• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಐಸಿಸ್‌ ಉಗ್ರ ಸಂಘಟನೆ ಶಾಖೆ ತೆರೆಯಲು ದಕ್ಷಿಣ ಭಾರತದ ನಾಲ್ಕು ರಾಜ್ಯಗಳಲ್ಲಿ ಶಂಕಿತ ಉಗ್ರ ಶಾರೀಕ್‌ ಸುತ್ತಾಡಿ ಪ್ರಯತ್ನ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
November 25, 2022
in ಬ್ರೇಕಿಂಗ್ ನ್ಯೂಸ್
0
ಐಸಿಸ್‌ ಉಗ್ರ ಸಂಘಟನೆ ಶಾಖೆ ತೆರೆಯಲು ದಕ್ಷಿಣ ಭಾರತದ ನಾಲ್ಕು ರಾಜ್ಯಗಳಲ್ಲಿ ಶಂಕಿತ ಉಗ್ರ ಶಾರೀಕ್‌ ಸುತ್ತಾಡಿ ಪ್ರಯತ್ನ
0
SHARES
188
VIEWS
WhatsappTelegram Share on FacebookShare on TwitterLinkedin

*ಐಸಿಸ್‌ ಉಗ್ರ ಸಂಘಟನೆ ಶಾಖೆ ತೆರೆಯಲು ದಕ್ಷಿಣ ಭಾರತದ ನಾಲ್ಕು ರಾಜ್ಯಗಳಲ್ಲಿ ಶಂಕಿತ ಉಗ್ರ ಶಾರೀಕ್‌ ಸುತ್ತಾಡಿ ಪ್ರಯತ್ನ

 

ಮಂಗಳೂರು-ಮಂಗಳೂರು ಕುಕ್ಕರ್‌ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತೀರ್ಥಹಳ್ಳಿಯ ಮೊಹಮ್ಮದ್‌ ಶಾರೀಕ್‌ ಕಳೆದ ಕೆಲ ತಿಂಗಳಿನ ಹಿಂದೆ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ಕೇರಳದ ರಾಜ್ಯಗಳ ಗಡಿ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿದ್ದು, ಈ ಮೂಲಕ ಐಸಿಸ್‌ ಉಗ್ರ ಸಂಘಟನೆ ದಕ್ಷಿಣ ಭಾರತದ ಕಾಡಿನಲ್ಲಿ ಇಸ್ಲಾಮಿಕ್‌ ಸ್ಟೇಟ್‌ ಪ್ರಾಂತ್ಯ ಸ್ಥಾಪಿಸಲು ಸಿದ್ಧತೆ ನಡೆಸಿದೆ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.

*ಈ ಹಿಂದೆ ಅಲ್‌-ಹಿಂದ್‌ ಸಂಘಟನೆ ತೀರ್ಥಹಳ್ಳಿಯ ಮೊಹಮ್ಮದ್‌ ಮತೀನ್‌ ತಾಹಾ ಕೂಡ ಕೆಲ ಅರಣ್ಯ ಪ್ರದೇಶಗಳಿಗೆ ಭೇಟಿ ನೀಡಿದ್ದ. ಆ ವೇಳೆ ಶಾರೀಕ್‌ ಕೂಡ ಜತೆಗೆ ಹೋಗಿದ್ದ. ಆದರೆ. ಮತೀನ್‌ ವಿರುದ್ಧ ಸುದ್ದಗುಂಟೆಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸರು, ಕೇಂದ್ರ ಮತ್ತು ರಾಜ್ಯ ತನಿಖಾ ಸಂಸ್ಥೆಗಳು ಶೋಧಿಸಲು ಆರಂಭಿಸಿದಾಗ ತಲೆಮರೆಸಿಕೊಂಡಿದ್ದ. ಆಗ ಆತನ ಕೆಲ ಯೋಜನೆಗಳು ಅರ್ಧಕ್ಕೆ ನಿಂತಿತ್ತು. ಜತೆಗೆ ಈಗಾಗಲೇ ಕೇರಳ ಮತ್ತು ತಮಿಳುನಾಡಿನ ಅರಣ್ಯ ಪ್ರದೇಶದಲ್ಲಿ ಪ್ರಾಂತ್ಯ ಸ್ಥಾಪಿಸುವ ಪ್ರಕ್ರಿಯೆ ಆರಂಭಿಸಲಾಗಿತ್ತು. ಆದರೆ, ಪೂರ್ಣಗೊಂಡಿರಲಿಲ್ಲ,. ಹೀಗಾಗಿ ಮತ್ತೂಮ್ಮೆ ಶಾರೀಕ್‌ಗೆ ನಾಲ್ಕು ರಾಜ್ಯಗಳಲ್ಲಿ ಓಡಾಟ ನಡೆಸಲು ಸೂಚಿಸಿದ್ದ ಎಂಬುದು ಗೊತ್ತಾಗಿದೆ.*

*ಶಿವಮೊಗ್ಗದ ತುಂಗಾ ನದಿ ತಟದಲ್ಲಿ ಸುಧಾರಿತಾ ಸ್ಫೋಟಕ ಸಾಧನ(ಐಇಡಿ) ತಯಾರಿಕಾ ಪ್ರಕರಣದಲ್ಲಿ ತಲೆಮರೆಸಿಕೊಂಡ ಬಳಿಕ ಮತೀನ್‌ ಸೂಚನೆ ಮೇರೆಗೆ ಕರ್ನಾಟಕದ ಬಂಡೀಪುರ, ಕೋಲಾರ, ಕೊಡಗು, ಕೇರಳದ ಕಣ್ಣೂರು, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿರುವ ಒಟ್ಟು ಐದಾರು ಅರಣ್ಯ ಪ್ರದೇಶಗಳನ್ನು ಆಯ್ಕೆ ಮಾಡಿಕೊಂಡು, ಅಲ್ಲಿನ ಸ್ಥಳಗಳ ಬಗ್ಗೆ ಮಾಹಿತಿ ಸಂಗ್ರಹಿಸಿ ಮತೀನ್‌ಗೆ ಟೆಲಿಗ್ರಾಂ ಮೂಲಕ ಕಳುಹಿಸಿದ್ದ. ಎಂದು ಮೂಲಗಳು ತಿಳಿಸಿವೆ.*

*ಒಂದೊಂದು ಪ್ರಾಂತ್ಯದಲ್ಲಿ 50ರಿಂದ 100 ಮಂದಿ ಉಗ್ರರು ಕಾರ್ಯನಿರ್ವಹಿಸುವಂತೆ ಮಾಡುವುದು ಸಂಘಟನೆ ಉದ್ದೇಶವಾಗಿತ್ತು. ಇಲ್ಲಿಯೇ ತರಬೇತಿ ನೀಡಿ ವಿಧ್ವಂಸಕ ಕೃತ್ಯಗಳು ಮತ್ತು ಹಿಂದೂ ಮುಖಂಡರು ಹಾಗೂ ಧಾರ್ಮಿಕ ಕೇಂದ್ರಗಳ ಮೇಲೆ ದಾಳಿಗೆ ಸಂಚು ರೂಪಿಸಲಾಗಿತ್ತು. ಹೀಗಾಗಿ ಶಾರೀಕ್‌ ಧಾರ್ಮಿಕ ಕೇಂದ್ರಗಳು ಮತ್ತು ಹಿಂದೂ ಮುಖಂಡರು ಹೆಚ್ಚು ಸಕ್ರಿಯವಾಗಿರುವ ಪ್ರದೇಶಗಳ ಸಮೀಪದಲ್ಲಿರುವ ಅರಣ್ಯ ಪ್ರದೇಶಗಳ ಬಗ್ಗೆ ಮಾಹಿತಿ ಪಡೆದುಕೊಂಡು ಅವುಗಳ ಫೋಟೋ ಮತ್ತು ವಿಡಿಯೋಗಳನ್ನು ತೆಗೆದು ಟೆಲಿಗ್ರಾಂ ಮತ್ತು ಇತರೆ ಡಾರ್ಕ್‌ವೆಬ್‌ ಮೂಲಕ ಕಳುಹಿಸಿದ್ದ.*

*ಈ ಮಧ್ಯೆ 2020ರ ಸುದ್ದುಗುಂಟೆಪಾಳ್ಯ ಪ್ರಕರಣದ ಕೆಲ ಆರೋಪಿಗಳು ಅರಣ್ಯ ಪ್ರದೇಶದದಲ್ಲಿ ಇಸ್ಲಾಮಿಕ್‌ ಸ್ಟೇಟ್‌ನ ಟೀ ಶರ್ಟ್‌ ಧರಿಸಿಕೊಂಡು ಫೋಟೋ ತೆಗೆಸಿಕೊಂಡಿದ್ದರು. ಆ ಫೋಟೋ ವೈರಲ್‌ ಕೂಡ ಆಗಿತ್ತು. ಹೀಗಾಗಿ ಆ ಸ್ಥಳವನ್ನು ಪತ್ತೆ ಹಚ್ಚಲು ಕೇಂದ್ರ ತನಿಖಾ ಸಂಸ್ಥೆಗಳು ಮುಂದಾಗಿದ್ದವು. ಈ ಮಧ್ಯೆ ಶಾರೀಕ್‌ ಕೂಡ ಈ ತಂಡದ ಸದಸ್ಯರ ಜತೆ ಅರಣ್ಯ ಪ್ರದೇಶದಲ್ಲಿ ಐಸಿಸ್‌ ಪ್ರಾಂತ್ಯ ಸ್ಥಾಪಿಸುವ ಯೋಜನಾ ತಂಡದಲ್ಲಿದ್ದ ಎಂದು ಹೇಳಲಾಗಿತ್ತು. ಹೀಗಾಗಿ ಆತನ ಮೊಬೈಲ್‌ ಅನ್ನು ಸಂಪೂರ್ಣವಾಗಿ ರಿಟ್ರೈವ್‌ ಮಾಡಲಾಗುತ್ತಿದೆ. ಈ ಮೊದಲು ಇಸ್ಲಾಮಿಕ್‌ ಸ್ಟೇಟ್‌ನ ಸದಸ್ಯರು ಶಿವನಸಮುದ್ರ ಮತ್ತು ತಮಿಳುನಾಡಿನ ರತ್ನಗಿರಿ ಕಾಡಿನಲ್ಲಿ ಸ್ಥಳ ಗುರುತಿಸಿ, ಶಸ್ತ್ರಾಸ್ತ್ರ ತರಬೇತಿಗೆ ಸಿದ್ದತೆ ನಡೆಸಿದ್ದರು. ಅಲ್ಲದೆ, ಕೋಲಾರ, ಕೊಡಗು ಭಾಗದಲ್ಲೂ ಸ್ಥಳ ಶೋಧಿಸಿ ಗುರುತಿಸಿದ್ದರು ಎಂದು ಮೂಲಗಳು ತಿಳಿಸಿವೆ.*

*ಹಿಂದೂ ಮುಖಂಡರು, ದೇವಾಲಯಗಳೇ ಟಾರ್ಗೆಟ್‌:*

*ಐಸಿಸ್‌ ಸಂಘಟನೆ ಮತ್ತು ಅದರ ಪ್ರೇರಿತ ಸಂಘಟನೆಗಳಾದ ಅಲ್‌-ಉಮಾ ಮತ್ತು ಅಲ್‌-ಹಿಂದ್‌ ಸಂಘಟನೆಗಳು ಹಿಂದೂ ಮುಖಂಡರು ಮತ್ತು ದೇವಾಲಯಗಳೇ ಟಾರ್ಗೆಟ್‌ ಆಗಿವೆ. 2019ರಲ್ಲಿ ತಮಿಳುನಾಡಿನಲ್ಲಿ ಹಿಂದೂ ಮುಖಂಡ ಸುರೇಶ್‌ ಹತ್ಯೆಗೈಯಲಾಗಿತ್ತು. ನಂತರ ಬೆಂಗಳೂರಿನಲ್ಲಿ ಹಿಂದೂ ಮುಖಂಡರಿಗಾಗಿ ಶೋಧಿಸುವಾಗ ಸುದ್ದುಗುಂಟೆಪಾಳ್ಯದಲ್ಲಿ ಶಂಕಿತರನ್ನು ಬಂಧಿಸಲಾಗಿತ್ತು. ಶಿವಮೊಗ್ಗದಲ್ಲಿ ನಡೆದ ಸಾವರ್ಕರ್‌ ಗಲಾಟೆ ವೇಳೆ ಯಾರಾದರೂ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಆದರೆ, ಪೊಲೀಸರು ಕ್ಷೀಪ್ರಕಾರ್ಯಾಚರಣೆ ನಡೆಸಿದ್ದರಿಂದ ಅದು ವಿಫ‌ಲಗೊಂಡಿತ್ತು. ಆ ಬಳಿಕವೂ ಮಂಗಳೂರು, ಶಿವಮೊಗ್ಗ, ಹುಬ್ಬಳ್ಳಿಯಲ್ಲಿ ತೀವ್ರಗಾವಿ ಹಿಂದೂ ಮುಖಂಡರಿಗಾಗಿ ಶೋಧ ಕಾರ್ಯ ನಡೆಯುತ್ತಿತ್ತು. ಅಲ್ಲದೆ, ಹಿಂದೂಗಳ ಪರವಾಗಿ ಕೆಲಸ ಮಾಡುವ ಸರ್ಕಾರಿ ಅಧಿಕಾರಿಗಳು ಕೂಡ ಸಂಘಟನೆ ಗುರಿಯಾಗಿತ್ತು ಎಂಬುದು ಗೊತ್ತಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.*

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಸುಪ್ರೀಂಕೋರ್ಟ್‌ನಲ್ಲಿ ಗಡಿ ವಿಚಾರಣೆ – ಮಹಾರಾಷ್ಟ್ರದಲ್ಲಿ ಕರ್ನಾಟಕ ಬಸ್‌ಗೆ ಕಪ್ಪು ಮಸಿ ಬಳಿದ ಮರಾಠಿ ಭಾಷಿಕ ಪುಂಡರು

Next Post

ಡಿ. ೧೦ ರಂದು ರಾಜ್ಯಮಟ್ಟದ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿ; ಐತಿಹಾಸಿಕ ಜಾಥವನ್ನಾಗಿ ಸಂಘಟಿಸಲು ತಿರ್ಮಾನ- ರವೀಂದ್ರ ನಾಯ್ಕ.

Kannada News Desk

Kannada News Desk

Next Post
ಡಿ. ೧೦ ರಂದು ರಾಜ್ಯಮಟ್ಟದ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿ; ಐತಿಹಾಸಿಕ ಜಾಥವನ್ನಾಗಿ ಸಂಘಟಿಸಲು ತಿರ್ಮಾನ- ರವೀಂದ್ರ ನಾಯ್ಕ.

ಡಿ. ೧೦ ರಂದು ರಾಜ್ಯಮಟ್ಟದ ಅರಣ್ಯವಾಸಿಗಳನ್ನ ಉಳಿಸಿ ರ‍್ಯಾಲಿ; ಐತಿಹಾಸಿಕ ಜಾಥವನ್ನಾಗಿ ಸಂಘಟಿಸಲು ತಿರ್ಮಾನ- ರವೀಂದ್ರ ನಾಯ್ಕ.

Please login to join discussion

ಕ್ಯಾಲೆಂಡರ್

November 2022
MTWTFSS
 123456
78910111213
14151617181920
21222324252627
282930 
    Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d