• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, October 22, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸಾಹಿತ್ಯ, ಕಾವ್ಯ ಸಿರಿಯ ಜೊತೆಯಲ್ಲಿ ಕಲಾಸಿರಿಯು ಬೆಳೆಯಲಿ : ಡಾ.ಆರ್.ವಿ.ಸರಾಫ್.

Kannada News Desk by Kannada News Desk
November 3, 2023
in ಉತ್ತರ ಕನ್ನಡ
0
ಸಾಹಿತ್ಯ, ಕಾವ್ಯ ಸಿರಿಯ ಜೊತೆಯಲ್ಲಿ ಕಲಾಸಿರಿಯು ಬೆಳೆಯಲಿ : ಡಾ.ಆರ್.ವಿ.ಸರಾಫ್.
0
SHARES
108
VIEWS
WhatsappTelegram Share on FacebookShare on TwitterLinkedin

ಸಾಹಿತ್ಯ, ಕಾವ್ಯ ಸಿರಿಯ ಜೊತೆಯಲ್ಲಿ ಕಲಾಸಿರಿಯು ಬೆಳೆಯಲಿ : ಡಾ.ಆರ್.ವಿ.ಸರಾಫ್.

ಭಟ್ಕಳ : ಸಾಹಿತ್ಯ, ಕಾವ್ಯ ಸಿರಿಯ ಜೊತೆಯಲ್ಲಿ ಕಲಾಸಿರಿಯು ಬೆಳೆಯಲಿ ಎಂದು ಸಾಹಿತಿ ಡಾ.ಆರ್.ವಿ.ಸರಾಫ್ ನುಡಿದರು. ಅವರು ಇಲ್ಲಿನ ಚಿತ್ರಾಪುರದಲ್ಲಿ ಉ.ಕ.ಜಿಲ್ಲಾ ಕಸಾಪ ಹಾಗೂ ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ನವಂಬರ್ ಮಾಸದುದ್ದಕ್ಕೂ ನಡೆಯುವ ಕನ್ನಡ ಕಾರ್ತಿಕ ಕಾರ್ಯಕ್ರಮದಡಿಯಲ್ಲಿ ಮನೆಯಂಗಳದಲ್ಲಿ ಕಾವ್ಯೋತ್ಸವ ಹಾಗೂ ಕಲಾಸಿರಿ ಪ್ರತಿಷ್ಠಾನದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಿದ್ದರು. ರಾಜ್ಯೋತ್ಸವ ಮಾಸದಲ್ಲಿ ಮನೆಯಂಗಳದಲ್ಲಿ ಕಾವ್ಯೋತ್ಸವ ಆಯೋಜಿಸಿರುವುದು ಹಾಗೂ ಅದಕ್ಕೆ ಇಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು ಪಾಲ್ಗೊಂಡಿರುವುದು ಸಾಹಿತ್ಯ ಸಮ್ಮೇಳನದಲ್ಲಿ ಪಾಲ್ಗೊಂಡಷ್ಟೇ ಸಂತೋಷವೆನಿಸುತ್ತಿದೆ. ಭಟ್ಕಳದ ನೆಲದಲ್ಲಿ ಸಾಹಿತ್ಯಿಕ‌ ಕಾರ್ಯಕ್ರಮಗಳಿಗೆ ಸಾಹಿತ್ತಾಸಕ್ತರು ಹೆಚ್ಚು ಹೆಚ್ಚು ಭಾಗವಹಿಸುತ್ತಿರುವುದು ಮನಸಿಗೆ ಹಿತ ಕೊಡುವಂಥದ್ದು ಎಂದರಲ್ಕದೇ ಶ್ರೀಧರ ಶೇಟ್ ಅವರ ಕಲಾಸಿರಿ ಪ್ರತಿಷ್ಠಾನದ ಮೂಲಕವೂ ಸಾಹಿತ್ಯಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ಹೆಚ್ಚು ನಡೆಯಲಿ ಎಂದು ಶುಭಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಾಹಿತಿ ಡಾ.ಸಯ್ಯದ ಝಮೀರುಲ್ಲ ಷರೀಫ ಮಾತನಾಡಿ ಕಾವ್ಯ ಸೃಷ್ಟಿ ಸುಲಭವಲ್ಲ.ಪ್ರತಿಭೆ,ಸ್ಪೂರ್ತಿ, ಭಾಷಾ ಸಂಪತ್ತು ಇದ್ದಾಗ ಕಾವ್ಯ ಸೃಷ್ಟಿಯಾಗುತ್ತದೆ. ಹೊಸ ಹೊಸ ವಿಷಯ ಆಯ್ಕೆಮಾಡಿಕೊಂಡು ಕಾವ್ಯದ ಮೂಲಕ ಸಮಾಜಕ್ಕೆ ಸಂದೇಶ ಮಾರ್ಗದರ್ಶನವನ್ನು ನೀಡುವಂಥ ಕವಿತೆಗಳು ಸೃಷ್ಠಿಯಾಗಬೇಕೆಂದು ನುಡಿದು ಕವಿಗೋಷ್ಠಿಯಲ್ಲಿ ಕವಿತೆ ವಾಚಿಸಿದ ಕವಿಗಳಿಗೆ ಶುಭಹಾರೈಸಿದರು. ಭಟ್ಕಳ ತಾಲೂಕಾ ಕನ್ನಡ ಸಾಹಿತ್ಯ ಪರಿಷತ್ತು ನಿರಂತರವಾಗಿ ಕಾರ್ಯಕ್ರಮಗಳನ್ನು ಸಂಘಟಿಸಿ ಸಾಹಿತ್ಯ ಮತ್ತು ಸಾಹಿತ್ಯ ಪರಿಷತ್ತನ್ನು ಜನರೆಡೆಗೆ ಹಾಗೆಯೇ ಜನರನ್ನೂ ಸಾಹಿತ್ಯದೆಡೆಗೆ ತರುತ್ತಿರುವುದು ನಿಜಕ್ಕೂ ಹೆಮ್ಮೆ ಪಡುವಂಥ ವಿಷಯ ಎಂದು ನುಡಿದರಲ್ಲದೇ ಕಲಾಸಿರಿ ಪ್ರತಿಷ್ಠಾನವು ಸಾಹಿತ್ಯ ಸಂಸ್ಕೃತಿಗೆ ಉತ್ತೇಜನ ನೀಡುವಂತಾಗಲಿ ಎಂದರು. ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಆಶಯ ನುಡಿಗಳನ್ನಾಡಿ ಭಟ್ಕಳ ತಾಲೂಕಾ ಸಾಹಿತ್ಯ ಸಮ್ಮೇಳನಾಧ್ಯಕ್ಷತೆಯ ಗೌರವಕ್ಕೆ ಭಾಜನರಾದ ಡಾ.ಜಮಿರುಲ್ಲ ಷರೀಪ್, ಡಾ. ಆರ್. ವಿ. ಸರಾಫ್, ಪಿ.ಆರ್.ನಾಯ್ಕ, ಶ್ರೀಧರ ಶೇಟ್, ಮಾನಾಸುತ ಈ ಐವರು ಸಾಹಿತಿಗಳು ಒಂದೇ ವೇದಿಕೆಯಲ್ಲಿರುವುದು ಅತ್ಯಂತ ವಿಶೇಷ ಮಾತ್ರವಲ್ಲ ಇಂದಿನ ಕಾರ್ಯಕ್ರಮದ ಘನತೆಯನ್ನೂ ಹೆಚ್ಚಿಸಿದೆ. ಪರಿಷತ್ತನ್ನು ಕಟ್ಟಿ ಬೆಳೆಸಿದ ಹಿರಿಯರ ಮಾರ್ಗದರ್ಶನದಲ್ಲಿ ನಾವೆಲ್ಲರು ಕನ್ನಡದ ಕೆಲಸ ಮಾಡುತ್ತಿರುವುದೇ ಖುಷಿಕೊಡುವ ಸಂಗತಿ ಎಂದರು. ಪರಿಷತ್ತಿನಂದ ನವೆಂಬರ್ ಮಾಸದಲ್ಲಿ ನಾಲ್ಕು ಕಾರ್ಯಕ್ರಮಗಳನ್ನು ಸಂಘಟಿಸಲಾಗಿದ್ದು ಇಂದು ಮನೆಯಂಗಳದಲ್ಲಿ ಕಾವ್ಯೋತ್ಸವ, ನವೆಂಬರ್ ೧೪ ರಂದು ಸರ್ಕಾರಿ‌ ಪ್ರೌಢಶಾಲೆ ಗೊರಟೆಯಲ್ಲಿ ಗೀತಗಾಯನ ಸ್ಪರ್ಧೆ, ೨೨ ನೇ ತಾರೀಕಿನಂದು ದಿ ನ್ಯೂ ಇಂಗ್ಲಿಷ್ ಪ.ಪೂ.ಕಾಲೇಜಿನಲ್ಲಿ ಕನ್ನಡ ನಾಡು ನುಡಿ‌ ಪ್ರಬಂಧ ಸ್ಪರ್ಧೆ, ೨೭ನೇ ತಾರೀಕಿನಂದು ಸರ್ಕಾರಿ ಪ್ರೌಢಶಾಲೆ ಬೈಲೂರಿನಲ್ಲಿ ಕನ್ನಡ ನಾಡು ನುಡಿಯ ಕುರಿತು ಭಾಷಣ ಸ್ಪರ್ಧೆಯು ನಡೆಯಲಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪಿ.ಆರ್.ನಾಯ್ಕ, ನಿವೃತ್ತ ಪ್ರಾಂಶುಪಾಲ ಡಾ.ಆರ್.ನರಸಿಂಹಮೂರ್ತಿ, ಸಾಹಿತಿ ಮಾನಾಸುತ ಶಂಭು ಹೆಗಡೆ, ನಾರಾಯಣ ಯಾಜಿ ಶಿರಾಲಿ, ಮಾತನಾಡಿದರು. ಕಾವ್ಯೋತ್ಸವದಲ್ಲಿ ಪ್ರೊ. ಆರ್.ಎಸ್.ನಾಯಕ, ನೇತ್ರಾವತಿ ಆಚಾರ್ಯ, ಎಂ.ಡಿ.ಪಕ್ಕಿ, ಪೂರ್ಣಿಮಾ ಮುರ್ಡೇಶ್ವರ, ಮಂಜುನಾಥ ನಾಯ್ಕ ಯಲ್ವಡಿಕವೂರ್,ಎಚ್.ಎನ್.ನಾಯ್ಕ, ಉಮೇಶ ಸರ್ಪನಕಟ್ಟೆ, ಇಂದುಮತಿ ಬಿ.ಜೆ., ಸುರೇಶ ಮುರ್ಡೇಶ್ವರ, ಗಣಪತಿ ಕಾಯ್ಕಿಣಿ, ಕೃಷ್ಣ ಮೊಗೇರ ಅಳ್ವೆಕೋಡಿ, ಚಂದ್ರಶೇಖರ ಪಡುವಣಿ ಸ್ವರಚಿತ ಕವಿತೆಯನ್ನು ವಾಚಿಸಿದರು. ಸಾಹಿತ್ಯ ಪರಿಷತ್ತಿನ ಗೌರವ ಕೋಶಾಧ್ಯಕ್ಷ
ಕಲಾಸಿರಿ ಪ್ರತಿಷ್ಠಾನದ ಸಂಚಾಲಕ ಶ್ರೀಧರ ಶೇಟ್ ಎಲ್ಲರನ್ನು ಸ್ವಾಗತಿಸಿದರಲ್ಲದೇ ಡಾ.ಆರ್.ವಿ.ಸರಾಫ್,.ಡಾ
ಜಮಿರುಲ್ಲ ಷರೀಫ್, ಡಾ. ನರಸಿಂಹ ಮೂರ್ತಿ, ಜಿಲ್ಲಾ ಕಸಾಪ ಗೌರವ ಕಾರ್ಯದರ್ಶಿ ಪಿ.ಆರ್.ನಾಯ್ಕ, ಮಾನಾಸುತ ಶಂಭು ಹೆಗಡೆ, ಹಾಗೂ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಇವರನ್ನು ಸನ್ಮಾನಿಸಿದರಲ್ಲದೇ ಕಾವ್ಯೋತ್ಸವದಲ್ಲಿ ಪಾಲ್ಗೊಂಡ ಎಲ್ಲ ಕವಿಗಳಿಗೆ ಶಾಲು ಹೊದಿಸಿ ಪುಸ್ತಕ ಕಾಣಿಕೆ ನೀಡಿದರು. ಹೇಮಲತಾ ರಾವ್ ಕಾರ್ಯಕ್ರಮ ನಿರೂಪಿಸಿದರೆ ಶ್ರೀಶಾ ಶ್ರೀಧರ ಶೇಟ್ ಸಹಕರಿಸಿದರು. ಕಸಾಪ ಸಂಘಟನಾ ಕಾರ್ಯದರ್ಶಿ ಸಂತೋಷ ಆಚಾರ್ಯ ವಂದಿಸಿದರು. ಕಾರ್ಯಕ್ರಮದಲ್ಲಿ ಕಸಾಪ ಗೌರವ ಕಾರ್ಯದರ್ಶಿ ನಾರಾಯಣ ನಾಯ್ಕ, ಕೃಷ್ಣಾನಂದ ಶೇಟ್ ಮತ್ತು ಮಂಗಲಾ ಕೃಷ್ಣಾನಂದ ಶೇಟ್, ಶೀತಲಾ ಚಿತ್ರಾಪುರ ಮುಂತಾದವರು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕಾಗಿ ಆಗ್ರಹಿಸಿ ಶಿರಸಿಯ ಸಮಾಜ ಸೇವಕ ಅನಂತಮೂರ್ತಿ ಹೆಗಡೆ ನೇತೃತ್ವದಲ್ಲಿ ಸಿರಸಿಯಿಂದ ಕಾರವಾರ ಜಿಲ್ಲಾಧಿಕಾರಿ ಕಚೇರಿಗೆ ಪದಾಯಾತ್ರೆ ಆರಂಭ

Next Post

ಬಿಜೆಪಿ ಎಂ..ಎಲ್.ಎ ಟಿಕೆಟ್ ಕೊಡಿಸುವುದಾಗಿ ಗೋವಿಂದ ಬಾಬು ಪೂಜಾರಿಗೆ 7 ಕೋಟಿ ವಂಚನೆ ಪ್ರಕರಣ-ಜೈಲುಪಾಲಾಗಿರುವ 3ನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಗೆ ಜಾಮೀನು ಮಂಜೂರು

Kannada News Desk

Kannada News Desk

Next Post
ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ ಪ್ರಕರಣ-ಇನ್ನೋರ್ವ ಪ್ರಮುಖ ಆರೋಪಿ ಹಾಲಶ್ರೀಯ ಸಿಸಿಬಿ ಪೊಲೀಸರಿಂದ ಬಂಧನ

ಬಿಜೆಪಿ ಎಂ..ಎಲ್.ಎ ಟಿಕೆಟ್ ಕೊಡಿಸುವುದಾಗಿ ಗೋವಿಂದ ಬಾಬು ಪೂಜಾರಿಗೆ 7 ಕೋಟಿ ವಂಚನೆ ಪ್ರಕರಣ-ಜೈಲುಪಾಲಾಗಿರುವ 3ನೇ ಆರೋಪಿಯಾಗಿರುವ ಅಭಿನವ ಹಾಲಶ್ರೀಗೆ ಜಾಮೀನು ಮಂಜೂರು

Please login to join discussion

ಕ್ಯಾಲೆಂಡರ್

November 2023
MTWTFSS
 12345
6789101112
13141516171819
20212223242526
27282930 
« Oct   Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d