• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸಿದ್ದಾಪುರ ಮತ್ತು ಬನವಾಸಿಯನ್ನು ಸೇರ್ಪಡಿಸಿ ಸಾಗರ ಜಿಲ್ಲೆ ರಚನೆಗೆ ನಮ್ಮ ವಿರೋಧವಿದೆ: ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಹೇಳಿಕೆ

Kannada News Desk by Kannada News Desk
September 13, 2025
in ಉತ್ತರ ಕನ್ನಡ
0
ಸಿದ್ದಾಪುರ ಮತ್ತು ಬನವಾಸಿಯನ್ನು ಸೇರ್ಪಡಿಸಿ ಸಾಗರ ಜಿಲ್ಲೆ ರಚನೆಗೆ ನಮ್ಮ ವಿರೋಧವಿದೆ: ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ಹೇಳಿಕೆ
0
SHARES
166
VIEWS
WhatsappTelegram Share on FacebookShare on TwitterLinkedin
http://kannadatodaynews.net/wp-content/uploads/2025/09/VID-20250913-WA1300.mp4

ಶಿರಸಿ: ಸಿದ್ದಾಪುರ ತಾಲೂಕು ಹಾಗೂ ಬನವಾಸಿಯನ್ನು ಸೇರ್ಪಡಿಸಿ ಸಾಗರ ಜಿಲ್ಲೆ ರಚನೆಗೆ ನಮ್ಮ ವಿರೋಧವಿದ್ದು, ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟ ಯಶಸ್ವಿಯಾಗುವುದಿಲ್ಲ ಎಂಬ ನಂಬಿಕೆ ಇದೆ. ಆದರೂ ಪ್ರಯತ್ನ ಮುಂದುವರೆದರೆ ಪಕ್ಷಾತೀತ ಹೋರಾಟ ನಡೆಸುತ್ತೇವೆ ಎಂದು ಕದಂಬ ಕನ್ನಡ ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಎಚ್ಚರಿಸಿದರು.

ಅವರು ಶುಕ್ರವಾರ ನಗರದ ಜಿಲ್ಲಾ ಪತ್ರಿಕಾಭವನದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ 3೦ ವರ್ಷಗಳಿಂದ ಘಟ್ಟದ ಮೇಲಿನ ಶಿರಸಿ, ಸಿದ್ದಾಪುರ, ಯಲ್ಲಾಪುರ, ಮುಂಡಗೋಡ, ಹಳಿಯಾಳ, ದಾಂಡೇಲಿ ಒಳಗೊಂಡು ಶಿರಸಿ ಜಿಲ್ಲೆಯಾಗಬೇಕೆಂಬ ಹೋರಾಟ ನಡೆಯುತ್ತಿದೆ. ಕೇಂದ್ರ ಸರ್ಕಾರವು ಡಿ.31 ರ ಒಳಗಡೆ ತಾಲೂಕು ರಚನೆ ಹಾಗೂ ಜಿಲ್ಲೆ ರಚನೆ ಪಟ್ಟಿ ನೀಡಿ ಎಂದು ಕೇಳಿರುವುದನ್ನು ನಾವು ಕೇಳಿ ಸಂತೋಷಗೊಂಡಿದ್ದೆವು. ಶಿರಸಿ ಜಿಲ್ಲೆಯಾಗುತ್ತದೆ ಎಂಬ ವಿಶ್ವಾವಿತ್ತು. ಈ ಹೋರಾಟ ಕೆಡಿಸಬೇಕೆಂದು ಕೆಲವರು ಸಿದ್ದಾಪುರ ಹಾಗೂ ಬನವಾಸಿ ಸೇರಿಸಿಕೊಂಡು ಸಾಗರ ಜಿಲ್ಲೆಯನ್ನಾಗಿ ಮಾಡಲು ಹೊರಟಿದ್ದಾರೆ. ಸಾಗರ ಶಾಸಕ ಗೋಪಾಲಕೃಷ್ಣ ನೇತೃತ್ವದಲ್ಲಿ ಸಿದ್ದಾಪುರದಲ್ಲಿ ಸಭೆಯೂ ನಡೆಯುತ್ತಿದೆ. ಶಿರಸಿ ಪ್ರತ್ಯೇಕ ಜಿಲ್ಲೆಯಾಗಬೇಕೆಂಬ ಕೂಗು ತೀವ್ರವಾಗಿ, ಪಕ್ಷಾತೀಯ ಹೋರಾಟ ಇನ್ನೂ ಹೆಚ್ಚಿನ ರೀತಿಯಲ್ಲಿ ಸಂಘಟಿತವಾಗಬೇಕು. ಬೆಳಗಾವಿಯಲ್ಲಿ ನಡೆಯುತ್ತಿದ್ದ ಚಳಿಗಾಲದ ಅಧಿವೇಶನದಲ್ಲಿ ಶಾಸಕ ಭೀಮಣ್ಣ ನಾಯ್ಕ ಅವರನ್ನು ಭೇಟಿಯಾಗಿ ಶಿರಸಿ ಪ್ರತ್ಯೇಕ ಜಿಲ್ಲೆಯಾಗಲು ನಮ್ಮ ಜತೆ ಕೈಜೋಡಿಸಬೇಕು ಎಂದು ವಿನಂತಿಸಿದಾಗ ನಮ್ಮ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಸಂಸದ ವಿಶ್ವೇಶ್ವರ ಹೆಗಡ ಕಾಗೇರಿ ಅವನ್ನು ಭೇಟಿಯಾಗಿ ವಿನಂತಿಸಿದಾಗ ಅವರೂ ಹೋರಾಟಕ್ಕೆ ಬೆಂಬಲ ನೀಡಿದ್ದರು. ಕೆಲ ದಿನಗಳಿಂದ ಸಿದ್ದಾಪುರ ಹಾಗೂ ಬನವಾಸಿ ಭಾಗವನ್ನು ಸಾಗರಕ್ಕೆ ಸೇರ್ಪಡಿಸಿ, ಜಿಲ್ಲೆ ಮಾಡಲು ಹೋರಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ನಾವೆಲ್ಲರೂ ಒಗ್ಗಟ್ಟಾಗಿ ಖಂಡಿಸಬೇಕು ಎಂದು ಕರೆ ನೀಡಿದರು.

ಕಾರ್ಯದರ್ಶಿ ಎಂ.ಎಂ.ಭಟ್ಟ ಕಾರೇಕೊಪ್ಪ ಮಾತನಾಡಿ, ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಸಾಗರ ಜಿಲ್ಲೆ ಮಾಡಲು ಹೊರಟಿದ್ದಾರೆ.‌ 7 ತಾಲೂಕು ಶಿವಮೊಗ್ಗ ಹತ್ತಿರವಾಗಿದ್ದು, ಉತ್ತರಕನ್ನಡದ ಭೌಗೋಳಿಕ ಪರಿಸ್ಥಿತಿ, ಇಲ್ಲಿಯ ಹೋರಾಟವನ್ನು ಗಮನಿಸಬೇಕು. ಘಟ್ಟದ ಮೇಲಿನ ತಾಲೂಕಿನ ನಾವೆಲ್ಲರೂ ಒಂದು ಕುಟುಂಬದ ರೀತಿಯಲ್ಲಿ ಇದ್ದೇವೆ. ಗೋಪಾಲಕೃಷ್ಣ ಅವರ ಬಳಿಯೂ ಶಾಸಕ ಭೀಮಣ್ಣ ನಾಯ್ಕ ಮಾತನಾಡಿದ್ದಾರೆ. ಯಾವ ಕಾರಣಕ್ಕೂ ಸಿದ್ದಾಪುರವನ್ನು ನಮ್ಮ ಜಿಲ್ಲೆಯಿಂದ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ ಎಂಬುದಾಗಿ ನಮ್ಮ ಶಾಸಕರು ತಿಳಿಸಿದ್ದಾರೆ. ಸಿದ್ದಾಪುರ ತ್ಯಾಗ ಮಾಡಿದ ತಾಲೂಕಾಗಿದೆ. ಶಿರಸಿ ಪ್ರತ್ಯೇಕ ಜಿಲ್ಲೆಗೆ ಸಾಗರದವರು ಸಹಕಾರ ನೀಡಬೇಕು ಎಂದರು.

ಶಿರಸಿ ಜೀವಜಲ ಕಾರ್ಯಪಡೆಯ ಅಧ್ಯಕ್ಷ ಶ್ರೀನಿವಾಸ ಹೆಬ್ಬಾರ್ ಮಾತನಾಡಿ, ಶಿವಮೊಗ್ಗ, ಸಾಗರ ಪ್ರದೇಶದವರು ಇದ್ದ ಕ್ಷೇತ್ರವನ್ನು ಅಭಿವೃದ್ಧಿ ಮಾಡಿ. ಬದಲಾಗಿ ಉತ್ತರಕನ್ನಡ ಜಿಲ್ಲೆಯ ತಾಲೂಕನ್ನು ಸೇರ್ಪಡೆಗೊಳಿಸುವ ಪ್ರಯತ್ನಕ್ಕೆ ಕೈ ಹಾಕಬೇಡಿ. ಅದು ಸಾಧ್ಯವೂ ಇಲ್ಲ. ಸಿದ್ದಾಪುರ ಹಾಗೂ ಬನವಾಸಿ ಉತ್ತರಕನ್ನಡ ಜಿಲ್ಲೆಯ ಜತೆ ನಂಟು ಹೊಂದಿದೆ. ಶಿರಸಿ, ಸಿದ್ದಾಪುರ, ಯಲ್ಲಾಪುರದವರು ಅಣ್ಣ-ತಮ್ಮನ ರೀತಿ ಇದ್ದೇವೆ. ನಮ್ಮಿಂದ ಸಿದ್ದಾಪುರ ಹಾಗೂ ಬನವಾಸಿ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ ಎಂದರು.

ಹಿರಿಯ ಧುರೀಣ ರಮೇಶ ದುಭಾಶಿ ಮಾತನಾಡಿ, ಸಿದ್ದಾಪುರ ಹಾಗೂ ಬನವಾಸಿ ಸೇರಿಸಿ ಸಾಗರ ಜಿಲ್ಲೆಯನ್ನಾಗಿ ಮಾಡುವುದನ್ನು ಶಿರಸಿ ಜನತೆ ಖಂಡಿಸುತ್ತೇವೆ.‌ ಇದು ಅವೈಜ್ಞಾನಿಕವಾಗಿದೆ. ಒಂದೇ ಮನೆತನದ ರೀತಿಯಲ್ಲಿ ನಾವು ಇದ್ದೇವೆ. ಭೌಗೋಳಿಕ, ಆರ್ಥಿಕ, ಸಾಮಾಜಿಕವಾಗಿ ನಾವೆಲ್ಲರೂ ಒಟ್ಟಿಗೆ ಇದ್ದೇವೆ. ಅದನ್ನು ಬೇರ್ಪಡಿಸುವುದು ಎಷ್ಟರಮಟ್ಟಿಗೆ ಸರಿ ಎಂಬುದನ್ನು ಅವರು ಗಮನಿಸಬೇಕು. ಅವೈಜ್ಞಾನ ಪರಿಸ್ಥಿತಿಯಿಂದ ಖಂಡಿತ ಸೋಲು ಆಗುತ್ತದೆ. ಶಿರಸಿ ಜಿಲ್ಲೆ ಹೋರಾಟ ಒಂದು ಹಂತಕ್ಕೆ ಹೋಗಿದೆ.‌ ಅದಕ್ಕೆ ಕಲ್ಲು ಹಾಕುವುದು ಒಳ್ಳೆಯದಲ್ಲ ಎಂದು ಹೇಳಿದರು.

ಅಭಿವೃದ್ಧಿ ವಿಚಾರದಲ್ಲಿ ಹೋರಾಟ ಸಹಜ. ಆದರೆ ಜಿಲ್ಲೆಯ ಅಸ್ಮಿತೆ ಪ್ರಶ್ನೆ ಬಂದಾಗ, ಪಕ್ಷಬೇಧ ಬದಿಗಿಟ್ಟು ನಾವೆಲ್ಲರೂ ಒಂದಾಗಿ ಹೋರಾಟ ಮಾಡುತ್ತೇವೆ. ಶಾಸಕ ಭೀಮಣ್ಣ ಹಾಗು ಸಂಸದ ಕಾಗೇರಿಯವರು ನಮ್ಮ ಜಿಲ್ಲಾ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು. ಒಂದಾಗಿ ಹೋರಾಟ ಮಾಡಿದ್ದಲ್ಲಿ ಜಿಲ್ಲೆಯಾಗುವುದು ನಿಶ್ಚಿತ ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ತಿಳಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಅಂಕೋಲಾ ತಾಲೂಕು ಘಟಕವನ್ನು ಉದ್ಘಾಟಿಸಿ  ತಹಶೀಲ್ದಾರ್  ಚಿಕಪ್ಪ ನಾಯಕ

Next Post

ಭಟ್ಕಳ: ಜನತಾ ಕೋ-ಆಪ್ ಕ್ರೆಡಿಟ್ ಸೊಸೈಟಿ ೩.೨೮ ಕೋಟಿ ನಿವ್ವಳ ಲಾಭ – ಶೇ.೧೦ರಂತೆ ಲಾಭಾಂಶ ಘೋಷಣೆ

Kannada News Desk

Kannada News Desk

Next Post
ಭಟ್ಕಳ: ಜನತಾ ಕೋ-ಆಪ್ ಕ್ರೆಡಿಟ್ ಸೊಸೈಟಿ ೩.೨೮ ಕೋಟಿ ನಿವ್ವಳ ಲಾಭ – ಶೇ.೧೦ರಂತೆ ಲಾಭಾಂಶ ಘೋಷಣೆ

ಭಟ್ಕಳ: ಜನತಾ ಕೋ-ಆಪ್ ಕ್ರೆಡಿಟ್ ಸೊಸೈಟಿ ೩.೨೮ ಕೋಟಿ ನಿವ್ವಳ ಲಾಭ – ಶೇ.೧೦ರಂತೆ ಲಾಭಾಂಶ ಘೋಷಣೆ

Please login to join discussion

ಕ್ಯಾಲೆಂಡರ್

September 2025
MTWTFSS
1234567
891011121314
15161718192021
22232425262728
2930 
« Aug   Oct »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d