• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, April 23, 2026
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ದಕ್ಷಿಣಕಾಶಿ ಗೋಕರ್ಣ ಪಂಚಾಯತ್ ವ್ಯಾಪ್ತಿಯಲ್ಲಿ 70ಲಕ್ಷ ರೂಪಾಯಿ ವಿಶೇಷ ಅನುದಾನ ನಿರ್ಮಿಸಲಾದ ಕಸವಿಲೇವಾರಿ ಘಟಕ :ಮುಗಿಯದ ಕಸದ ಸಮಸ್ಯೆ

Kannada News Desk by Kannada News Desk
October 18, 2024
in ಉತ್ತರ ಕನ್ನಡ
0
ದಕ್ಷಿಣಕಾಶಿ ಗೋಕರ್ಣ ಪಂಚಾಯತ್ ವ್ಯಾಪ್ತಿಯಲ್ಲಿ 70ಲಕ್ಷ ರೂಪಾಯಿ ವಿಶೇಷ ಅನುದಾನ ನಿರ್ಮಿಸಲಾದ ಕಸವಿಲೇವಾರಿ ಘಟಕ :ಮುಗಿಯದ ಕಸದ ಸಮಸ್ಯೆ
0
SHARES
253
VIEWS
WhatsappTelegram Share on FacebookShare on TwitterLinkedin

ಗೋಕರ್ಣ: ಕಸವಿಲೇವಾರಿ ಸಮಸ್ಯೆಗೆ ಮುಕ್ತಿ ಹಾಡುವ ನಿಟ್ಟಿನಲ್ಲಿ ದಕ್ಷಿಣಕಾಶಿ ಗೋಕರ್ಣ ಪಂಚಾಯತ್ ವ್ಯಾಪ್ತಿಯಲ್ಲಿ 70ಲಕ್ಷ ರೂಪಾಯಿ ವಿಶೇಷ ಅನುದಾನ ನಿರ್ಮಿಸಲಾದ ಕಸವಿಲೇವಾರಿ ಘಟಕ ನಿರ್ಮಾಣವಾದರೂ ಬೇಕಾಬಿಟ್ಟಿ ಕಸ ಎಸೆಯುವ ಮೂಲಕ ಸರಕಾರದ ಹಣವನ್ನ ಕಸದ ರಾಶಿಯಲ್ಲಿ ಎಸೆದಂತಾಗಿದೆ..

ಗೋಕರ್ಣ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆ ಹಾಗೂ ಹೊಟೋಲ್‌ಗಳಿಂದ ಸಂಗ್ರಹಿಸಲಾಗಿದ್ದ ಕಸವನ್ನ ಅಶೋಕೆಯಲ್ಲಿನ ಬಯಲು ಪ್ರದೇಶದಲ್ಲಿ ಬೇಕಾಬಿಟ್ಟಿಯಾಗಿ ಎಸೆಯಲಾಗುತ್ತಿತ್ತು. ಇದರಿಂದ ಪರಿಸರ ಕೂಡ ಕಲುಷಿತವಾಗುತ್ತಿರುವುದಲ್ಲದೆ. ಸುತ್ತಮುತ್ತಲಿನ ಕುಡಿಯುವ ನೀರಿನ ಬಾವಿಗಳು ಕಲುಷಿತಗೊಳ್ಳುವುದಷ್ಟೆ ಅಲ್ಲದೆ.‌ಜಾನುವಾರುಗಳು ಸಹ ಬಿಸಾಕಿದ ಪ್ಲಾಸ್ಟಿಕ್ ತಿಂದು ಪ್ರಾಣ ಕಳೆದುಕೊಳ್ಳುವಂತಹ ಪರಿಸ್ಥಿತಿ ಎದುರಾಗಿತ್ತು. ನಂತರದಲ್ಲಿ ಇಲ್ಲಿ ಕಸ ಎಸೆಯಂತೆ ಸಾರ್ವಜನಿಕರು ವಿರೋಧ ಸಹ ಮಾಡಿದ್ದರು, ಆದರೂ ಕಸ ಎಸೆಯುವುದು ನಿಂತಿರಲ್ಲ.

ಈ ಬಗ್ಗೆ ಸ್ಥಳೀಯರು ದೊಡ್ಡಮಟ್ಟದಲ್ಲಿ ಹೋರಾಟವನ್ನ ಕೂಡ ಮಾಡಿ ಈ ಭಾಗದಲ್ಲಿ ಕಸವಿಲೇವಾರಿ ಘಟಕ ನಿರ್ಮಾಣ ಮಾಡವಂತೆ ಪಟ್ಟು ಹಿಡಿದಿದ್ದು, ಹೋರಾಟದ ಫಲವಾಗಿ ಅದೆ ಸ್ಥಳದಲ್ಲೇ ಸುಮಾರು 70ಲಕ್ಷ ವಿಶೇಷ ಅನುದಾನದಲ್ಲಿ ಘಟಕ ಸ್ಥಾಪನೆಗೆ ಸಹ ಮುಂದಾಗಲಾಗಿತ್ತು. ಆಗಲು ಸಹ ಸಾರ್ವಜನಿಕರು ಬೇರೆಡೆ ಘಟಕ ಸ್ಘಾಪನೆ ನಿರ್ಮಾಣ ಮಾಡುವಂತೆ ಕೂಡ ಹೋರಾಟ ನಡೆಸಿದ್ದರೂ. ಆದರೆ ಜಿಲ್ಲಾಡಳಿತ ಹಾಗೂ ಸ್ಥಳೀಯ ಗ್ರಾಮ ಪಂಚಾಯತ್ ಸಾರ್ವಜನಿಕರ ವಿರೋಧದ ನಡುವೆ ಸಹ ಅದೆ ಸ್ಥಳದಲ್ಲಿ ಕಸವಿಲೇವಾರಿ ಘಟಕವನ್ನ ನಿರ್ಮಾಣ ಮಾಡಿದ್ದಾರೆ.

ಬಳಿಕ 70 ಲಕ್ಷ ರೂಪಾಯಿ ವೆಚ್ಚದಲ್ಲಿ ಕಾಮಗಾರಿ ಗುತ್ತಿಗೆ ಪಡೆದ ಗುತ್ತಿಗೆದಾರರು ಕಾಮಗಾರಿಯನ್ನ ಆರಂಭಿಸಿ ಅದನ್ನ ಪೂರ್ಣಗೊಳಿಸದೆ ಕಾಮಗಾರಿಗಾಗಿ ಮಂಜೂರಾದ 70ಲಕ್ಷ ಹಣವನ್ನ ಸಮರ್ಪಕವಾಗಿ ಖರ್ಚುಮಾಡದೆ ಅರ್ಧಕ್ಕೆ ಕಾಮಗಾರಿ ಮುಗಿಸಿ ಕೈ ತೊಳೆದುಕೊಂಡಿದ್ದಾರೆಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ಇನ್ನೂ ಗ್ರಾಮ ಪಂಚಾಯತದಿಂದ ಸಂಗ್ರಹಿಸಲಾಗುತ್ತಿರುವ ಕಸವನ್ನ ಈ ಹಿಂದೆ ಎಸೆಯಲಾಗುತ್ತಿದ್ದ ಬಯಲು ಪ್ರದೇಶದಲ್ಲೇ ಎಸೆಯಲಾಗುತ್ತಿದ್ದು, ದುರ್ನಾತ ಬಿರುತ್ತಿರುವುದರ ಜೊತಗೆ ಆ ಭಾಗದ ಸುತ್ತಮುತ್ತಲಿನ ಕುಡಿಯುವ ನೀರಿನ ಬಾವಿಗಳ ನೀರು ಸಹ ಕಲುಷಿತವಾಗುತ್ತಿದ್ದು, ಜನ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಬಗ್ಗೆ ಸ್ಥಳೀಯರು ಅನೇಕ ಭಾರಿ ಗ್ರಾಮ ಪಂಚಾಯತ ಗ್ರಾಮ ಸಭೆಯಲ್ಲಿ ಪ್ರಶ್ನೆ ಮಾಡುತ್ತಲೇ ಬಂದಿದ್ದು, ಸಮಸ್ಯೆಗೆ ಇದುವರಗೆ ಪರಿಹಾರ ಸಿಗದಂತಾಗಿದೆ.ಹೀಗಾಗಿ ನಿತ್ಯವೂ ಸ್ಥಳೀಯರು ಕಸವಿಲೇವಾರಿ ಘಟಕದ ದುರ್ವಾಸನೆಯಲ್ಲಿ ಕಾಲ ಕಳೆಯು ಪರಿಸ್ಥಿತಿ ಒಂದು ಕಡೆಯಾದರೆ. ನೂರಾರು ಜಾನುವಾರುಗಳು ಇಲ್ಲಿ ಬಿಸಾಕುವ ಪ್ಲಾಸ್ಟಿಕ್ ವಸ್ತುಗಳನ್ನ ತಿಂದು ಸಾಯುವಂತಾಗಿದೆ. ಇದರಿಂದಾಗಿ ರೈತರ ಕೊಟ್ಟಿಗೆಯಲ್ಲಿದ್ದ ಜಾನುವಾರುಗಳ ಸಂಖ್ಯೆ ಸಹ ಕಡಿಮೆಯಾಗುವಂತಾಗಿದೆ.ಈ ಬಗ್ಗೆ ಸಂಬಂಧಿಸಿದ ಅಧಿಕಾರಿಗಳು ತಕ್ಷಣ ಕಸವಿಲೇವಾರಿ ಘಟಕ ಸಮಸ್ಯೆಗೆ ಪರಿಹಾರ ಕಂಡು ಕೊಳ್ಳದೆ ಹೋದರೆ ಇನ್ನೂ ಕೆಲ ದಿನದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭನೆ ನಡೆಸಲು ಸಜ್ಜಾಗಿದ್ದಾರೆ.

ಪ್ರವಾಸಿಗರ ಗೋಳು ಕೇಳೋರು ಯಾರು..?
ಪ್ರತಿನಿತ್ಯವೂ ಸಹ ರಾಜ್ಯ ಸೇರಿದಂತೆ ಹೊರ ರಾಜ್ಯದಿಂದ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಇಲ್ಲಿ ಸುದಂರ ಕಡಲತೀರ ಹಾಗೂ ದೇವಸ್ಥಾನಕ್ಕೆ ಆಗಮಿಸುತ್ತಾರೆ. ಯಾರೆ ಇಲ್ಲಿನ ದೇವಸ್ಥಾನಕ್ಕೆ ಬಂದರು ಇಲ್ಲರುವ ಪ್ರಮುಖ ಬೀಚಗಳಿಗೆ ಭೇಟಿ ನೀಡದೆ ವಾಪಸ್ ಹೋಗುವುದು ತುಂಬಾ ವಿರಳ. ಹೀಗಾಗಿ ಕಡಲ‌ತೀರಕ್ಕೆ ಹೋಗಿ ಬರುವ ಪ್ರವಾಸಿಗರು ಸಹ ಈ ದುರ್ನಾತವನ್ನ ಪಡೆದೆ ಮುಂದೆ ಸಾಗಬೇಕಾದ‌ ಪರಿಸ್ಥಿತಿ ವಿದೇಶ ಮಟ್ಟದಲ್ಲಿ ಖ್ಯಾತಿ ಪಡೆದಿರುವ ಗೋಕರ್ಣದಲ್ಲಿ ನಿರ್ಮಾಣವಾಗಿರುವುದು ಮಾತ್ರ ದುರಂತ..

Share this:

  • Share on WhatsApp (Opens in new window) WhatsApp
  • Share on Telegram (Opens in new window) Telegram
  • Share on Facebook (Opens in new window) Facebook
  • Share on X (Opens in new window) X

Like this:

Like Loading...

Related

Previous Post

ನ. 7 ರ ಬೆಂಗಳೂರು ಚಲೋ: ರಾಜ್ಯ ಮಟ್ಟದ ಅರಣ್ಯವಾಸಿಗಳ ಬೃಹತ್ ಶಕ್ತಿ ಪ್ರದರ್ಶನಕ್ಕೆ ತೀರ್ಮಾನ- ರಾಜ್ಯಾಧ್ಯಕ್ಷ ರವೀಂದ್ರ ನಾಯ್ಕ.

Next Post

ಉತ್ತರ ಕನ್ನಡ ಜಿಲ್ಲೆಯಲ್ಲಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ತಕ್ಷಣ ಮುಚ್ಚುವಂತೆ ಮಂಕಾಳ ವೈದ್ಯ ಅಧಿಕಾರಿಗಳಿಗೆ ಸೂಚನೆ

Kannada News Desk

Kannada News Desk

Next Post
ಉತ್ತರ ಕನ್ನಡ ಜಿಲ್ಲೆಯಲ್ಲಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ತಕ್ಷಣ ಮುಚ್ಚುವಂತೆ ಮಂಕಾಳ ವೈದ್ಯ ಅಧಿಕಾರಿಗಳಿಗೆ ಸೂಚನೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ರಸ್ತೆಯಲ್ಲಿ ಬಿದ್ದಿರುವ ಗುಂಡಿಗಳನ್ನು ತಕ್ಷಣ ಮುಚ್ಚುವಂತೆ ಮಂಕಾಳ ವೈದ್ಯ ಅಧಿಕಾರಿಗಳಿಗೆ ಸೂಚನೆ

Please login to join discussion

ಕ್ಯಾಲೆಂಡರ್

October 2024
MTWTFSS
 123456
78910111213
14151617181920
21222324252627
28293031 
« Sep   Nov »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d