• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, July 28, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶಾಸಕರ ವಿರುದ್ಧವಲ್ಲ, ಸಾರ್ವಜನಿಕ ಸಮಸ್ಯೆಗಳ ವಿರುದ್ಧವೇ ಹೋರಾಟ:ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ

Kannada News Desk by Kannada News Desk
July 28, 2026
in ಉತ್ತರ ಕನ್ನಡ
0
ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕಕ್ಕೆ ಹೊಸ ನಾಯಕತ್ವ ಅನಂತಮೂರ್ತಿ ಹೆಗಡೆಗೆ ಜಿಲ್ಲಾಧ್ಯಕ್ಷರ ಜವಾಬ್ದಾರಿ
0
SHARES
38
VIEWS
WhatsappTelegram Share on FacebookShare on TwitterLinkedin

 

ಶಿರಸಿ: ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅವರು ಶಾಸಕ ಭೀಮಣ್ಣ ನಾಯ್ಕ ಅವರ ವಿರುದ್ಧ ತಾವು ಯಾವುದೇ ಅಸಂವಿಧಾನಿಕ ಅಥವಾ ಅವಹೇಳನಕಾರಿ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಅವರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ.


ಶಾಸಕ ಭೀಮಣ್ಣ ನಾಯ್ಕ ಅವರ ಬಗ್ಗೆ ತಮಗೆ ವೈಯಕ್ತಿಕ ಗೌರವವಿದ್ದು, ಜನಪ್ರತಿನಿಧಿಯಾಗಿ ಸಾರ್ವಜನಿಕ ಸಮಸ್ಯೆಗಳ ಕುರಿತು ಪ್ರಶ್ನೆ ಮಾಡಿರುವುದೇ ಹೊರತು ಯಾವುದೇ ವೈಯಕ್ತಿಕ ದ್ವೇಷದಿಂದ ಟೀಕೆ ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ. ತಮ್ಮ ಹೋರಾಟ ವ್ಯಕ್ತಿಯ ವಿರುದ್ಧವಲ್ಲ, ವ್ಯವಸ್ಥೆಯಲ್ಲಿರುವ ಲೋಪಗಳ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ತಮ್ಮ ಆರೋಪಗಳು ತಪ್ಪೆಂದು ಸಾಬೀತಾದರೆ ಸಾರ್ವಜನಿಕರ ಮುಂದೆ ಉತ್ತರಿಸಲು ತಾವು ಸಿದ್ಧ ಎಂದು ತಿಳಿಸಿದ್ದಾರೆ.
ಇತ್ತೀಚೆಗೆ ಭೀಮಣ್ಣ ನಾಯ್ಕ ಅಭಿಮಾನಿ ಬಳಗ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ವಿರುದ್ಧ ಮಾಡಲಾದ ಆರೋಪಗಳನ್ನು ಅನಂತಮೂರ್ತಿ ಹೆಗಡೆ ತಳ್ಳಿಹಾಕಿದ್ದಾರೆ. ವೈದ್ಯರು ಅಥವಾ ವೈದ್ಯಕೀಯ ವಲಯವನ್ನು ಅವಮಾನಿಸುವ ರೀತಿಯ ಯಾವುದೇ ಹೇಳಿಕೆ ನೀಡಿಲ್ಲ ಎಂದು ಸ್ಪಷ್ಟಪಡಿಸಿರುವ ಅವರು, ತಮ್ಮ ಹೇಳಿಕೆಗಳನ್ನು ತಪ್ಪಾಗಿ ಅರ್ಥೈಸಿ ತಿರುಚಿ ಬಿಂಬಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರು ಮತ್ತು ವಿರೋಧ ಪಕ್ಷಗಳಿಗೆ ಸಾರ್ವಜನಿಕ ಹಿತಾಸಕ್ತಿಯ ವಿಚಾರಗಳನ್ನು ಪ್ರಶ್ನಿಸುವ ಹಕ್ಕಿದೆ ಎಂದು ಅವರು ಹೇಳಿದ್ದಾರೆ. ಶಿರಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿನ ಸಮಸ್ಯೆಗಳ ಕುರಿತು ಧ್ವನಿ ಎತ್ತಿರುವುದು ಜನರ ಹಿತದೃಷ್ಟಿಯಿಂದಲೇ ಆಗಿದ್ದು, ಅದನ್ನು ವೈಯಕ್ತಿಕ ವಿಚಾರವಾಗಿ ಪರಿಗಣಿಸಬಾರದು ಎಂದಿದ್ದಾರೆ.

ತಮ್ಮ ಮುಂದಿನ ಹೋರಾಟಗಳಿಗೂ ತಡೆ ಒಡ್ಡುವ ರೀತಿಯ ಹೇಳಿಕೆಗಳು ಕೇಳಿಬಂದಿರುವುದನ್ನು ಉಲ್ಲೇಖಿಸಿದ ಅವರು, “ಪ್ರಜಾಪ್ರಭುತ್ವದಲ್ಲಿ ಪ್ರತಿಭಟನೆ ಮತ್ತು ಪ್ರಶ್ನಿಸುವ ಹಕ್ಕು ಪ್ರತಿಯೊಬ್ಬ ನಾಗರಿಕನಿಗೂ ಇದೆ. ಆಸ್ಪತ್ರೆಯ ಕಾರ್ಯವೈಖರಿ ಹಾಗೂ ಜನಸೇವೆಯ ಕುರಿತು ಶಾಸಕರ ನೈತಿಕ ಹೊಣೆಗಾರಿಕೆಯನ್ನು ಪ್ರಶ್ನಿಸಿದ್ದೇ ಹೊರತು, ಯಾವುದೇ ವೈಯಕ್ತಿಕ ಅಥವಾ ಇತರೆ ತಾಕತ್ತಿನ ಬಗ್ಗೆ ಮಾತನಾಡಿಲ್ಲ” ಎಂದು ಹೇಳಿದ್ದಾರೆ.ಅಲ್ಲದೆ, ಪತ್ರಿಕಾಗೋಷ್ಠಿಯಲ್ಲಿ ತಮ್ಮ ಜಾತಿ, ಸಮಾಜ ಹಾಗೂ ಕುಟುಂಬದ ಹಿನ್ನೆಲೆಯನ್ನು ಪ್ರಸ್ತಾಪಿಸಿ ಮಾತನಾಡಿರುವುದು ನೋವುಂಟು ಮಾಡಿದೆ ಎಂದು ಅವರು ತಿಳಿಸಿದ್ದಾರೆ. ವಿಚಾರಾಧಾರಿತ ಚರ್ಚೆ ನಡೆಸುವ ಬದಲು ವೈಯಕ್ತಿಕ ವಿಚಾರಗಳನ್ನು ಮುಂದಿಟ್ಟಿರುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಶಿರಸಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕುರಿತು ಮಾತನಾಡಿದ ಅನಂತಮೂರ್ತಿ ಹೆಗಡೆ, ಹಿಂದಿನ ಸರ್ಕಾರದ ಅವಧಿಯಲ್ಲಿ ನಿರ್ಮಾಣಗೊಂಡಿರುವ ಆಸ್ಪತ್ರೆಯನ್ನು ಸಂಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವಂತೆ ಮಾಡಬೇಕು ಎಂದು ಆಗ್ರಹಿಸಿದರು. 24 ಗಂಟೆಗಳ ತುರ್ತು ಚಿಕಿತ್ಸಾ ಸೇವೆ, ವೆಂಟಿಲೇಟರ್ ವ್ಯವಸ್ಥೆ, ಅಗತ್ಯ ಸಂಖ್ಯೆಯ ವೈದ್ಯರು ಹಾಗೂ ಸಿಬ್ಬಂದಿಯನ್ನು ನೇಮಕ ಮಾಡಿ ಸಾರ್ವಜನಿಕರಿಗೆ ಸಮರ್ಪಕ ಆರೋಗ್ಯ ಸೇವೆ ಒದಗಿಸುವಂತೆ ಅವರು ಒತ್ತಾಯಿಸಿದ್ದಾರೆ.
ಆಸ್ಪತ್ರೆಯಲ್ಲಿನ ಅವ್ಯವಸ್ಥೆಯಿಂದ ಮೃತಪಟ್ಟಿದ್ದಾರೆ ಎನ್ನಲಾದ ಮಿಥುನ್ ನಾಯ್ಕ ಅವರ ಕುಟುಂಬಕ್ಕೆ ಸಾಂತ್ವನ ಹೇಳುವುದು, ಅವರಿಗೆ ನೆರವು ನೀಡುವುದು ಹಾಗೂ ಸರ್ಕಾರದಿಂದ ಸೂಕ್ತ ಪರಿಹಾರ ಒದಗಿಸುವಂತೆ ಆಗ್ರಹಿಸುವುದು ತಪ್ಪಲ್ಲ ಎಂದು ಅವರು ಹೇಳಿದ್ದಾರೆ. ಬಡವರು ಮತ್ತು ಸಾರ್ವಜನಿಕರ ಪರವಾಗಿ ಧ್ವನಿ ಎತ್ತುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಾರ್ವಜನಿಕ ಸಮಸ್ಯೆಗಳ ಬಗ್ಗೆ ಪ್ರಶ್ನಿಸುವುದು ಜನಪ್ರತಿನಿಧಿಗಳಷ್ಟೇ ಅಲ್ಲ, ಪ್ರತಿಯೊಬ್ಬ ನಾಗರಿಕನ ಹಕ್ಕು ಮತ್ತು ಜವಾಬ್ದಾರಿಯೂ ಆಗಿದೆ ಎಂದು ಹೇಳಿರುವ ಅನಂತಮೂರ್ತಿ ಹೆಗಡೆ, ಆಸ್ಪತ್ರೆ ಸೇರಿದಂತೆ ಜನಸಾಮಾನ್ಯರ ಹಿತಾಸಕ್ತಿಯ ವಿಷಯಗಳಲ್ಲಿ ತಮ್ಮ ಹೋರಾಟ ಮುಂದುವರಿಯಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Previous Post

ಶಿರಸಿಯಲ್ಲಿ ಭೀಕರ ಬೈಕ್ ಅಪಘಾತ: 21 ವರ್ಷದ ಯುವಕ ದುರ್ಮರಣ, ಇಬ್ಬರಿಗೆ ಗಂಭೀರ ಗಾಯ

Next Post

ಮುರುಡೇಶ್ವರ ಪ್ರವಾಸಿ ತಾಣದ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾ ಪಂಚಾಯತ್ ಸಿಇಒ ಡಾ. ದಿಲೀಷ್ ಶಶಿ

Kannada News Desk

Kannada News Desk

Next Post
ಮುರುಡೇಶ್ವರ ಪ್ರವಾಸಿ ತಾಣದ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾ ಪಂಚಾಯತ್ ಸಿಇಒ ಡಾ. ದಿಲೀಷ್ ಶಶಿ

ಮುರುಡೇಶ್ವರ ಪ್ರವಾಸಿ ತಾಣದ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾ ಪಂಚಾಯತ್ ಸಿಇಒ ಡಾ. ದಿಲೀಷ್ ಶಶಿ

Please login to join discussion

ಕ್ಯಾಲೆಂಡರ್

July 2026
MTWTFSS
 12345
6789101112
13141516171819
20212223242526
2728293031 
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d