• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, October 12, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕ್ರೂರವಾಗಿ ಲವ್‌ ಜಿಹಾದ್‌ಗೆ ಬಲಿಯಾದ ದಲಿತ ಹುಡುಗಿ- ಹಿಂದೂ ಹೆಂಡತಿಯ ದೇಹವನ್ನು 50ಕ್ಕೂ ಅಧಿಕ ಪೀಸ್‌ ಮಾಡಿದ ಮುಸ್ಲಿಂ ಗಂಡ

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
December 19, 2022
in ದೇಶಿ ಸುದ್ದಿ
0
ಕ್ರೂರವಾಗಿ ಲವ್‌ ಜಿಹಾದ್‌ಗೆ ಬಲಿಯಾದ ದಲಿತ ಹುಡುಗಿ- ಹಿಂದೂ ಹೆಂಡತಿಯ ದೇಹವನ್ನು 50ಕ್ಕೂ ಅಧಿಕ ಪೀಸ್‌ ಮಾಡಿದ ಮುಸ್ಲಿಂ ಗಂಡ
0
SHARES
1.2k
VIEWS
WhatsappTelegram Share on FacebookShare on TwitterLinkedin

ಕ್ರೂರವಾಗಿ ಲವ್‌ ಜಿಹಾದ್‌ಗೆ ಬಲಿಯಾದ ದಲಿತ ಹುಡುಗಿ-
ಹಿಂದೂ ಹೆಂಡತಿಯ ದೇಹವನ್ನು 50ಕ್ಕೂ ಅಧಿಕ ಪೀಸ್‌ ಮಾಡಿದ ಮುಸ್ಲಿಂ ಗಂಡ

ಜಾರ್ಖಂಡ್‌- ಜಾರ್ಖಂಡ್‌ನ ಸಾಹೇಬ್‌ಗಂಜ್‌ನಲ್ಲಿ 25 ವರ್ಷದ ದಿಲ್ದಾರ್‌ ಅನ್ಸಾರಿ ತನ್ನ ಪತ್ನಿ ದಲಿತ ಹುಡುಗಿ ರುಬಿಕಾ ಪಹಾಡಿನ್‌ರನ್ನು ಕೊಲೆ ಮಾಡಿದ್ದಲ್ಲದೆ, ಎಲೆಕ್ಟ್ರಿಕ್‌ ಕಟರ್‌ ಬಳಸಿ 50ಕ್ಕಿಂತಲೂ ಅಧಿಕ ಪೀಸ್‌ ಮಾಡಿದ್ದಾರೆ.
ಈ ಪೈಶಾಚಿಕ ಕೃತ್ಯದ ಬಗ್ಗೆ ಇಡೀ ನಗರದಲ್ಲಿ ಆಘಾತ ವ್ಯಕ್ತವಾಗಿದೆ. ಆಕೆಯ ದೇಹದ ಕೆಲವು ಭಾಗಗಳು ಮನೆಯಲ್ಲಿಯೇ ದೊರೆತಿದ್ದರೆ, ಇನ್ನೂ ಕೆಲವು ಭಾಗಗಳು ನಗರದ ನಿರ್ಜನ ಪ್ರದೇಶಗಳಲ್ಲಿ ದಿಲ್ದಾರ್‌ ಅನ್ಸಾರಿ ಎಸೆದಿದ್ದಾನೆ. ಅದರಲ್ಲಿ ಕೆಲವೊಂದು ಪೀಸ್‌ಗಳನ್ನು ನಾಯಿಗಳು ಎಳೆದುಕೊಂಡು ತಿಂದಿವೆ. ಮಾನವನ ದೇಹದ ಭಾಗಗಳನ್ನು ನಾಯಿಗಳು ತಿನ್ನುತ್ತಿರುವುದನ್ನು ಕಂಡ ಗ್ರಾಮಸ್ಥರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

ಅದಾದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿಯವರೆಗೂ ಪೊಲೀಸರು ರುಬಿಕಾಳ ದೇಹದ 18 ಪೀಸ್‌ಗಳನ್ನು ಪತ್ತೆ ಮಾಡಿ ಅದನ್ನು ಪ್ಲಾಸ್ಟಿಕ್‌ ಕವರ್‌ನಲ್ಲಿ ಪ್ಯಾಕ್‌ ಮಾಡಿದ್ದು, ಆಕೆಯ ದೇಹದ ಇತರ ಭಾಗಗಳು ಹಾಗೂ ತಲೆಗಾಗಿ ಹುಡುಕಾಟ ನಡೆಯುತ್ತಿದೆ.

ಪೊಲೀಸರು ಸಾಕಷ್ಟು ಶೋಧ ಕಾರ್ಯ ನಡೆಸಿದರೂ, 22 ವರ್ಷದ ರುಬಿಕಾಳ ತಲೆ ಮಾತ್ರ ಪತ್ತೆಯಾಗಿಲ್ಲ. ರುಬಿಕಾ ಪಹಾಡಿನ್‌ ಸ್ಥಳೀಯ ಆದಿಮ್‌ ಪಹಾರಿಯಾ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಇಲ್ಲಿನ ಸಾಹೇಬ್‌ಗಂಜ್‌ನ ದೋಡಾ ಪರ್ವತ ಪ್ರದೇಶದ ನಿವಾಸಿ. ಕೆಲವು ವರ್ಷಗಳಿಂದ ರುಬಿಕಾ ಹಾಗೂ ದಿಲ್ದಾರ್‌ ಪ್ರೀತಿ ಮಾಡುತ್ತಿದ್ದರು. ಒಂದು ತಿಂಗಳ ಹಿಂದೆಯಷ್ಟೇ ಅವರು ವಿವಾಹ ಬಂಧನಕ್ಕೆ ಒಳಪಟ್ಟಿದ್ದರು. ಇದು ದಿಲ್ಡಾರ್ಗೆ 2ನೇ ಮದುವೆಯಾಗಿತ್ತು. ಈ ವಿಚಾರದಲ್ಲಿ ದಿಲ್ಡಾರ್ ಹಾಗೂ ರುಬಿಕಾ ನಡುವೆ ಪ್ರತಿ ದಿನವೂ ಗಲಾಟೆ ನಡೆಯುತ್ತಿತ್ತು. ಈ ಮದುವೆಯನ್ನು ರುಬಿಕಾ ಮತ್ತು ದಿಲ್ದಾರ್ ಕುಟುಂಬ ಸದಸ್ಯರು ಕೂಡ ಒಪ್ಪಿರಲಿಲ್ಲ. ಆರು ಮಂದಿ ಒಡಹುಟ್ಟಿದವರಲ್ಲಿ ರುಬಿಕಾ 3ನೆಯವರಾಗಿದ್ದಾರೆ.

ಆರೋಪಿ ದಿಲ್ದಾರ್‌ ಅನ್ಸಾರಿಯನ್ನು ಬೆಲಾ ಟೋಲಾದಲ್ಲಿ ಬಂಧನ ಮಾಡಿದ್ದಾರೆ. ಆತನ ಸುಳಿವಿನ ಮೇರೆಗೆ ಅಂಗನವಾಡಿ ಕೇಂದ್ರದಿಂದ ಸುಮಾರು 300 ಮೀಟರ್ ದೂರದಲ್ಲಿರುವ ಮಂಜ್ ಟೋಲಾ ಎಂಬಲ್ಲಿ ಬೀಗ ಹಾಕಿದ ಮನೆಯೊಂದರಿಂದ ಮೃತದೇಹದ ಕೆಲವು ಪೀಸ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ದೇಹದ ಕೆಲವು ಪೀಸ್‌ಗಳು ನೆಲದ ಮೇಲೆ ಚೆಲ್ಲಾಪಿಲ್ಲಿಯಾಗಿ ಹಾಗಯೇ ಬಿದ್ದಿದ್ದರೆ, ಇನ್ನೂ ಕೆಲವು ಪೀಸ್‌ಗಳನ್ನು ಗೋಣಿಚೀಲದಲ್ಲಿ ಕಟ್ಟಿ ಇಡಲಾಗಿತ್ತು. ಶವ ಪತ್ತೆಯಾದ ಸ್ಥಳವು ದಿಲ್ದಾರ್‌ನ ತಾಯಿಯ ಸಂಬಂಧಿಯ ಮನೆಯಾಗಿದೆ. ಶುಕ್ರವಾರ ರುಬಿಕಾಳನ್ನು ದಿಲ್ದಾರ್‌ ಕತ್ತು ಸೀಳಿ ಕೊಲೆ ಮಾಡಿದ್ದ ಎಂದು ಹೇಳಲಾಗುತ್ತಿದೆ. ಬಳಿಕ ಎಲೆಕ್ಟ್ರಿಕ್‌ ಕಟರ್‌ ಬಳಸಿ 50 ಪೀಸ್‌ಗಳನ್ನಾಗಿ ಮಾಡಿದ್ದಾನೆ. ಶನಿವಾರ ಸಂಜೆ ಪೊಲೀಸರಿಗೆ ದೇಹದ ಭಾಗಗಳು ಪತ್ತೆಯಾಗಿವೆ.

ಈತನ ಮೊದಲ ಪತ್ನಿಯೂ ಆತನೊಂದಿಗೆ ವಾಸವಾಗಿದ್ದಳು. ಮದುವೆಯಾದ ದಿನದಿಂದ ಮನೆಯಲ್ಲಿ ಕಲಹ ಏರ್ಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಮಹಿಳೆಯನ್ನು ಕೊಲೆ ಮಾಡಲಾಗಿದೆ.

ತನಿಖೆಯಲ್ಲಿ 18 ಪೀಸ್‌ಗಳು ಪತ್ತೆಯಾಗಿವೆ. ಇದರೊಂದಿಗೆ ಆಯುಧವೂ ಪತ್ತೆಯಾಗಿದ್ದು, ತನಿಖೆ ನಡೆಸಲಾಗುತ್ತಿದೆ. ರುಬಿಕಾ ನಾಪತ್ತೆಯಾಗಿರುವ ಬಗ್ಗೆ ಪತಿ ಕೂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು, ಆದರೆ ಅವರು ಮತ್ತು ಅವರ ಕುಟುಂಬದವರು ಘಟನೆಯಲ್ಲಿ ಭಾಗಿಯಾಗಿದ್ದಾರೆ. ಇಬ್ಬರೂ 2 ವರ್ಷಗಳಿಂದ ಸಂಬಂಧ ಹೊಂದಿದ್ದು, ಒಂದು ತಿಂಗಳ ಹಿಂದೆಯಷ್ಟೇ ಇಬ್ಬರೂ ಪ್ರೇಮ ವಿವಾಹವಾಗಿದ್ದರು ಎಂದು ಮಾಹಿತಿ ನೀಡಿದ್ದಾರೆ. ಮೃತದೇಹವನ್ನು ತುಂಡಾಗಿ ಕತ್ತರಿಸಿದ್ದು ಏಕೆ ಎನ್ನುವುದು ತನಿಖೆಯ ನಂತರವಷ್ಟೇ ತಿಳಿಯಬೇಕಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ಸಾಕ್ಷ್ಯವನ್ನು ಮರೆಮಾಚುವ ಕಾರಣಕ್ಕೆ ದೇಹವನ್ನು ಈ ರೀತಿಯಾಗಿ ಕತ್ತರಿಸಲಾಗಿದೆ. ಕುಟುಂಬ ಸದಸ್ಯರನ್ನೂ ಕೂಡ ಬಂಧಿಸಲಾಗಿದೆ. ಎಲ್ಲರನ್ನೂ ಪ್ರಶ್ನೆ ಮಾಡುತ್ತಿದ್ದೇವೆ ಎಂದು ಡಿಐಜಿ ಸುದರ್ಶನ್‌ ಮಂಡಲ್‌ ಮಾಹಿತಿ ನೀಡಿದ್ದಾರೆ.

ರಿಬಿಕಾ ಮತ್ತು ದಿಲ್ದಾರ್ ಬಹಳ ದಿನಗಳಿಂದ ಪ್ರೇಮ ಸಂಬಂಧ ಹೊಂದಿದ್ದರು, ಆದರೆ ಎರಡೂ ಮನೆಯವರು ಮದುವೆಗೆ ಸಿದ್ಧರಿರಲಿಲ್ಲ. ರುಬಿಕಾ ಅವರ ತಂದೆ ಸುರ್ಜಾ ಪಹಾಡಿಯಾ ಮತ್ತು ತಾಯಿ ಚಾಂಡಿ ಪಹಾಡಿನ್ ಇಬ್ಬರ ಸಂಬಂಧವನ್ನು ವಿರೋಧಿಸಿದ್ದರು. ಆದರೆ ಒಂದು ತಿಂಗಳ ಹಿಂದೆ ಇಬ್ಬರೂ ಮನೆಯಿಂದ ಓಡಿಹೋಗಿ ಪೊಲೀಸ್ ಠಾಣೆಗೆ ಬಂದಿದ್ದರು. ಇಲ್ಲಿ ಪೊಲೀಸರು ಇಬ್ಬರಿಗೂ ಮದುವೆ ಮಾಡಿಸಿದ್ದರು. ಮೃತದೇಹದ ತುಂಡುಗಳು ಸಿಕ್ಕ ಬಳಿಕ ಪೊಲೀಸರಿಗೆ ಇದು ರುಬಿಕಾ ಆಗಿರುವ ಸಾಧ್ಯತೆ ಇದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಪೊಲೀಸರು ದಿಲ್ದಾರ್ ಮನೆಗೆ ಬಂದು ರಿಬಿಕಾ ಬಗ್ಗೆ ವಿಚಾರಿಸಿದ್ದಾರೆ. ಆಗ ಇಡೀ ವಿಷಯ ಬೆಳಕಿಗೆ ಬಂದಿದೆ.

Share this:

  • Click to share on WhatsApp (Opens in new window) WhatsApp
  • Click to share on Telegram (Opens in new window) Telegram
  • Click to share on Facebook (Opens in new window) Facebook
  • Click to share on X (Opens in new window) X

Like this:

Like Loading...

Related

Previous Post

16 ವರ್ಷದ ಬಾಲಕಿಯ ಮೇಲೆ 8 ಕಾಮುಕರು ಸೇರಿ ಸತತ 12 ಗಂಟೆಗಳ ಕಾಲ ಗ್ಯಾಂಗ್ ರೇಪ್

Next Post

ವಿದ್ಯಾರ್ಥಿಯ ಮೇಲೆ ಅತಿಥಿ ಶಿಕ್ಷಕನೊಬ್ಬ ಮನಬಂದಂತೆ ಹಲ್ಲೆ- ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ ಸಾವು

Kannada News Desk

Kannada News Desk

Next Post
ವಿದ್ಯಾರ್ಥಿಯ ಮೇಲೆ ಅತಿಥಿ ಶಿಕ್ಷಕನೊಬ್ಬ ಮನಬಂದಂತೆ ಹಲ್ಲೆ- ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ ಸಾವು

ವಿದ್ಯಾರ್ಥಿಯ ಮೇಲೆ ಅತಿಥಿ ಶಿಕ್ಷಕನೊಬ್ಬ ಮನಬಂದಂತೆ ಹಲ್ಲೆ- ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ ಸಾವು

Please login to join discussion

ಕ್ಯಾಲೆಂಡರ್

December 2022
MTWTFSS
 1234
567891011
12131415161718
19202122232425
262728293031 
« Nov   Jan »

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

%d