• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, August 11, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಭಟ್ಕಳದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಅಭಿಯಾನ

Kannada News Desk by Kannada News Desk
July 11, 2026
in ಉತ್ತರ ಕನ್ನಡ
0
ಭಟ್ಕಳದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ ಅಭಿಯಾನ
0
SHARES
119
VIEWS
WhatsappTelegram Share on FacebookShare on TwitterLinkedin

 

ಭಟ್ಕಳ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ನಡೆಯುತ್ತಿರುವ ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಕಾರ್ಯಕ್ರಮದ ಭಾಗವಾಗಿ, ಭಟ್ಕಳ ತಾಲೂಕು ಆಡಳಿತವು SVEEP ಯೋಜನೆಯಡಿ ಯುವ ಮತದಾರರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ವಿವಿಧ ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಿತು.

ಅಭಿಯಾನದ ಅಂಗವಾಗಿ ಭಟ್ಕಳದ ಮೆಟ್ರಿಕ್ ನಂತರದ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಿದ ಅಧಿಕಾರಿಗಳು, ವಿದ್ಯಾರ್ಥಿಗಳಿಗೆ ಮತದಾರರ ಪಟ್ಟಿಯ ಪರಿಷ್ಕರಣೆಯ ಅಗತ್ಯತೆ ಮತ್ತು ಪ್ರಕ್ರಿಯೆಗಳ ಕುರಿತು ವಿವರವಾದ ಮಾಹಿತಿ ನೀಡಿದರು. ಹೊಸ ಮತದಾರರಾಗಿ ಹೆಸರು ನೋಂದಾಯಿಸಿಕೊಳ್ಳುವುದು, ಹೆಸರು ಅಥವಾ ವಿಳಾಸದಲ್ಲಿ ತಿದ್ದುಪಡಿ ಮಾಡಿಸುವುದು, ಸ್ಥಳಾಂತರಗೊಂಡ ಮತದಾರರ ವಿವರಗಳನ್ನು ನವೀಕರಿಸುವುದು ಹಾಗೂ ಮರಣ ಹೊಂದಿದ ಅಥವಾ ಅರ್ಹತೆ ಕಳೆದುಕೊಂಡವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಕ್ರಮಗಳ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

ಮತದಾನದ ಹಕ್ಕು ಪ್ರತಿಯೊಬ್ಬ ನಾಗರಿಕನ ಸಂವಿಧಾನಬದ್ಧ ಹಕ್ಕಾಗಿದ್ದು, ನಿಖರ ಮತ್ತು ನವೀಕೃತ ಮತದಾರರ ಪಟ್ಟಿ ಪ್ರಜಾಪ್ರಭುತ್ವವನ್ನು ಇನ್ನಷ್ಟು ಸದೃಢಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಅಧಿಕಾರಿಗಳು ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಪಂಚಾಯತ್ ಭಟ್ಕಳದ ಕಾರ್ಯನಿರ್ವಾಹಕ ಅಧಿಕಾರಿ ಸುನಿಲ್ ಎಂ, ಯುವಜನರು ಮತದಾರರಾಗಿ ನೋಂದಾಯಿಸಿಕೊಂಡು ಪ್ರಜಾಪ್ರಭುತ್ವದ ಬಲವರ್ಧನೆಗೆ ಕೈಜೋಡಿಸಬೇಕು ಎಂದು ಕರೆ ನೀಡಿದರು. ಪ್ರತಿಯೊಬ್ಬ ಅರ್ಹ ನಾಗರಿಕರೂ SIR ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸುವುದು ಅಗತ್ಯ ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಲೂಕು SVEEP ನೋಡಲ್ ಅಧಿಕಾರಿ ಉದಯ್ ಬೋರಕರ ಹಾಗೂ ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯದ ವಿಸ್ತರಣಾಧಿಕಾರಿ ಶಂಸುದ್ದೀನ್ ಉಪಸ್ಥಿತರಿದ್ದು, ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮತದಾರರ ಪಟ್ಟಿಗೆ ಸಂಬಂಧಿಸಿದ ವಿವಿಧ ಪ್ರಶ್ನೆಗಳಿಗೆ ಉತ್ತರಿಸಿದರು.

ಇದೇ ಅಭಿಯಾನದ ಮುಂದುವರಿದ ಭಾಗವಾಗಿ ಸರ್ಕಾರಿ ಐಟಿಐ ಕಾಲೇಜು, ಭಟ್ಕಳದಲ್ಲಿಯೂ ವಿಶೇಷ ಜಾಗೃತಿ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾಸ್ಟರ್ ಟ್ರೈನರ್ ರಾಘವೇಂದ್ರ ಮಡಿವಾಳ ಅವರು ವಿಶೇಷ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ಉದ್ದೇಶ, ಮತದಾರರ ಪಟ್ಟಿಯ ನಿಖರತೆಯ ಮಹತ್ವ, ಯುವ ಮತದಾರರ ಪಾತ್ರ ಹಾಗೂ ಹೊಸ ಮತದಾರರ ನೋಂದಣಿಯಿಂದಾಗುವ ಪ್ರಯೋಜನಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು.

ಐಟಿಐ ಕಾಲೇಜಿನ ಅಧಿಕಾರಿ ಪಾಲೇಕರ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಹಕಾರ ನೀಡಿದರು. ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು SIR ಕುರಿತು ಮಾಹಿತಿ ಪಡೆದುಕೊಂಡು, ತಮ್ಮ ಕುಟುಂಬದ ಸದಸ್ಯರು ಹಾಗೂ ಸಾರ್ವಜನಿಕರಿಗೂ ಈ ಅರಿವು ಮೂಡಿಸುವ ಸಂಕಲ್ಪ ವ್ಯಕ್ತಪಡಿಸಿದರು.

ತಾಲೂಕು SVEEP ಸಮಿತಿಯ ಆಶ್ರಯದಲ್ಲಿ ನಡೆದ ಈ ಜಾಗೃತಿ ಕಾರ್ಯಕ್ರಮಗಳು ಯುವ ಸಮುದಾಯದಲ್ಲಿ ಮತದಾರರ ನೋಂದಣಿ, ಮತದಾರರ ಪಟ್ಟಿಯ ಪರಿಷ್ಕರಣೆ ಹಾಗೂ ನಾಗರಿಕರ ಜವಾಬ್ದಾರಿಯ ಕುರಿತು ಪರಿಣಾಮಕಾರಿ ಅರಿವು ಮೂಡಿಸುವಲ್ಲಿ ಯಶಸ್ವಿಯಾಗಿವೆ. ಮುಂದಿನ ದಿನಗಳಲ್ಲಿ ತಾಲೂಕಿನ ವಿವಿಧ ಶಿಕ್ಷಣ ಸಂಸ್ಥೆಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿಯೂ ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹೆಚ್ಚಿನ ಸಂಖ್ಯೆಯ ಅರ್ಹ ಮತದಾರರನ್ನು SIR ಪ್ರಕ್ರಿಯೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸಲಾಗುವುದು ಎಂದು ತಾಲೂಕು ಆಡಳಿತ ತಿಳಿಸಿದೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Previous Post

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಜನ್ಮದಿನ: ಕೋಳಿಗಾರ ಸರ್ಕಾರಿ ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ ನೀಡಿದ ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ

Next Post

ಎಬಿ-ಆರ್ಕೆ ಯೋಜನೆಯಲ್ಲಿ ಭಟ್ಕಳ ತಾಲೂಕು ಆಸ್ಪತ್ರೆಗೆ ರಾಜ್ಯಮಟ್ಟದ ಮನ್ನಣೆ; ಜಿಲ್ಲೆಯಲ್ಲಿ ಅಗ್ರಸ್ಥಾನ

Kannada News Desk

Kannada News Desk

Next Post
ಎಬಿ-ಆರ್ಕೆ ಯೋಜನೆಯಲ್ಲಿ ಭಟ್ಕಳ ತಾಲೂಕು ಆಸ್ಪತ್ರೆಗೆ ರಾಜ್ಯಮಟ್ಟದ ಮನ್ನಣೆ; ಜಿಲ್ಲೆಯಲ್ಲಿ ಅಗ್ರಸ್ಥಾನ

ಎಬಿ-ಆರ್ಕೆ ಯೋಜನೆಯಲ್ಲಿ ಭಟ್ಕಳ ತಾಲೂಕು ಆಸ್ಪತ್ರೆಗೆ ರಾಜ್ಯಮಟ್ಟದ ಮನ್ನಣೆ; ಜಿಲ್ಲೆಯಲ್ಲಿ ಅಗ್ರಸ್ಥಾನ

Please login to join discussion

ಕ್ಯಾಲೆಂಡರ್

July 2026
MTWTFSS
 12345
6789101112
13141516171819
20212223242526
2728293031 
« Jun   Aug »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d