• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Friday, February 27, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಶಿವಮೊಗ್ಗ ಜಿಲ್ಲೆಯ ಸಾಗರದ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೊಬ್ಬ ಕಡು ಭ್ರಷ್ಟ , ಲಂಚಬಾಕ ವೈದ್ಯ ಡಾಕ್ಟರ್ ನಾಗೇಂದ್ರಪ್ಪ?

Kannada News Desk by Kannada News Desk
October 4, 2024
in ರಾಜ್ಯ ಸುದ್ದಿ
0
ಶಿವಮೊಗ್ಗ ಜಿಲ್ಲೆಯ ಸಾಗರದ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೊಬ್ಬ ಕಡು ಭ್ರಷ್ಟ , ಲಂಚಬಾಕ ವೈದ್ಯ ಡಾಕ್ಟರ್ ನಾಗೇಂದ್ರಪ್ಪ?
0
SHARES
1k
VIEWS
WhatsappTelegram Share on FacebookShare on TwitterLinkedin

ಶಿವಮೊಗ್ಗ ಜಿಲ್ಲೆಯ ಸಾಗರದ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲೊಬ್ಬ ಕಡು ಭ್ರಷ್ಟ , ಲಂಚಬಾಕ ವೈದ್ಯ ಡಾಕ್ಟರ್ ನಾಗೇಂದ್ರಪ್ಪ?

ಸಾಗರ-ಶಿವಮೊಗ್ಗ ಜಿಲ್ಲೆಯ ಸಾಗರದ ತಾಲೂಕಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯು ಇಲ್ಲಿರುವ ವೈದ್ಯ ನಾಗೇಂದ್ರಪ್ಪ ಎಂಬ ರೌಡಿ , ಹಣಬಾಕ , ಲಂಚಭಾಕ ವೈದ್ಯನಿಂದ ಈ ಆಸ್ಪತ್ರೆಯು ಕಳಂಕದತ್ತ ಹೊರಟಿರುವುದು ವಿಪರ್ಯಾಸ..!!

ಈ ನಾಗೇಂದ್ರಪ್ಪನ ಆಟ ಎಷ್ಟಿದೆಯೆಂದರೆ ಇಲ್ಲಿ ನಾನಾಡಿದ್ದೇ ಆಟ, ನಾನೇ ಡಾಕ್ಟರ್ ನಾ ಹೇಗಿರಬೇಕು ಹಾಗೆ ಇರ್ತೀನಿ ಅದನ್ನು ಹೇಳಕ್ಕೆ ನೀನ್ಯಾರು? ಎಫ್ರಾನ್, ಸ್ಕೆತಸ್ಕೋಪ್ ಹಾಕಿಕೊಂಡ್ರೆ ವೈದ್ಯ, ಕೈಯಲ್ಲಿ ಲಾಂಗ್, ಮಚ್ಚು ಹಿಡಿದ್ರೆ ರೌಡಿ. ಇಲ್ಲಿ ಡಿಸಿ, ಎಸ್‌ಪಿ, ಮೀಡಿಯಾ ಯಾರೇ ಬಂದ್ರೂ ಏನೂ ಮಾಡಿಕೊಳ್ಳೋಕೆ ಆಗಲ್ಲ ಎಂದು ಸಿನಿಮಾ ಡೈಲಾಗ್ ಹೊಡೆಯುತ್ತಾ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ನನ್ನ ಕ್ಲಾಸ್ ಮೇಟ್ ಎಂದು ದರ್ಪದಿಂದ ವರ್ತಿಸುವ ಈ ವೈದ್ಯನ ಎಡವಟ್ಟು ಒಂದಾ ಎರಡಾ? ಸರಿಯಾಗಿ ಹೆರಿಗೆ ಮಾಡದೇ ಇರೋದು, ಹೆರಿಗೆ ಮಾಡಿದ ಮೇಲೆ ಹೊಲಿಗೆ ಸರಿಯಾಗಿ ಹಾಕದೇ ನಿರ್ಲಕ್ಷ್ಯ ತೋರಿಸೋದು ಸೇರಿದಂತೆ ಹಲವಾರು.ಈ ರೌಡಿ ಡಾಕ್ಟರ್ ಮಾಡೋ ಎಡವಟ್ಟಿನಿಂದಾಗಿ ಶಿಕ್ಷೆ ಅನುಭವಿಸಿದವರು ನೂರಾರು ಬಡ ಗರ್ಭಿಣಿಯರು, ಬಾಣಂತಿಯರು, ಮಹಿಳೆಯರು. ಈತನ ನವರಂಗಿ ಆಟಗಳಿಗೆ ಆಸ್ಪತ್ರೆಯಲ್ಲಿರುವ ಕೆಲವು ರೋಹಿಣಿ ನಕ್ಷತ್ರಗಳು ಸಾಥ್.

ಈ ಆಸ್ಪತ್ರೆಯಲ್ಲಿ ವಿಷನಾಗ ಡ್ಯೂಟಿಯಲ್ಲಿದ್ದಾಗ ಹೆರಿಗೆಗೂ ಮುಂಚೆ 5 ರಿಂದ 10 ಸಾವಿರ ಹಣ ಲಂಚ ಕೊಟ್ಟರೆ ನಿಮಗೆ ರಾಯಲ್ ಟ್ರೀಟ್ ಮೇಂಟ್ ಸ್ಪೆಷಲ್ ವಾರ್ಡ್ , ಅತ್ಯುತ್ತಮ ನರ್ಸ್ ಸೇವೆ ಎಲ್ಲಾ ಅವನ ಕಡೆಯಿಂದ ಲಭ್ಯ , ಒಂದು ವೇಳೆ ನೀವು ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಗೆ ಹಣ ಯಾಕೆ ನೀಡಬೇಕು ಅಂತ ಸುಮ್ಮನಿದ್ದರೆ ಆ ಬಾಣಂತಿಗೆ ಬೆಡ್ ಕೂಡಾ ಸಿಗಲು ಬಿಡುವುದಿಲ್ಲ ಈ ಪಾಪಿ ಡಾಕ್ಟರ್ ನಾಗೇಂದ್ರಪ್ಪ…

ಈ ಹಿಂದೆ ಡಾ.ನಾಗೇಂದ್ರಪ್ಪನ ಎಡವಟ್ಟಿನ ಕಾರಣ ಬಾಣಂತಿಯೊಬ್ಬರು ಹೆರಿಗೆಯ ನಂತ್ರ ಹೊಟ್ಟೆ ಊತ ಬಂದು, ಹೊಟ್ಟೆಯೊಳಗಡೆ ರಕ್ತ್ರಸ್ತ್ರಾವ ಉಂಟಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಸಾವು ಬದುಕಿನ ನಡುವೆ ಚಿಕಿತ್ಸೆಯ ನಂತ್ರ ಗುಣಮುಖರಾಗಿದ್ದರು.ಈ ಬಗ್ಗೆ ಕೆಲವೊಂದು ಮಾದ್ಯಮಗಳು ವರದಿ‌ ಮಾಡಿದ್ದವು.. ಹೀಗೆ ರೋಗಿಗಳ ಬಗ್ಗೆ ನಿರ್ಲಕ್ಷ್ಯ ವಹಿಸುವಂತ ಡಾ.ನಾಗೇಂದ್ರಪ್ಪ ಸಾಗರದಲ್ಲಿ ಬೇಡವೇ ಬೇಡವೆಂದು ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಇಲ್ಲಿಂದ ಎತ್ತಂಗಡಿ ಮಾಡಿದ್ದರು.ಆದರೇ ಮತ್ತೆ ರಾಜಕೀಯ ಒತ್ತಡದ ಮೂಲಕ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ಮರಳಿ ವಕ್ಕರಿಸಿರುವ ನಾಗೇಂದ್ರಪ್ಪ ತನ್ನ ಹಳೇ ಛಾಳಿ ಬಿಟ್ಟು ಎಚ್ಚೆತ್ತುಕೊಂಡು ವೈದ್ಯೋ ನಾರಾಯಣೋ ಹರಿಯ ರೀತಿಯಲ್ಲಿ ಕೆಲಸ ಮಾಡಬೇಕಿದ್ದಂತ ಡಾ.ನಾಗೇಂದ್ರಪ್ಪ ಮಾತ್ರ, ಈಗ ಮತ್ತೆ ಗೂಂಡಾ ವರ್ತನೆ ತೋರಿದ್ದಾರೆ.

ಈ ನಾಗೇಂದ್ರಪ್ಪ ಈಗ ಸರ್ಕಾರಿ ವೈದ್ಯ ಬಾಣಂತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿ ಗೂಂಡಾ ವರ್ತನೆ ತೋರಿದ್ದಾರೆ ಎಂದು ಕೆಲವು ಸಂಘಟನೆಗಳು ಆರೋಪಿಸುತ್ತಿವೆ.

ಮಕ್ಕಳ ಶಸ್ತ್ರ ಚಿಕಿತ್ಸೆಗಾಗಿ ಆಗಮಿಸಿದ್ದಂತ ಸಾಗರ ತಾಲ್ಲೂಕಿನ ಚಿಪ್ಪಳಿಯ ಚೈತ್ರ ಎಂಬುವರಿಗೆ ಆಪರೇಷನ್ ನಂತರ ಡಾ.ನಾಗೇಂದ್ರಪ್ಪ ಅವರು ಕಪಾಳ ಮೋಕ್ಷ ಮಾಡಿರುವುದಾಗಿ ಆರೋಪಿಸಿದ್ದಾರೆ. ಡಾ.ನಾಗೇಂದ್ರಪ್ಪ ಆಪರೇಷನ್ ಮಾಡಿದ ನಂತರ ಹೊಲಿಗೆ ಹಾಕುವ ಸಂದರ್ಭದಲ್ಲಿ ನನಗೆ ಕಪಾಳಕ್ಕೆ ಭಾರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನೂ ಚೈತ್ರಾ ರವರ ಪತಿ ಮಾತನಾಡಿ ನಾಲ್ಕು ತಿಂಗಳ ಗರ್ಭಿಣಿಯಾಗಿದ್ದಂತ ಚೈತ್ರ ಅವರನ್ನು ಮಕ್ಕಳ ಆಪರೇಶನ್ ಗೆ ಕರೆತರಲಾಗಿತ್ತು. ಪ್ರಜ್ಞೆ ತಪ್ಪಿದ್ದಾರೆ ಅಂತ ಡಾ.ನಾಗೇಂದ್ರಪ್ಪ ಹೀಗಾ ಕಪಾಳಕ್ಕೆ ಹೊಡೆಯೋದು.? ಇವರದ್ದು ಇದೇನು ಮೊದಲೇನಲ್ಲ. ಈ ಮೊದಲು ಅನೇಕ ಎಡವಟ್ಟುಗಳನ್ನು ಮಾಡಿದ್ದಾರೆ. ಡಾ.ನಾಗೇಂದ್ರಪ್ಪ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಸೇವೆಯಿಂದ ಅಮಾನತುಗೊಳಿಸಬೇಕು ಎಂಬುದಾಗಿ ಆಗ್ರಹಿಸಿದರು.

ಡಾ.ನಾಗೇಂದ್ರಪ್ಪ ಅವರು ಬಾಣಂತಿ ಮಹಿಳೆಗೆ ಕಪಾಳಮೋಕ್ಷ ಮಾಡಿದಂತಹ ವಿಷಯ ತಿಳಿದಂತ ಮೊಗವೀರ ಸಮುದಾಯ ಹಾಗೂ ಭಜರಂಗ ದಳದ ಮುಖಂಡರು ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು. ಡಾ.ನಾಗೇಂದ್ರಪ್ಪ ಅವರ ಎಡವಟ್ಟು, ಗುಂಡಾಗಿರಿ ಹೆಚ್ಚಾಗಿದೆ. ಅವರನ್ನು ಕೂಡಲೇ ಅಮಾತನಗೊಳಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಒಟ್ಟಾರೆಯಾಗಿ ಸರ್ಕಾರಿ ಆಸ್ಪತ್ರೆಯ ವೈದ್ಯರಾಗಿ ಉತ್ತಮ ನಡೆಯನ್ನು ತೋರಬೇಕಿದ್ದಂತ ಡಾ.ನಾಗೇಂದ್ರಪ್ಪ ಅವರೇ ಏನಿದು ನಿಮ್ಮ ಗೂಂಡಾಗಿರಿ.? ಜಿಲ್ಲಾ ಉಸ್ತುವಾರಿ ಸಚಿವರು ನಿಮ್ಮ ಕ್ಲಾಸ್ ಮೇಟ್ ಮತ್ತು ಸ್ವಜಾತಿಯವರು ಎನ್ನುವ ಅಹಂಕಾರವೇ..!!? ಸಾಗರದಂತಹ ಉತ್ತಮ ಆಸ್ಪತ್ರೆಯಲ್ಲಿ ನಿಮ್ಮಂತಹ ಹಣಬಾಕ , ಗೂಂಡಾ ವರ್ತನೆಯ ವೈದ್ಯರ ಅವಶ್ಯಕತೆಯಿಲ್ಲ ದಯವಿಟ್ಟು ಆಸ್ಪತ್ರೆ ಬಿಟ್ಟು ತೊಲಗಿ….

ಈ ವೈದ್ಯನ ಯಡವಟ್ಟಿನ ಬಗ್ಗೆ ಆರೋಗ್ಯ ಇಲಾಖೆ , ಜಿಲ್ಲಾ ಉಸ್ತುವಾರಿ ಸಚಿವರು ಇನ್ನದರೂ ಸೂಕ್ತ ಕ್ರಮ ಕೈಗೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಈ ಲಂಚಬಾಕ ವೈದ್ಯ ನಾಗೇಂದ್ರಪ್ಪನ ಬಗ್ಗೆ ಬರೆದಿರುವ ಪ್ರತಿಯೊಂದು ಆರೋಪಕ್ಕೂ ನಮ್ಮ ಬಳಿ ಸಾಕ್ಶ್ಯಗಳಿವೆ , ಅವನ ವಿರುದ್ದ ಬಳಸಿರುವ ಪ್ರತಿಯೊಂದು ಪದಬಳಕೆ ನಾನು ಆಲೋಚಿಸಿಯೇ ಬರೆದಿರುತ್ತೇನೆ. ಯಾವುದೇ ಕಾನೂನು ಹೋರಾಟಕ್ಕೂ ಸಿದ್ದನಿದ್ದೇನೆ ಸಾಮಾಜಿಕ ಹೋರಾಟ ಗಾರ ರಫ಼ಿ ರಿಪ್ಪನ್‌ಪೇಟೆ ತಿಳಿಸಿದ್ದಾರೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಉಚ್ಛ ಮತ್ತು ಸವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿಗಳ ನೇಮಕಾತಿಯಲ್ಲಿ ಸಾಮಾಜಿಕ ನ್ಯಾಯ ಪಾಲನೆ ಅವಶ್ಯ- ಹಿರಿಯ ವಕೀಲ ರವೀಂದ್ರ ನಾಯ್ಕ.

Next Post

ಲಂಚ ಸ್ವೀಕರಿಸಿ ಲೋಕಾಯುಕ್ತರ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿಗಳಿಗೆ ಜಾಮೀನು ನೀಡಲು ನಿರಾಕರಿಸಿ ಜೈಲಗೆ ಕಳುಸಿದ ಕೋರ್ಟ್

Kannada News Desk

Kannada News Desk

Next Post
ಮಂಗಳೂರಿನಲ್ಲಿ ಲಂಚಕ್ಕೆ ಆಸೆ ಪಟ್ಟ ಭ್ರಷ್ಟರನ್ನು ಬೇಟೆ ಆಡಿದ ಲೋಕಾಯುಕ್ತ ರು

ಲಂಚ ಸ್ವೀಕರಿಸಿ ಲೋಕಾಯುಕ್ತರ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿಗಳಿಗೆ ಜಾಮೀನು ನೀಡಲು ನಿರಾಕರಿಸಿ ಜೈಲಗೆ ಕಳುಸಿದ ಕೋರ್ಟ್

Please login to join discussion

ಕ್ಯಾಲೆಂಡರ್

October 2024
MTWTFSS
 123456
78910111213
14151617181920
21222324252627
28293031 
« Sep   Nov »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d