ ಮಂಕಾಳ ವೈದ್ಯ ಅವರು ಮಕ್ಕಳಿಗಾಗಿ ಮನೆ ನಿರ್ಮಿಸಲು ತಮ್ಮ ವೈಯಕ್ತಿಕ ನೆರವಿನಿಂದ ₹4 ಲಕ್ಷ ಸಹಾಯ ಘೋಷಿಸಿದ್ದಾರೆ. ಸರ್ಕಾರದ ವತಿಯಿಂದಲೂ ಮನೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.


ಘಟನೆಯ ಕುರಿತು ಮಾತನಾಡಿದ ಮಂಕಾಳ ವೈದ್ಯ, “ಜನರ ದುಃಖದಲ್ಲಿ ಜೊತೆ ನಿಲ್ಲುವುದು ನನ್ನ ಕರ್ತವ್ಯ. ಮೃತಪಟ್ಟವರನ್ನು ಮರಳಿ ತರಲು ಸಾಧ್ಯವಿಲ್ಲ, ಆದರೆ ಕುಟುಂಬಗಳಿಗೆ ಸಹಾಯ ಮಾಡುವ ಮೂಲಕ ಅವರಿಗೆ ಧೈರ್ಯ ತುಂಬಬಹುದು,” ಎಂದು ಹೇಳಿದರು. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು.
ಘಟನೆ ಬಳಿಕ ಆಸ್ಪತ್ರೆಯಲ್ಲಿ ಕಂಡ ದುಃಖದ ವಾತಾವರಣವನ್ನು ಸ್ಮರಿಸಿದ ಅವರು, ಇಂತಹ ಸಂದರ್ಭದಲ್ಲಿ ರಾಜಕೀಯ ಮಾಡದೇ ಸಂತ್ರಸ್ತ ಕುಟುಂಬಗಳಿಗೆ ನೆರವಾಗುವ ಮನೋಭಾವ ಎಲ್ಲರಲ್ಲೂ ಮೂಡಬೇಕು ಎಂದು ಅಭಿಪ್ರಾಯಪಟ್ಟರು.


ಈ ಸಂದರ್ಭದಲ್ಲಿ ಭಟ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವೆಂಕಟೇಶ್ ನಾಯ್ಕ್ ಸೇರಿದಂತೆ ಹಲವು ಗಣ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಸಂತ್ರಸ್ತ ಕುಟುಂಬಗಳಿಗೆ ಭಾರಿ ಪ್ರಮಾಣದ ನೆರವು ಒದಗಿಸಿರುವ ಕ್ರಮಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Previous Post

ಭಟ್ಕಳದಲ್ಲಿ ಮುರಿನಕಟ್ಟೆ ಧ್ವಂಸ ಖಂಡನೆ: ಮರುಸ್ಥಾಪನೆಗೆ ಆಗ್ರಹಿಸಿ ಭಾರೀ ಪ್ರತಿಭಟನೆ

Kannada News Desk

Kannada News Desk

Please login to join discussion

ಕ್ಯಾಲೆಂಡರ್

May 2026
MTWTFSS
 123
45678910
11121314151617
18192021222324
25262728293031
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d