ಬೆಂಗಳೂರು: ನಮ್ಮ ಕರ್ನಾಟಕ ಸೇನೆ ಸಂಘಟನೆಯ ಉಡುಪಿ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ರಾಜ್ಯಾಧ್ಯಕ್ಷ ಶ್ರೀ ಎಂ. ಬಸವರಾಜ ಪಡುಕೋಟೆ ಅವರು ಆದೇಶ ಹೊರಡಿಸಿ, ಉಡುಪಿ ಜಿಲ್ಲಾಧ್ಯಕ್ಷರಾಗಿ ಸುಜಯ್ ಪೂಜಾರಿ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಜಯಪ್ರಕಾಶ್ ಶೆಟ್ಟಿ ಅವರನ್ನು ನೇಮಕ ಮಾಡಿದ್ದಾರೆ. ಜೊತೆಗೆ ಸುಜಯ್ ಪೂಜಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಜವಾಬ್ದಾರಿಯನ್ನೂ ನೀಡಲಾಗಿದೆ.ಉಡುಪಿ ಜಿಲ್ಲಾ ಸಂಘಟನೆಯನ್ನು ಮತ್ತಷ್ಟು ಬಲಪಡಿಸಿ ಸಂಘಟನಾ ಚಟುವಟಿಕೆಗಳನ್ನು ಚುರುಕುಗೊಳಿಸುವಂತೆ ನೂತನ ಜಿಲ್ಲಾಧ್ಯಕ್ಷರಿಗೆ ಸೂಚನೆ ನೀಡಲಾಗಿದೆ.
ಇದೇ ವೇಳೆ ಜಿಲ್ಲಾ ಘಟಕದ ಇತರೆ ಪದಾಧಿಕಾರಿಗಳಾಗಿ ಲಕ್ಷ್ಮೀಶ್ ಶೆಟ್ಟಿ (ಗೌರವಾಧ್ಯಕ್ಷ), ಆನಂದ್ ಶೆಟ್ಟಿ ಮತ್ತು ನಾಗರಾಜ್ (ಉಪಾಧ್ಯಕ್ಷರು), ಪ್ರಸಾದ್ (ಸಂಘಟನೆ ಕಾರ್ಯದರ್ಶಿ), ಪ್ರಕಾಶ್ ದೇವಾಡಿಗ (ಗೌರವ ಸಲಹೆಗಾರ), ಸರ್ವೋತ್ತಮ್ (ಕಾರ್ಯದರ್ಶಿ) ಹಾಗೂ ಗಣೇಶ್ ಆಚಾರ್ಯ (ಸಾಂಸ್ಕೃತಿಕ ಕಾರ್ಯದರ್ಶಿ) ಅವರನ್ನು ನೇಮಕ ಮಾಡಲಾಗಿದೆ.ಕಾರ್ಯಕ್ರಮದಲ್ಲಿ ರಾಜ್ಯ ಉಪಾಧ್ಯಕ್ಷ ಅನಿಲ್ ಬಿ. ಶೆಟ್ಟಿ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

ಮಹಿಳಾ ಘಟಕಕ್ಕೆ ಅನಿತಾ ಬಿ.ವಿ ನೇಮಕ
ಜೂನ್ 14ರಂದು ಬೆಂಗಳೂರಿನ ಗಾಂಧಿನಗರದಲ್ಲಿರುವ ಹೋಟೆಲ್ನಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಹಾಗೂ ಜಿಲ್ಲಾಧ್ಯಕ್ಷರ ಸಭೆಯಲ್ಲಿ, ರಾಜ್ಯಾಧ್ಯಕ್ಷ ಶ್ರೀ ಎಂ. ಬಸವರಾಜ್ ಪಡುಕೋಟೆ ಅವರ ಅಧ್ಯಕ್ಷತೆಯಲ್ಲಿ ಉಡುಪಿ ಮಹಿಳಾ ಘಟಕದ ನೂತನ ಜಿಲ್ಲಾಧ್ಯಕ್ಷರಾಗಿ ಶ್ರೀಮತಿ ಅನಿತಾ ಬಿ.ವಿ ಅವರನ್ನು ಆಯ್ಕೆ ಮಾಡಲಾಯಿತು.ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅನಿತಾ ಬಿ.ವಿ ಅವರಿಗೆ ಶಾಲು ಹೊದಿಸಿ ಸನ್ಮಾನಿಸಲಾಯಿತು.ಉಡುಪಿ ಜಿಲ್ಲಾ ಸಂಘಟನೆಯನ್ನು ಸುಜಯ್ ಪೂಜಾರಿ ಹಾಗೂ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಅನಿತಾ ಬಿ.ವಿ ಅವರ ನೇತೃತ್ವದಲ್ಲಿ ಮುನ್ನಡೆಸುವ ವಿಶ್ವಾಸವನ್ನು ಸಂಘಟನೆಯ ಮುಖಂಡರು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ರಾಜ್ಯ ಗೌರವಾಧ್ಯಕ್ಷ ಹಾಗೂ ಕನ್ನಡ ಚಲನಚಿತ್ರ ನಟ-ನಿರ್ಮಾಪಕ ಗಣೇಶ್ ರಾವ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗರಾಜ್ ಚಕನಹಳ್ಳಿ, ಪ್ರಧಾನ ರಾಜ್ಯ ಸಂಚಾಲಕ ಭೀಮಣ್ಣ ಶಾಖಾಪುರ, ರಾಜ್ಯ ಮಹಿಳಾ ಸಂಘಟನಾ ಕಾರ್ಯದರ್ಶಿ ಸುನಿತ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.
