• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶ್ರೀ ಶ್ರೀ ಶ್ರೀ ಪರಮ ಪೂಜ್ಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 12ನೇ ದಿನದ ಚಾತುರ್ಮಾಸ್ಯ ವ್ರತಾಚಾರಣೆ ಕಾರ್ಯಕ್ರಮದಲ್ಲಿ ಕುಮಟಾ ತಾಲೂಕು ನಾಮಧಾರಿ ಸಂಘ ಮತ್ತು ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ವತಿಯಿಂದ ಶ್ರೀಗಳ ಪಾದ ಪೂಜೆ

Kannada News Desk by Kannada News Desk
August 1, 2024
in ಉತ್ತರ ಕನ್ನಡ
0
ಶ್ರೀ ಶ್ರೀ ಶ್ರೀ ಪರಮ ಪೂಜ್ಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 12ನೇ ದಿನದ ಚಾತುರ್ಮಾಸ್ಯ ವ್ರತಾಚಾರಣೆ ಕಾರ್ಯಕ್ರಮದಲ್ಲಿ ಕುಮಟಾ ತಾಲೂಕು ನಾಮಧಾರಿ ಸಂಘ ಮತ್ತು ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ವತಿಯಿಂದ ಶ್ರೀಗಳ ಪಾದ ಪೂಜೆ
0
SHARES
147
VIEWS
WhatsappTelegram Share on FacebookShare on TwitterLinkedin

ಶ್ರೀ ಶ್ರೀ ಶ್ರೀ ಪರಮ ಪೂಜ್ಯ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 12ನೇ ದಿನದ
ಚಾತುರ್ಮಾಸ್ಯ ವ್ರತಾಚಾರಣೆ ಕಾರ್ಯಕ್ರಮದಲ್ಲಿ ಕುಮಟಾ ತಾಲೂಕು ನಾಮಧಾರಿ ಸಂಘ ಮತ್ತು ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ವತಿಯಿಂದ ಶ್ರೀಗಳ ಪಾದ ಪೂಜೆ


ಭಟ್ಕಳ: ಇಲ್ಲಿನ ಕರಿಕಲ್ ಧ್ಯಾನ ಮಂದಿರಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ನಿರತರಾಗಿರುವ ನಾಮಧಾರಿ ಸಮಾಜದ ಕುಲಗುರುಗಳಾದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 12ನೇ ದಿನದ ಕಾರ್ಯಕ್ರಮದಲ್ಲಿ ಕುಮಟಾ ತಾಲೂಕು ನಾಮಧಾರಿ ಸಂಘ ಮತ್ತು ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ವತಿಯಿಂದ ಶ್ರೀಗಳ ಪಾದ ಪೂಜೆ ನೆರವೇರಿತು.


ಭಟ್ಕಳದ ಕರಿಕಲ್ ಶ್ರೀಮಠಕ್ಕೆ ಆಗಮಿಸಿದ ಕುಮಟಾ ತಾಲೂಕು ನಾಮಧಾರಿ ಸಮಾಜದ ಬಾಂಧವರು ಚಾತುರ್ಮಾಸ್ಯ ವ್ರತಾಚರಣೆಯ ಸೇವೆಗಾಗಿ ತಂದಿದ್ದ ಧನ-ಧಾನ್ಯಗಳನ್ನು ಅಚ್ಚುಕಟ್ಟಾಗಿ ಮೆರವಣಿಗೆಯ ಮೂಲಕ ತಂದು ಶ್ರೀಮಠಕ್ಕೆ ಅರ್ಪಿಸಿದರು. ಚಾತುರ್ಮಾಸ್ಯ ಕಾರ್ಯಕ್ರಮದ ಸೇವಾ ಕೈಂಕರ್ಯಗಳಲ್ಲಿ ಪಾಲ್ಗೊಂಡ ಭಕ್ತರು ಗುರು ಭಕ್ತಿ ಮೆರೆದರು. ವೇದಿಕೆಯಲ್ಲಿ ಕುಮಟಾದ ರಾಘವೇಂದ್ರ ಪಟಗಾರ ನೇತೃತ್ವದ ಭಜನಾ ತಂಡದ ಗಾಯನ ಭಕ್ತರಲ್ಲಿ ಭಕ್ತಿಯ ಸಂಚಲನ ಮೂಡಿಸಿತು. ಬಳಿಕ ವೇದಿಕೆಗೆ ಆಗಮಿಸಿದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಪಾದ ಪೂಜೆಯನ್ನು ಕುಮಟಾ ನಾಮಧಾರಿ ಸಂಘದ ಅಧ್ಯಕ್ಷ ಮಂಜುನಾಥ ನಾಯ್ಕ ಕೋಡ್ಕಣಿ ಅವರು ದಂಪತಿ ಸಮೇತ ನೆರವೇರಿಸಿದರು. ಈ ಪಾದ ಪೂಜೆಗೆ ಕುಮಟಾ ತಾಲೂಕು ಶ್ರೀರಾಮ ಕ್ಷೇತ್ರ ಸೇವಾ ಸಮಿತಿ ಅಧ್ಯಕ್ಷ ಎಚ್ ಆರ್ ನಾಯ್ಕ ಕೋನಳ್ಳಿ, ಜೆಡಿಎಸ್ ಮುಖಂಡ ಸೂರಜ್ ನಾಯ್ಕ ಸೋನಿ, ಜಿಪಂ ಮಾಜಿ ಸದಸ್ಯ ರತ್ನಾಕರ ನಾಯ್ಕ, ವಕೀಲ ಆರ್ ಜಿ ನಾಯ್ಕ, ಮಂಜುನಾಥ ಎಲ್ ನಾಯ್ಕ, ಆರ್ ಎಚ್ ನಾಯ್ಕ ಬಾಡ, ನಾಮಧಾರಿ ಸಂಘದ ನಿರ್ದೇಶಕರು ಸೇರಿದಂತೆ ನಾಮಧಾರಿ ಸಮಾಜದ ಮುಖಂಡರು ಸಾಥ್ ನೀಡಿದರು.

ಈ ಸಂದರ್ಭದಲ್ಲಿ ಶ್ರೀಗಳ ದರ್ಶನ ಪಡೆಯಲು ಬಂದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ನಿವೇದಿತ್ ಆಳ್ವಾ, ಕುಮಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭುವನ್ ಭಾಗ್ವತ್, ಕಾಂಗ್ರೆಸ್ ಮುಖಂಡರಾದ ಸತೀಶ್ ನಾಯ್ಕ, ಪ್ರದೀಪ ನಾಯಕ, ಹೊನ್ನಪ್ಪ ನಾಯಕ, ಭಾಸ್ಕರ್ ಪಟಗಾರ ಇತರರು ಶ್ರೀಗಳಿಂದ ಫಲಮಂತ್ರಾಕ್ಷತೆ ಪಡೆದರು. ಶಿರಸಿ ಶಾಸಕ ಭೀಮಣ್ಣ ನಾಯ್ಕರು ಶ್ರೀಮಠಕ್ಕೆ ಆಗಮಿಸಿ, ಶ್ರೀಗಳ ದರ್ಶನ ಪಡೆದು ಫಲಮಂತ್ರಾಕ್ಷತೆ ಸ್ವೀಕರಿಸಿದರು.
ಬಳಿಕ ಭಕ್ತರನ್ನುದ್ದೇಶಿಸಿ ಆಶೀರ್ವಚನ ನೀಡಿದ ಶ್ರೀಗಳು ಜಾತುರ್ಮಾಸ್ಯದ ಮಹತ್ವ ತಿಳಿಸಿದರು. ಮನುಷ್ಯನಾದವನು ತನ್ನ ಧರ್ಮವನ್ನು ಪಾಲಿಸಬೇಕು. ಮಠಮಾನ್ಯವನ್ನು ಬೆಳೆಸುವ ಕಾರ್ಯ ಮಾಡುವ ಜೊತೆಗೆ ಧಾರ್ಮಿಕ ಕಾರ್ಯಕ್ರಮದಲ್ಲಿ ತನ್ನನ್ನು ತೊಡಗಿಸಿಕೊಳ್ಳಬೇಕು. ಧಾರ್ಮಿಕ ಕಾರ್ಯವನ್ನು ಹಿಂದೆ ಮೇಲ್ವರ್ಗದವರಷ್ಟೆ ಮಾಡುತ್ತಿದ್ದರು. ಆದರೆ ಈಗ ಹಿಂದುಳಿದ ವರ್ಗದವರು ಕೂಡ ಧಾರ್ಮಿಕ ಕಾರ್ಯ ಕೈಗೊಳ್ಳುವ ಮೂಲಕ ಅವರಿಗೂ ಸಮಾಜದಲ್ಲಿ ಶಿಸ್ತು, ಗೌರವ ಪ್ರಾಪ್ತವಾಗುವಂತಾಗಿದೆ. ಮನಸ್ಸಿನ ತೀವ್ರತೆಯ ಮೇಲೆ ದೇವರ ಕೃಪೆಗೆ ಪಾತ್ರವಾಗುತ್ತದೆ. ಹಾಗಾಗಿ ಸತ್ಸಂಗ ಮಾಡಬೇಕು. ತಾನು ಶ್ರೇಷ್ಠ ಎಂಬ ಮೋಹ ಬಿಟ್ಟರೆ ಮಾತ್ರ ಭಕ್ತಿಯ ಮಹತ್ವ ತಿಳಿಯುತ್ತದೆ. ಜನರು ಸಂಸ್ಕಾರವನ್ನು ಪಾಲಿಸಬೇಕೆಂಬ ಸದುದ್ದೇಶದಿಂದಲೇ ಈ ಚಾತುರ್ಮಾಸ್ಯ ಮಾಡುತ್ತಿದ್ದೇವೆ ಎಂದು ಶ್ರೀಗಳು ನುಡಿದರು.
ಬಳಿಕ ಎಲ್ಲ ಭಕ್ತರಿಗೆ ಶ್ರೀಗಳು ಮಂತ್ರಾಕ್ಷತೆ ವಿತರಿಸಿ, ಹರಸಿದರು. ಬಳಿಕ ನಡೆದ ಪ್ರಸಾದ ಭೋಜನದಲ್ಲಿ ಸಾವಿರಕ್ಕೂ ಅಧಿಕ ಭಕ್ತ ಪಾಲ್ಗೊಂಡು ಪ್ರಸಾದ ಸ್ವೀಕರಿಸಿ ಪುನೀತರಾದರು. ಈ ಸಂದರ್ಭದಲ್ಲಿ ನಾಮಧಾರಿ ಸಮಾಜದ ಪ್ರಮುಖರಾದ ರಾಘವೇಂದ್ರ ನಾಯ್ಕ, ಸುರೇಶ ನಾಯ್ಕ ಹೆರವಟ್ಟಾ, ಪ್ರಶಾಂತ ನಾಯ್ಕ, ಸಂತೋಷ ನಾಯ್ಕ, ಕುಮಟಾ ತಾಲೂಕು ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಗಣೇಶ ನಾಯ್ಕ, ಮೂರೂರು ಗ್ರಾಪಂ ಅಧ್ಯಕ್ಷ ರಾಘವೇಂದ್ರ ನಾಯ್ಕ, ಕೂಜಳ್ಳಿ ಗ್ರಾಪಂ ಉಪಾಧ್ಯಕ್ಷ ವೈಭವ ನಾಯ್ಕ, ತೆಂಗು ಮಂಡಳಿಯ ಅಧ್ಯಕ್ಷ ಗಣಪತಿ ನಾಯ್ಕ, ಕಸಾಪ ಅಧ್ಯಕ್ಷ ಸುಬ್ಬಯ್ಯ ನಾಯ್ಕ, ಎಂ ಟಿ ನಾಯ್ಕ, ಮುಂತಾದವರು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಜೋರಾದ ಮಳೆಯಲ್ಲೂ ಕೂಡ ಅತ್ಯಂತ ವಿಜೃಂಭಣೆಯಿಂದ ಅದ್ದೂರಿಯಾಗಿ ಮುಕ್ತಾಯಗೊಂಡ ಭಟ್ಕಳ ಮಾರಿಜಾತ್ರೆ

Next Post

ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರಿಂದ ಹೊನ್ನಾವರ ತಾಲೂಕಿನ ಗೇರುಸೊಪ್ಪ ಜಲಾಶಯಕ್ಕೆ , ಅಪ್ಸರಕೊಂಡ ಗುಡ್ಡ  ಕುಸಿತ  ಪ್ರದೇಶಕ್ಕೆ ಹಾಗೂ ಕಾಳಜಿ ಕೇಂದ್ರ ಕ್ಕೆ ಭೇಟಿ ನೀಡಿ ಪರಿಶೀಲನೆ

Kannada News Desk

Kannada News Desk

Next Post
ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರಿಂದ ಹೊನ್ನಾವರ ತಾಲೂಕಿನ ಗೇರುಸೊಪ್ಪ ಜಲಾಶಯಕ್ಕೆ , ಅಪ್ಸರಕೊಂಡ ಗುಡ್ಡ  ಕುಸಿತ  ಪ್ರದೇಶಕ್ಕೆ ಹಾಗೂ ಕಾಳಜಿ ಕೇಂದ್ರ ಕ್ಕೆ  ಭೇಟಿ ನೀಡಿ ಪರಿಶೀಲನೆ

ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿಪ್ರಿಯ ಅವರಿಂದ ಹೊನ್ನಾವರ ತಾಲೂಕಿನ ಗೇರುಸೊಪ್ಪ ಜಲಾಶಯಕ್ಕೆ , ಅಪ್ಸರಕೊಂಡ ಗುಡ್ಡ  ಕುಸಿತ  ಪ್ರದೇಶಕ್ಕೆ ಹಾಗೂ ಕಾಳಜಿ ಕೇಂದ್ರ ಕ್ಕೆ ಭೇಟಿ ನೀಡಿ ಪರಿಶೀಲನೆ

Please login to join discussion

ಕ್ಯಾಲೆಂಡರ್

August 2024
MTWTFSS
 1234
567891011
12131415161718
19202122232425
262728293031 
« Jul   Sep »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d