• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, July 31, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸೈಬರ್ ವಂಚನೆ ಪ್ರಕರಣ: ಗ್ರಾಹಕರಿಗೆ ₹20.21 ಲಕ್ಷ ಮರಳಿಸಲು ಕೆನರಾ ಬ್ಯಾಂಕ್‌ಗೆ ಆಯೋಗದ ಆದೇಶ

Kannada News Desk by Kannada News Desk
July 31, 2026
in ಉತ್ತರ ಕನ್ನಡ
0
ಸೈಬರ್ ವಂಚನೆ ಪ್ರಕರಣ: ಗ್ರಾಹಕರಿಗೆ ₹20.21 ಲಕ್ಷ ಮರಳಿಸಲು ಕೆನರಾ ಬ್ಯಾಂಕ್‌ಗೆ ಆಯೋಗದ ಆದೇಶ
0
SHARES
320
VIEWS
WhatsappTelegram Share on FacebookShare on TwitterLinkedin

 

ಭಟ್ಕಳ: ಆನ್‌ಲೈನ್ ವಂಚನೆಗೆ ಒಳಗಾಗಿ ಹಣ ಕಳೆದುಕೊಂಡ ಗ್ರಾಹಕರ ದೂರಿಗೆ ತಕ್ಷಣ ಸ್ಪಂದಿಸದೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಕೆನರಾ ಬ್ಯಾಂಕ್ ವಿರುದ್ಧ ಕಾರವಾರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮಹತ್ವದ ಆದೇಶ ನೀಡಿದೆ. ವಂಚನೆಗೆ ಒಳಗಾದ ಗ್ರಾಹಕರಿಗೆ ₹20.21 ಲಕ್ಷವನ್ನು ವಾರ್ಷಿಕ ಶೇ. 8ರ ಬಡ್ಡಿಯೊಂದಿಗೆ ಪಾವತಿಸಬೇಕು ಎಂದು ಆಯೋಗ ಸೂಚಿಸಿದೆ.


ಭಟ್ಕಳ ತಾಲ್ಲೂಕಿನ ಬೆಳಕೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಜಗದೀಶ ನಾಯ್ಕ ಅವರು ಕೆನರಾ ಬ್ಯಾಂಕ್‌ನ ಬೆಳಕೆ ಶಾಖೆಯಲ್ಲಿ ಖಾತೆ ಹಾಗೂ ಓವರ್‌ಡ್ರಾಫ್ಟ್ (OD) ಸೌಲಭ್ಯ ಹೊಂದಿದ್ದರು. 2025ರ ಫೆಬ್ರವರಿ 9ರಂದು ತಮ್ಮ ಖಾತೆಯಿಂದ ಅನಧಿಕೃತವಾಗಿ ಹಣ ವರ್ಗಾವಣೆಯಾಗಿರುವ ಕುರಿತು ಮೊಬೈಲ್ ಸಂದೇಶ ಬಂದ ತಕ್ಷಣ ಅವರು ಬ್ಯಾಂಕ್ ಶಾಖೆಗೆ ಮಾಹಿತಿ ನೀಡಿದರು.

ಇದರ ಜೊತೆಗೆ ಬ್ಯಾಂಕ್‌ನ ಕೇಂದ್ರ ಕಚೇರಿ, ಕಾರವಾರ ಪ್ರಾದೇಶಿಕ ಕಚೇರಿ, ರಾಷ್ಟ್ರೀಯ ಸೈಬರ್ ಸಹಾಯವಾಣಿ 1930 ಹಾಗೂ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಗೆ ದೂರು ದಾಖಲಿಸಿ, ಖಾತೆಯನ್ನು ತಕ್ಷಣ ಫ್ರೀಜ್ ಮಾಡಿ ಹಣವನ್ನು ತಡೆಹಿಡಿಯುವಂತೆ ಮನವಿ ಮಾಡಿದ್ದರು. ಆದಾಗ್ಯೂ, ಅವರ ಖಾತೆಯಿಂದ ಒಟ್ಟು ₹20.21 ಲಕ್ಷ ವಂಚಕರ ಖಾತೆಗೆ ವರ್ಗಾವಣೆಯಾಗಿದೆ.
ನಂತರ ಜಗದೀಶ ನಾಯ್ಕ ಅವರು ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಮೊರೆ ಹೋಗಿ, ತಮ್ಮ ದೂರಿನ ಬಳಿಕವೂ ಬ್ಯಾಂಕ್ ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ವಂಚನೆಗೆ ಒಳಗಾದ ಹಣವನ್ನು ಮರಳಿ ಪಡೆಯಲು ಅಗತ್ಯ ಕ್ರಮ ಕೈಗೊಳ್ಳುವಲ್ಲಿ ಬ್ಯಾಂಕ್ ವಿಫಲವಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದರು.

ಪ್ರಕರಣದ ವಿಚಾರಣೆಯ ವೇಳೆ ಕೆನರಾ ಬ್ಯಾಂಕ್ ಪರವಾಗಿ, ಗ್ರಾಹಕರೇ ತಮ್ಮ ಇಂಟರ್‌ನೆಟ್ ಬ್ಯಾಂಕಿಂಗ್ ಬಳಕೆದಾರ ಹೆಸರು ಮತ್ತು ಪಾಸ್‌ವರ್ಡ್ ರಚಿಸಿಕೊಂಡಿದ್ದು, ವಂಚನೆಗೆ ಎರಡು ದಿನಗಳ ಮುನ್ನ ಅವುಗಳನ್ನು ಬದಲಿಸಿದ್ದರು ಎಂದು ವಾದಿಸಲಾಯಿತು. ನೋಂದಾಯಿತ ಮೊಬೈಲ್ ಸಂಖ್ಯೆಗೆ ಬಂದ ಒಟಿಪಿ (OTP) ಬಳಸಿ ಅಧಿಕೃತ ವಹಿವಾಟು ನಡೆದಿದ್ದು, ಬ್ಯಾಂಕ್ ವ್ಯವಸ್ಥೆಯಲ್ಲಿ ಯಾವುದೇ ಭದ್ರತಾ ಲೋಪ ಅಥವಾ ಖಾತೆ ಹ್ಯಾಕ್ ಆದ ಸಾಕ್ಷ್ಯಗಳಿಲ್ಲ ಎಂದು ಬ್ಯಾಂಕ್ ತಿಳಿಸಿತು.

ಆದರೆ, ಗ್ರಾಹಕರು ವಂಚನೆ ಕುರಿತು ತಕ್ಷಣ ಮಾಹಿತಿ ನೀಡಿದ ಬಳಿಕವೂ ಹಣದ ವರ್ಗಾವಣೆಯನ್ನು ತಡೆಯಲು ಅಥವಾ ಮಧ್ಯವರ್ತಿ ಬ್ಯಾಂಕ್ ಮೂಲಕ ಹಣವನ್ನು ಮರುಪಡೆಯಲು ಅಗತ್ಯ ಕ್ರಮ ಕೈಗೊಳ್ಳಲಾಗಿಲ್ಲ ಎಂಬ ಅಂಶವನ್ನು ಆಯೋಗ ಗಂಭೀರವಾಗಿ ಪರಿಗಣಿಸಿತು.
ಆಯೋಗದ ಅಭಿಪ್ರಾಯದಲ್ಲಿ, ವಂಚನೆ ಸಂಭವಿಸುವ ಮೊದಲು ಬ್ಯಾಂಕ್‌ನಿಂದ ಯಾವುದೇ ನಿರ್ಲಕ್ಷ್ಯ ನಡೆದಿಲ್ಲ. ಆದರೆ, ದೂರು ಬಂದ ನಂತರ ತಕ್ಷಣ ಸ್ಪಂದಿಸದೇ ವಿಳಂಬ ಮಾಡಿರುವುದು ಸೇವಾ ಲೋಪಕ್ಕೆ ಸಮಾನವಾಗಿದೆ. ಗ್ರಾಹಕರ ಖಾತೆಯನ್ನು ತಕ್ಷಣ ಫ್ರೀಜ್ ಮಾಡಿ ಅಗತ್ಯ ಕ್ರಮ ಕೈಗೊಂಡಿದ್ದರೆ ಹಣವನ್ನು ಮರಳಿ ಪಡೆಯುವ ಸಾಧ್ಯತೆ ಇತ್ತು ಎಂದು ಆಯೋಗ ಹೇಳಿದೆ.

ಕಾರವಾರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಮಾರುತಿ ವಡ್ಡರ್ ಹಾಗೂ ಸದಸ್ಯೆ ನಯನಾ ಕಾಮಟೆ ಪ್ರಕರಣದ ದಾಖಲೆಗಳು ಮತ್ತು ಎರಡೂ ಪಕ್ಷಗಳ ವಾದಗಳನ್ನು ಪರಿಶೀಲಿಸಿದ ಬಳಿಕ, ಬೆಳಕೆ ಶಾಖೆಯ ಬ್ಯಾಂಕ್ ಮ್ಯಾನೇಜರ್ ಹಾಗೂ ಕಾರವಾರ ಪ್ರಾದೇಶಿಕ ಮ್ಯಾನೇಜರ್ ಜಂಟಿಯಾಗಿ ₹20.21 ಲಕ್ಷವನ್ನು ವಾರ್ಷಿಕ ಶೇ. 8ರ ಬಡ್ಡಿಯೊಂದಿಗೆ ಪಾವತಿಸಬೇಕು ಎಂದು ಆದೇಶಿಸಿದರು.ಇದರ ಜೊತೆಗೆ, ಮಾನಸಿಕ ಹಿಂಸೆ ಮತ್ತು ತೊಂದರೆಗೆ ಪರಿಹಾರವಾಗಿ ₹25,000 ಹಾಗೂ ಪ್ರಕರಣದ ವೆಚ್ಚಕ್ಕಾಗಿ ₹10,000ವನ್ನು ಸಹ ಜಗದೀಶ ನಾಯ್ಕ ಅವರಿಗೆ ಪಾವತಿಸುವಂತೆ ಆಯೋಗ ನಿರ್ದೇಶನ ನೀಡಿದೆ.

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading…

Related

Previous Post

ಬಿಳಿಶಿಲೆ ಗಣಪತಿ ದೇವಸ್ಥಾನದಲ್ಲಿ ಚಾತುರ್ಮಾಸ ಮಹೋತ್ಸವಕ್ಕೆ ಭಕ್ತಿಪೂರ್ವಕ ಚಾಲನೆ

Next Post

ಭಟ್ಕಳದ ಯೋಗ ಶಿಕ್ಷಕ ಗೋವಿಂದ ದೇವಾಡಿಗರಿಗೆ ‘ಭಾರತೀಯ ಯೋಗ ರತ್ನ–2026’ ಗೌರವ

Kannada News Desk

Kannada News Desk

Next Post
ಭಟ್ಕಳದ ಯೋಗ ಶಿಕ್ಷಕ ಗೋವಿಂದ ದೇವಾಡಿಗರಿಗೆ ‘ಭಾರತೀಯ ಯೋಗ ರತ್ನ–2026’ ಗೌರವ

ಭಟ್ಕಳದ ಯೋಗ ಶಿಕ್ಷಕ ಗೋವಿಂದ ದೇವಾಡಿಗರಿಗೆ ‘ಭಾರತೀಯ ಯೋಗ ರತ್ನ–2026’ ಗೌರವ

Please login to join discussion

ಕ್ಯಾಲೆಂಡರ್

July 2026
MTWTFSS
 12345
6789101112
13141516171819
20212223242526
2728293031 
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d