ಭಟ್ಕಳದ ಲ್ಲಿ ಸಂಭ್ರಮದಿಂದ ನಡೆದ
78ನೆ ಸ್ವಾತಂತ್ರ್ಯ ದಿನಾಚರಣೆ-ಧ್ವಜಾರೋಹಣ ನಡೆಸಿದ ಸಹಾಯಕ ಆಯುಕ್ತೆ ಡಾ.ನಯನಾ. ಎನ್
ಭಟ್ಕಳ- ಭಟ್ಕಳ ತಾಲೂಕಿನ ತಾಲೂಕ ಕ್ರೀಡಾಂಗನದಲ್ಲಿ ಇಂದು ನ 78ನೆ ಸ್ವಾತಂತ್ರ್ಯ ದಿನಾಚರಣೆಯು ತಾಲೂಕ ಆಡಳಿತ ನೇತೃತ್ವದಲ್ಲಿ ಸಂಭ್ರಮದಿಂದ ನಡೆಯಿತು. ಭಟ್ಕಳ ತಾಲೂಕ ಸಹಾಯಕ ಆಯುಕ್ತೆ ಡಾ.ನಯನ .ಎನ್ ಧ್ವಜಾರೋಹಣ ನಡೆಸಿದರು. ನಂತರ ಮಾತನಾಡಿದ ಅವರು ಸ್ವಾತಂತ್ರ್ಯದ ಅರಿವು ಮತ್ತು ದೇಶದ ಮೇಲಿನ ಅಭಿಮಾನದ ಕಿಚ್ಚನ್ನು ಹೊತ್ತಿಸಿದ್ದು ರಾಷ್ಟ್ರೀಯ ಚಳುವಳಿ. ಅದರ ನೇತೃತ್ವವನ್ನು ಹೊತ್ತಿದ್ದು ಮಹಾತ್ಮ ಗಾಂಧೀಜಿಯವರು, ಈ ಚಳುವಳಿಯ ಭದ್ರ ಬುನಾದಿ ಮೇಲೆ ರೂಪುಗೊಂಡಿದ್ದೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ್ದ ಭಾರತದ ಸಂವಿಧಾನ ಮತ್ತು ಅದನ್ನು ಆಧರಿಸಿದ ಪ್ರಜಾಪ್ರಭುತ್ವ. ಸ್ವಾತಂತ್ರ್ಯೋತ್ಸವ ಎನ್ನುವುದು ಕೇವಲ ಸಂಭ್ರಮಾಚರಣೆಯ ದಿನ ಆಗಬಾರದು, ಇದು ಪ್ರಜೆಗಳಾದ ನಮ್ಮೆಲ್ಲರ ಕರ್ತವ್ಯವನ್ನು ನೆನಪು ಮಾಡಿಕೊಳ್ಳುವ ದಿನವೂ ಆಗಬೇಕು.
ಪ್ರಜೆಗಳಾಗಿ ನಾವು ಪ್ರತಿಕ್ಷಣವೂ ಜಾಗೃತರಾಗಿದ್ದು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಿ , ಪಾಲಿಸುವ ಜವಾಬ್ದಾರಿ ನಮ್ಮೆಲರ ಮೇಲಿದೆ.ಈ ಕರ್ತವ್ಯದ ಪಾಲನೆಯೇ ನಿಜವಾದ ದೇಶಭಕ್ತಿ, ಇದು ತ್ಯಾಗ-ಬಲಿದಾನದ ಮೂಲಕ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ನಮ್ಮ ಹಿರಿಯರಿಗೆ ಸಲ್ಲಿಸುವ ಗೌರವವೂ ಹೌದು ಎಂದು ತಿಳಿಸಿದರು.
ಸಾವಿರಾರು ಭಾಷೆಗಳು, ನೂರಾರು ಧರ್ಮಗಳು, ವೈವಿಧ್ಯಮಯ ಆಚಾರ ವಿಚಾರಗಳು, ಸಂಸ್ಕೃತಿ ಮೇಳೈಸಿರುವ ನಮ್ಮ ದೇಶ ಸಮೃದ್ಧ ನಾಗರಿಕತೆಯ ತೊಟ್ಟಿಲು ನಮ್ಮ ದೇಶ.ಸಾವಿರಾರು ಮಹನೀಯರ ಹೋರಾಟ, ತ್ಯಾಗ, ಪರಿಶ್ರಮಗಳ ಫಲವನ್ನು ನಾವು ಇಂದು ಉಣ್ಣುತ್ತಿದ್ದೇವೆ. ಇಂದು ನಮ್ಮ ಕೈಯಲ್ಲಿರುವ ಸ್ವಾತಂತ್ರ್ಯದ ದೀವಿಗೆಯನ್ನು ಮುಂದಿನ ತಲೆಮಾರಿಗೆ ಜತನದಿಂದ ತಲುಪಿಸುವ ಅತ್ಯಂತ ದೊಡ್ಡ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಈ ಹೊಣೆಗಾರಿಕೆಯನ್ನು ಅರಿತುಕೊಂಡು ನಾವು ಮುನ್ನಡೆಯಬೇಕಿದೆ ಎಂದು ತಿಳಿಸಿದರು.
ಭಟ್ಕಳ ತಹಸೀಲ್ದಾರ್ ನಾಗರಾಜ ನಾಯ್ಕಡ ಸ್ವಾಗತಿಸಿದರು. ಭಟ್ಕಳ ಪೊಲೀಸ್ ಇಲಾಖೆ ಮತ್ತು ವಿವಿದ ಶಾಲಾ -ಕಾಲೇಜು ವಿದ್ಯಾರ್ಥಿಗಳಿಂದ ಪಥ ಸಂಚಲನ ನಾಡೆಯಿತು. ಎಸ್.ಎಸ್.ಎಲ್. ಸಿ ಮತ್ತು ಪಿ.ಯು. ಸಿ ಪರೀಕ್ಷೆಯಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ತಾಲೂಕ ಆಡಳಿತ ವತಿಯಿಂದ ಸನ್ಮಾನಿಸಲಾಯಿತು. ಶಿಕ್ಷಕ ಶ್ರೀಧರ್ ಶೇಟ್ ಕಾರ್ಯಕ್ರಮ ನಿರೂಪಿಸಿದರು. ತಾಲೂಕ ಪಂಚಾಯತ್ ಇ. ಓ ವೆಂಕಟೇಶ್ ನಾಯಕ ವಂದಿಸಿದರು. ವೇದಿಕೆಯಲ್ಲಿ ತಹಸೀಲ್ದಾರ್ ನಾಗರಾಜ ನಾಯ್ಕಡ, ಪುರಸಭೆ ಸ್ಥಾಯೀ ಸಮಿತಿ ಆಧ್ಯಕ್ಷರು, ಪುರಸಭೆ ಮುಖ್ಯಾಧಿಕಾರಿ ನೀಲಕಂಠ ಮೇಷ್ಟ , ಜಾಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜಪ್ಪ, ಮುಂತಾದ ವರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಭಟ್ಕಳದ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸಾರ್ವಜನಿಕ ರು ಭಾಗವಹಿಸಿದ್ದರು.