ಭಟ್ಕಳ ತಾಲೂಕ ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಯಲ್ವಡಿ ಕವೂರ್ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಶ್ರೀ ಲಕ್ಷ್ಮೀ ನಾರಾಯಣ ನಾಯ್ಕ ಆಯ್ಕೆ
ಭಟ್ಕಳ- ಭಟ್ಕಳ ತಾಲೂಕ ಬಿಜೆಪಿ ಮಂಡಲದ ನೂತನ ಅಧ್ಯಕ್ಷರಾಗಿ ಯಲ್ವಡಿ ಕವೂರ್ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಶ್ರೀ ಲಕ್ಷ್ಮೀ ನಾರಾಯಣ ನಾಯ್ಕ ಅವರು ಆಯ್ಕೆ ಆಗಿದ್ದಾರೆ.
ತಾಲೂಕ ಪ್ರಧಾನ ಕಾರ್ಯದರ್ಶಿಗಳಾಗಿ ಶ್ರೀನಿವಾಸ್ ಶಿವರಾಮ್ ನಾಯ್ಕ ಮುಟ್ಟಳ್ಳಿ ಮತ್ತು ಶ್ರೀಧರ ನಾಯ್ಕ ಮಾವಳ್ಳಿ ಮುರುಡೇಶ್ವರ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷರಾದ ಎನ್.ಎಸ್.ಹೆಗಡೆ ಕರ್ಕಿ ಅವರು ಭಟ್ಕಳ ತಾಲೂಕ ಬಿಜೆಪಿ ಮಂಡಲ ನೂತನ ಅಧ್ಯಕ್ಷ ಮತ್ತು ಪ್ರಧಾನ ಕಾರ್ಯದರ್ಶಿಗಳನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.