• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Tuesday, October 21, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಮನೆ ಮನಗಳಲ್ಲಿ ಸಾಹಿತ್ಯದ ಕಂಪನ್ನು ಪಸರಿಸಲು ಮನೆಯಂಗಳದಲ್ಲಿ ಕಾವ್ಯೋತ್ಸವ ಕಾರ್ಯಕ್ರಮ ಪರಿಣಾಮಕಾರಿ : ಬೇತಾಳ‌ ಮಹಾಲೆ.

Kannada News Desk by Kannada News Desk
November 25, 2024
in ಉತ್ತರ ಕನ್ನಡ
0
ಮನೆ ಮನಗಳಲ್ಲಿ ಸಾಹಿತ್ಯದ ಕಂಪನ್ನು ಪಸರಿಸಲು ಮನೆಯಂಗಳದಲ್ಲಿ ಕಾವ್ಯೋತ್ಸವ ಕಾರ್ಯಕ್ರಮ ಪರಿಣಾಮಕಾರಿ : ಬೇತಾಳ‌ ಮಹಾಲೆ.
0
SHARES
150
VIEWS
WhatsappTelegram Share on FacebookShare on TwitterLinkedin

ಶಿರಾಲಿ : ಮನೆ ಮನಗಳಲ್ಲಿ ಸಾಹಿತ್ಯದ ಕಂಪನ್ನು ಪಸರಿಸಲು ಮನೆಯಂಗಳದಲ್ಲಿ ಕಾವ್ಯೋತ್ಸವದಂತಹ ಕಾರ್ಯಕ್ರಮ ಪರಿಣಾಮಕಾರಿ ಎಂದು ಸಮಾಜ ಸೇವಕ ಬೇತಾಳ‌ ಮಹಾಲೆ ನುಡಿದರು. ಅವರು ಉ.ಕ. ಜಿಲ್ಲಾ ಕಸಾಪ ಹಾಗೂ ಭಟ್ಕಳ ತಾಲೂಕಾ ಕಸಾಪದಿಂದ ರಾಜ್ಯೋತ್ಸವ ಮಾಸದಲ್ಲಿ ಕನ್ನಡ ಕಾರ್ತಿಕ ಅನುದಿನ ಅನುಸ್ಪಂದನ ಕಾರ್ಯಕ್ರಮದ ಅಡಿಯಲ್ಲಿ ಶಿಕ್ಷಕಿ ಇಂದುಮತಿ ಪ್ರಹ್ಲಾದ ರಾಯಚೂರು ಅವರ ನಿವಾಸದಲ್ಲಿ ಆಯೋಜಿಸಿದ ಮನೆಯಂಗಳದಲ್ಲಿ ಕಾವ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಮನೆಯಂಗಳದಲ್ಲಿ ಕಾವ್ಯೋತ್ಸವ ಎಂಬ ಪರಿಕಲ್ಪನೆಯೇ ವಿಶಿಷ್ಟವಾದುದು. ಇಂತಹ ಕಾರ್ಯಕ್ರಮದ ಮೂಲಕ ಸಾಹಿತ್ಯ ಪರಿಷತ್ತು ಜನಸಾಮಾನ್ಯರನ್ನು ತಲುಪುತ್ತಿರುವುದು ತುಂಬಾ ಸಂತೋಷದ ಸಂಗತಿ. ಇದೇ ರೀತಿ ಶಾಲೆ ಅಂಗಳದಲ್ಲಿಯೂ ಕಾವ್ಯೋತ್ಸವ ಕಾರ್ಯಕ್ರಮ ನಡೆಯಲಿ ಅದಕ್ಕೆ ತಮ್ಮ ಸಂಪೂರ್ಣ ಸಹಕಾರ ನೀಡುವುದಾಗಿ ನುಡಿದು ಸಾಹಿತ್ಯ‌ ಪರಿಷತ್ತಿನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದೇ ಅತ್ಯಂತ ಹೆಮ್ಮೆ ಎಂದು ನುಡಿದರು.


ಕಾರ್ಯಕ್ರಮದ ಅಧ್ಯಕ್ಷತೆ‌ವಹಿಸಿದ್ದ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮವನ್ನು ಮನೆ ಮನೆಗಳಲ್ಲಿ‌, ಶಾಲೆಗಳಲ್ಲಿ ಆಯೋಜಿಸುವ ಮೂಲಕ ಕನ್ನಡ ನುಡಿಸೇವೆಯನ್ನು ಮಾಡುವಲ್ಲಿ‌ ಎಲ್ಲರೂ ಅಭಿಮಾನದಿಂದ ಸಹಕಾರವನ್ನು ನೀಡುತ್ತಿದ್ದಾರೆ‌‌. ಅದರಲ್ಲೂ ಶಿಕ್ಷಕ ಸಮುದಾಯ ಸಾಹಿತ್ಯದ ಕಾರ್ಯಕ್ರಮಗಳಲ್ಲಿ, ಬರೆವಣಿಗೆಗಳಲ್ಲಿ ಹೆಚ್ಚು ಹೆಚ್ಚು ತೊಡಗಿಸಿಕೊಳ್ಳುತ್ತಿರುವುದು ಸಂತಸದ ಸಂಗತಿ. ಶಿಕ್ಷಕರು, ಕವಿಮಿತ್ರರು ತಮ್ಮ ಮನೆಯಲ್ಲೂ ಕಾವ್ಯೋತ್ಸವ ಕಾರ್ಯಕ್ರಮವನ್ನು ಆಯೋಜಿಸಲು ಬಯಸುತ್ತಿರುವುದು ನಮ್ಮ ಉತ್ಸಾಹವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು. ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡ ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಶಿಕ್ಷಕ ಎಂ.ಎನ್.ನಾಯ್ಕ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತು ಅತ್ಯಂತ ಕ್ರಿಯಾಶೀಲವಾಗಿ ಕಾರ್ಯಕ್ರಮಗಳನ್ನು ಸಂಘಟಿಸಿ ಹೆಚ್ಚು ಹೆಚ್ಚು ಜನರನ್ನು ಅದರಲ್ಲೂ ಶಿಕ್ಷಕ ಸಮುದಾಯವನ್ನು ಸಾಹಿತ್ಯ ಕಾರ್ಯಕ್ರಮದಡೆಗೆ ಸೆಳೆಯುತ್ತಿರುವುದು ಖುಷಿ ಕೊಡುವ ಸಂಗತಿ. ಕನ್ನಡದ ಕೆಲಸಗಳಿಗೆ ನಾವೆಲ್ಲರೂ ಕೈಜೋಡಿಸುವ ಮೂಲಕ ನುಡಿಸೇವೆಯಲ್ಲಿ ತೊಡಗಿಸಿಕೊಳ್ಳೋಣ ಎಂದು ನುಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಉಪಸ್ಥಿತರಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ವೆಂಕಟೇಶ್ ನಾಯ್ಕ, ಲೆಕ್ಕಪತ್ರ ಪರಿಶೋಧಕ ಯು.ಎ ಲೋಹಾನಿ, ನೌಕರ ಸಂಘದ. ರಾಜ್ಯ ಪರಿಷತ್ ಸದಸ್ಯ ಕುಮಾರ್ ನಾಯ್ಕ, ಪ್ರಹ್ಲಾದ ರಾಯಚೂರು, ಸಾಹಿತಿ ಮಾನಾಸುತ ಶಂಭು ಹೆಗಡೆ, ನಾರಾಯಣ ಯಾಜಿ ಶಿರಾಲಿ ಮಾತನಾಡಿದರು. ಕವಿಗೋಷ್ಟಿಯಲ್ಲಿ ಸುಮಲತಾ ನಾಯ್ಕ, ಜಿ.ಟಿ.ಭಟ್, ಹೇಮಲತಾ ಶೆಟ್ ನೇತ್ರಾವತಿ ಶಾನಭಾಗ, ವಿನೋದ ನಾಯ್ಕ, ಶಂಕರ‌ ನಾಯ್ಕ, ಇಂದುಮತಿ ಬಿ.ಜೆ. ಸ್ವರಚಿತ ಕವಿತೆ ವಾಚಿಸಿದರೆ ಗಣಪತಿ ಶಿರೂರು ವಚನ ಗಾಯನ ಮಾಡಿದರು.
ಕಸಾಪ ಗೌರವ ಕೋಶ್ಯಾಧ್ಯಕ್ಷ ಶ್ರೀಧರ ಶೇಟ್ ಶಿರಾಲಿ ಆಶಯ ನುಡಿಗಳನ್ನಾಡಿ ಎಲ್ಲರನ್ನೂ ಸ್ವಾಗತಿಸಿದರು. ಶಿಕ್ಣಕಿ ಸವಿತಾ ಶೇಟ್ ಕಾರ್ಯಕ್ರಮ ನಿರೂಪಿಸಿದರೆ ಮಂಜುಳಾ ಶಿರೂರು ಪ್ರಾರ್ಥಿಸಿದರು. ಜಯಶ್ರೀ ಆಚಾರಿ, ಪೂರ್ಣಿಮಾ‌ ಕರ್ಕಿಕರ್, ಗೀತಾ ಬಂಢಾರಿ, ಸುಮನಾ ಕೆರೆಕಟ್ಟೆ, ನಾಡು ನುಡಿಯ ಗೀತೆಯನ್ನು ಪ್ರಸ್ತುತಪಡಿಸಿದರು. ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಎಂ ಎನ್ ನಾಯ್ಕ್ ಕಾರ್ಯದರ್ಶಿ ವೆಂಕಟೇಶ್ ನಾಯಕ್ ಲೆಕ್ಕಪತ್ರ ಪರಿಶೋಧಕ ಯುಎ ಲೋಹಾನಿ ಇವರನ್ನು ಸನ್ಮಾನಿಸಲಾಯಿತು ಹಾಗೆ ಮನೆಗಳದಲ್ಲಿ ಕಾವ್ಯೋತ್ಸವ ಕಾರ್ಯಕ್ರಮದ ಅತಿಥ್ಯವನ್ನು ವಹಿಸಿದ ಇಂದುಮತಿ ಪ್ರಹ್ಲಾದ ರಾಯಚೂರು ದಂಪತಿಗಳನ್ನು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಗೀತಾ ಶಿರೂರು, ಪೂರ್ಣಿಮಾ ಕರ್ಕಿಕರ್, ರಾಜೇಶ ನಾಯ್ಕ, ನಾಗರತ್ನಾ ನಾಯ್ಕ, ರೇಖಾ ಪಟಗಾರ, ಗಣೇಶ ಗೌಡ, ಬಿ.ಕೆ.ನಾಯ್ಕ, ಕಮಲಾ‌ಭಟ್, ಶ್ರೀಶಾ ಶೇಟ್ ಮುಂತಾದವರು ಉಪಸ್ಥಿತರಿದ್ದರು.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

ಚಾರಣಿಗರ ಸ್ವರ್ಗ ಭೀಮೇಶ್ವರ ಜಲಪಾತ

Next Post

ಸಂವಿಧಾನ ನಮ್ಮ ಬದುಕಿನ ದಾರಿದೀಪ- ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಡಾ. ನಯನಾ

Kannada News Desk

Kannada News Desk

Next Post
ಸಂವಿಧಾನ ನಮ್ಮ ಬದುಕಿನ ದಾರಿದೀಪ- ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಡಾ. ನಯನಾ

ಸಂವಿಧಾನ ನಮ್ಮ ಬದುಕಿನ ದಾರಿದೀಪ- ಭಟ್ಕಳ ಉಪವಿಭಾಗದ ಸಹಾಯಕ ಆಯುಕ್ತೆ ಡಾ. ನಯನಾ

Please login to join discussion

ಕ್ಯಾಲೆಂಡರ್

November 2024
MTWTFSS
 123
45678910
11121314151617
18192021222324
252627282930 
« Oct   Dec »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d