• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, October 21, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕಲಾಸಿರಿಯಲ್ಲಿ ಕಾವ್ಯಸಿರಿಯು ಅರಳಿದೆ: ಪಿ.ಆರ್.ನಾಯ್ಕ

Kannada News Desk by Kannada News Desk
November 3, 2024
in ಉತ್ತರ ಕನ್ನಡ
0
ಕಲಾಸಿರಿಯಲ್ಲಿ ಕಾವ್ಯಸಿರಿಯು ಅರಳಿದೆ: ಪಿ.ಆರ್.ನಾಯ್ಕ
0
SHARES
391
VIEWS
WhatsappTelegram Share on FacebookShare on TwitterLinkedin

ಭಟ್ಕಳ : ರಾಜ್ಯೋತ್ಸವದ ನಿಮಿತ್ತ ಕಲಾಸಿರಿಯಲ್ಲಿ ಹಮ್ಮಿಕೊಂಡಿರುವ ಕವಿಗೋಷ್ಠಿಯಲ್ಲಿ ಕಾವ್ಯಸಿರಿಯೇ ಅರಳಿ, ವಿಭಿನ್ನವಾಗಿ ಮತ್ತು ವಿಶಿಷ್ಟವಾಗಿ ಜರುಗಿ ದೀಪಾವಳಿಯ ಸೊಬಗನ್ನು ಹೆಚ್ಚಿಸಿದೆ
ಎಂದು ಸಾಹಿತಿ ಮತ್ತು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ನ
ಗೌರವ ಕೋಶಾಧ್ಯಕ್ಷ ಪಿ .ಆರ್. ನಾಯ್ಕ ನುಡಿದರು. ಅವರು ಇಲ್ಲಿನ ಚಿತ್ರಾಪುರದಲ್ಲಿ ಸಾಹಿತಿ ಶ್ರೀಧರ್ ಶೇಟ್ ಅವರ ಸ್ವಗೃಹ ಕಲಾಸಿರಿಯಲ್ಲಿ ಜಿಲ್ಲಾ ಕಸಾಪ,ಭಟ್ಕಳ ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕಲಾಸಿರಿ ಪ್ರತಿಷ್ಠಾನದ ವತಿಯಿಂದ ನವೆಂಬ‌ರ್ ಮಾಸದುದ್ದಕ್ಕೂ ನಡೆಯುವ ಕನ್ನಡ ಕಾರ್ತಿಕ ಕಾರ್ಯಕ್ರಮದ ಮನೆಯಂಗಳದಲ್ಲಿ ಕಾವೋತ್ಸವ ಹಾಗೂ ಕಲಾಸಿರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಆಪ್ತವಾದ ಮಾತು ಕತೆ, ಸಾಹಿತ್ಯದ ಹೆಜ್ಜೆಗುರುತು , ಅನಿಸಿದ್ದನ್ನು ಗೀಚಿ ಓದಿದ ಕಾವ್ಯಾನುಭವ, ಮನೆ ಮಂದಿಯಂತೆ ಎಲ್ಲರೂ ಸಂಕೋಚವಿಲ್ಲದ ಮಾತಿನ ಭರಾಟೆಯ ಸಂಗಮದಲ್ಲಿ ನಡೆದ ಕವಿಗೋಷ್ಠಿಯು ದೀಪಾವಳಿಯ ಹಬ್ಬದ ಸಂಭ್ರಮವನ್ನು ಇಮ್ಮಡಿಗೊಳಿಸಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಕವಿಗಳು ಮತ್ತು ಸಾಹಿತ್ಯಾಸಕ್ತರು ಪಾಲ್ಗೊಂಡಿರುವುದು ನೋಡಿದರೆ ಸಾಹಿತ್ಯ ಸಮ್ಮೇಳನವನ್ನು ನೆನಪಿಸುವಂತಿದ್ದು, ಭಟ್ಕಳದ ನೆಲದಲ್ಲಿ ಸಾಹಿತ್ಯಕ ಕಾರ್ಯಕ್ರಮಗಳಿಗೆ ಸಾಹಿತ್ಯಾಸಕ್ತರು ಹೆಚ್ಚು ಹೆಚ್ಚು ಭಾಗವಹಿಸುತ್ತಿರುವುದು ಮನಸಿಗೆ ಹಿತ ಕೊಡುವಂಥದ್ದು ಎಂದರು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಭಟ್ಕಳ ಕಸಾಪ ಅಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ, ಭಟ್ಕಳ ತಾಲೂಕ ಸಾಹಿತ್ಯ ಸಮ್ಮೇಳನಾಧ್ಯಕ್ಷತೆ ವಹಿಸಿದ್ದ ಪಿ.ಆರ್.ನಾಯ್ಕ, ಶ್ರೀಧರ ಶೇಟ್, ಮಾನಾಸುತ ಶಂಭು ಹೆಗಡೆ ವೇದಿಕೆಯಲ್ಲಿರುವುದು ಕಾರ್ಯಕ್ರಮದ ಘನತೆಯನ್ನು ಹೆಚ್ಚಿಸಿದೆ. ಈ ಹಿಂದೆ ಪರಿಷತ್ತನ ಜವಾಬ್ದಾರಿಯನ್ನು ನಿರ್ವಹಿಸಿದ ಎಲ್ಲ‌ ಅಧ್ಯಕ್ಷರುಗಳು ಪರಿಷತ್ತನ್ನು ಕಟ್ಟಿ ಬೆಳೆಸಿದ್ದಾರೆ‌. ಎಲ್ಲ ಹಿರಿಯರ ಮಾರ್ಗದರ್ಶನದಲ್ಲಿ ವಿಧಾಯಕ ಕಾರ್ಯಕ್ರಮಗಳ ಮೂಲಕ ಜನರನ್ನು ತಲುಪಲು ಎಲ್ಲರ ಸಹಕಾರ ಅಪೇಕ್ಷಿಸುವುದಾಗಿ ತಿಳಿಸಿದರು. ಕವಿಗೋಷ್ಟಿಯಂಥ ಕಾರ್ಯಕ್ರಮದ ಮೂಲಕ ತಾಲೂಕಿನ ಎಲ್ಲ ಬರೆಹಗಾರರಿಗೆ ವೇದಿಕೆಯನ್ನೊದಗಿಸಲು ಪ್ರಯತ್ನಿಸಲಾಗುತ್ತಿದೆ ಎಂದರಲ್ಲದೇ ಸುಂದರ ಕವಿತೆಗಳನ್ನು ವಾಚಿಸಿದ ಎಲ್ಲ ಕವಿಗಳನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸುಮಾರು 30-35 ವರ್ಷಗಳಿಂದ ಸಾಹಿತ್ಯ ಕೃಷಿಯನ್ನು ಮಾಡಿಕೊಂಡು ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರಾಗಿ,ನಾಟಕಕಾರರಾಗಿ, ಸಮಾಜ ಸೇವಕರಾಗಿ ನ್ಯಾಯವಾದಿಗಳಾಗಿ ಸೇವೆ ಸಲ್ಲಿಸುತ್ತಾ ಬಂದಿರುವ ಹಿರಿಯ ಸಾಹಿತಿ ಶಂಕರ ಕೆ. ನಾಯ್ಕ ರವರಿಗೆ ಕಲಾಸಿರಿ ಪ್ರಶಸ್ತಿಯನ್ನು ನೀಡಲಾಯಿತು. ಜನತಾ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ 21 ವರ್ಷಗಳ ಶಿಕ್ಷಣ ಸೇವೆ ಸಲ್ಲಿಸಿದ ಪ್ರಾಂಶುಪಾಲ ಅಮೃತ ರಾಮರಥ ದಂಪತಿಗಳು ದಾಂಡೇಲಿಗೆ ವರ್ಗಾವಣೆಗೊಂಡಿರುವ ಪ್ರಯುಕ್ತ ಕಲಾಸಿರಿ ಪ್ರತಿಷ್ಠಾನದ ವತಿಯಿಂದ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.ಸನ್ಮಾನ ಸ್ವೀಕರಿಸಿದ ಶಂಕರ ನಾಯ್ಕ ಮತ್ತು ಅಮೃತ ರಾಮರಥ ಮಾತನಾಡಿ ಈ ಸನ್ಮಾನದ ಮೂಲಕ ತಮ್ಮ ಜವಾಬ್ದಾರಿ ಇನ್ನಷ್ಟು ಹೆಚ್ಚಾಗಿದೆ ಎಂದರು.ವೇದಿಕೆಯಲ್ಲಿ ಉಪಸ್ಥಿತರಿದ್ದ ಸಾಹಿತಿಗಳಾದ ನಾರಾಯಣ ಯಾಜಿ ಶಿರಾಲಿ, ಮಾನಸುತ ಶಂಭು ಹೆಗಡೆ ಮತ್ತು ಶಿರಾಲಿ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷ ವೆಂಕಟೇಶ ನಾಯ್ಕ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಲಾಸಿರಿ ಪ್ರತಿಷ್ಠಾನದ ಸಾಹಿತ್ಯ ಸೇವೆಯನ್ನು ಪ್ರಶಂಸಿಸಿ ಮಾತನಾಡಿದರು .

ಭಟ್ಕಳ ಕಸಾಪ ಗೌರವ ಕೋಶಾಧ್ಯಕ್ಷ ಹಾಗೂ ಕಲಾಸಿರಿ ಪ್ರತಿಷ್ಠಾನದ ಸಂಚಾಲಕ ಸಾಹಿತಿ ಶ್ರೀಧರ್ ಶೇಟ್ ಸರ್ವರನ್ನು ಸ್ವಾಗತಿಸಿ ಆಶಯ ನುಡಿಗಳನ್ನಾಡಿದರು.ಕವಿಗೋಷ್ಠಿಯಲ್ಲಿ ಕವಿಗಳಾದ ಎಂ.ಡಿ.ಪಕ್ಕಿ, ವೆಂಕಟೇಶ ಬೈಲೂರು, ಎಂ.ಜಿ. ತಿಲೋತ್ತಮೆ, ಮಂಜುನಾಥ ನಾಯ್ಕ ಯಲ್ವಡಿ ಕವೂರ್,
ಸವಿತಾ ನಾಯ್ಕ, ಚಂದ್ರಶೇಖರ ಪಡುವಣಿ,ಜಯಶ್ರೀ ಆಚಾರಿ, ಹೇಮಲತಾ ಶ್ರೀಧರ್, ಕೆ.ಎಲ್.ಶಾನಭಾಗ್,
ರಾಜೀವಿ ಎಂ ಮೊಗೇರ, ನಂದನ ನಾಯ್ಕ,ಪ್ರಸಾದ ಶಾನಭಾಗ ಸ್ಟರಚಿತ ಕವನಗಳನ್ನು ವಾಚಿಸಿದರು.ಕಲಾಸಿರಿ ಪ್ರತಿಷ್ಠಾನದ ಕಾರ್ಯದರ್ಶಿ ಶಿಕ್ಷಕಿ ಹೇಮಲತಾ ಶ್ರೀಧರ ಶೇಟ್ ಕಾರ್ಯಕ್ರಮ ನಿರೂಪಿಸಿ,ವಂದಿಸಿದರು.ತಾಲೂಕ ಕಸಾಪ ಕಾರ್ಯದರ್ಶಿ ನಾರಾಯಣ ನಾಯ್ಕ,ಶ್ರೀಶಾ ಶೇಟ್,ಮಿತಾ ರಾಮರಥ, ಸುರೇಶ ಮುರ್ಡೇಶ್ವರ, ಮಂಜುನಾಥ ಕೋಡಿಹಿತ್ಲು,ರಾಜಂ ಹಿಚ್ಕಡ,ದೀಪಕ ನಾಯ್ಕ, ಶೀತಲಾ ಚಿತ್ರಾಪುರ ಇನ್ನಿತರರು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಭಟ್ಕಳ ತಾಲೂಕ ಪತ್ರಕರ್ತರ ಸಂಘದ ಅಧ್ಯಕ್ಷರಾದ *ಶ್ರೀ ವಿಷ್ಣುದೇವಡಿಗ ಅವರಿಗೆ ತಾಲ್ಲೂಕು ಮಟ್ಟದ ಕನ್ನಡ ರಾಜ್ಯೋತ್ಸವದ ಪ್ರಶಸ್ತಿ*

Next Post

ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡದ ಜನಪ್ರತಿನಿದಿಯ ವರ್ತನೆಗೆ ಕನ್ನಡ ಸಾಹಿತ್ಯ ಪರಿಷತ್ ಖಂಡನೆ.

Kannada News Desk

Kannada News Desk

Next Post
ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡದ ಜನಪ್ರತಿನಿದಿಯ ವರ್ತನೆಗೆ ಕನ್ನಡ ಸಾಹಿತ್ಯ ಪರಿಷತ್ ಖಂಡನೆ.

ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡದ ಜನಪ್ರತಿನಿದಿಯ ವರ್ತನೆಗೆ ಕನ್ನಡ ಸಾಹಿತ್ಯ ಪರಿಷತ್ ಖಂಡನೆ.

Please login to join discussion

ಕ್ಯಾಲೆಂಡರ್

November 2024
MTWTFSS
 123
45678910
11121314151617
18192021222324
252627282930 
« Oct   Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d