• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 10, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಸಾಹಿತ್ಯ ಪರಿಷತ್‌ ಹಾಗೂ ಜನತಾ‌ ವಿದ್ಯಾಲಯದ ಸಹಯೋಗದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ದಿನಕರ‌ ದೇಸಾಯಿ ಸಂಸ್ಮರಣೆ

Kannada News Desk by Kannada News Desk
September 14, 2024
in ಉತ್ತರ ಕನ್ನಡ
0
ಸಾಹಿತ್ಯ ಪರಿಷತ್‌ ಹಾಗೂ ಜನತಾ‌ ವಿದ್ಯಾಲಯದ ಸಹಯೋಗದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡ ದಿನಕರ‌ ದೇಸಾಯಿ ಸಂಸ್ಮರಣೆ
0
SHARES
46
VIEWS
WhatsappTelegram Share on FacebookShare on TwitterLinkedin


ಭಟ್ಕಳ : ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಜನತಾ ವಿದ್ಯಾಲಯದ ಸಹಯೋಗದಲ್ಲಿ ದಿನಕರ‌ ದೇಸಾಯಿ ಸಂಸ್ಮರಣೆ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮವು ಇಲ್ಲಿನ‌ ಶಿರಾಲಿಯ ಜನತಾ ವಿದ್ಯಾಲಯ ಪ್ರೌಢಶಾಲೆಯಲ್ಲಿ‌ ಜರುಗಿತು.‌ಕಾರ್ಯಕ್ರಮವನ್ನು ಸಾಹಿತಿ ನಾರಾಯಣ ಯಾಜಿ‌‌‌ ಶಿರಾಲಿ ಉದ್ಘಾಟಿಸಿ ದಿನಕರ‌ ದೇಸಾಯಿಯವರು‌ ತಮ್ಮ ಹೆಸರಿಗೆ ಅನುಗುಣವಾಗಿ ಸಾಹಿತ್ಯ ಕ್ಷೇತ್ರ, ಶಿಕ್ಷಣ ಹಾಗೂ ಸಾಮಾಜಿಕ‌ ಕ್ಷೇತ್ರಕ್ಕೆ ಅಪೂರ್ವ ಕೊಡುಗೆಗಳನ್ನು ನೀಡಿ ಸೂರ್ಯನಂತೆ ಬೆಳಗಿದರು. ಜನತಾ ವಿದ್ಯಾಲಯ ಸ್ಥಾಪಿಸಿ ಅಕ್ಷರ ಕ್ರಾಂತಿಯನ್ನು ಮಾಡಿದ್ದಾರೆ. ಅವರ ಆದರ್ಶಗಳನ್ನು ಅಳವಡಿಸಿಕೊಂಡು ವಿದ್ಯಾರ್ಥಿಗಳು ಸಾಧನೆ ಮಾಡಬೇಕೆಂದು ನುಡಿದರಲ್ಲದೇ ಅರ್ಥಪೂರ್ಣ ಕಾರ್ಯಕ್ರಮ ಸಂಘಟಿಸಿದ ಸಾಹಿತ್ಯ ಪರಿಷತ್ತು ಹಾಗೂ ಜನತಾ ವಿದ್ಯಾಲಯ ಪ್ರೌಢಶಾಲೆಗೆ ಅಭಿನಂದಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ‌ ದಿನಕರ ದೇಸಾಯಿಯವರು ಕವಿಯಾಗಿ, ಲೇಖಕರಾಗಿ, ಪತ್ರಕರ್ತರಾಗಿ, ಸಂಸದರಾಗಿ, ಸಾಮಾಜಿಕ ಹೋರಾಟಗಾರರಾಗಿ ಮಾತ್ರವಲ್ಲ ಶಿಕ್ಷಣ ತಜ್ಞರಾಗಿ ಹತ್ತು ಹಲವು ಕ್ಷೇತ್ರಕ್ಕೆ ಕೊಡುಗೆ ನೀಡುವ ಮೂಲಕ ಇಂದಿಗೂ ನೆನಪಿಸುವಂಥ ವ್ಯಕ್ತಿಯಾಗಿದ್ದಾರೆ. ಅವರ ಸಾಧನೆಯಿಂದ‌ ಪ್ರೇರಿತರಾಗಿ ವಿದ್ಯಾರ್ಥಿಗಳು ತಮ್ಮ‌ ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಸಾಧನೆ ಮಾಡುವ ಮೂಲಕ ನಮ್ಮ ನಂತರವೂ ನೆನಪಿಸುವಂಥ ವ್ಯಕ್ತಿಗಳಾಗಬೇಕೆಂದು ಕರೆ ನೀಡಿದರಲ್ಲದೇ ಸಾಹಿತ್ಯ ಪರಿಷತ್ತಿನ ಕಾರ್ಯಕ್ರಮಕ್ಕೆ ಸಹಯೋಗ ನೀಡಿದ ಜನತಾ ವಿದ್ಯಾಲಯದ ಮುಖ್ಯಾಧ್ಯಾಪಕರ ಹಾಗೂ ಶಿಕ್ಷಕ ವೃಂದದವರ ಸಹಕಾರವನ್ನು ಸ್ಮರಿಸಿದರು.
ಸಾಹಿತಿ ಮಾನಾಸುತ ಶಂಭು ಹೆಗಡೆ ಚುಟುಕು ವಾಚನದ ಮೂಲಕ ನುಡಿನಮನ ಸಲ್ಲಿಸಿದರು. ಪ್ರಾಂಶುಪಾಲ‌ ಅಮೃತ ರಾಮರಥ ದಿನಕರ ದೇಸಾಯಿಯವರ ಬದುಕು ಸಾಧನೆಯ ಕುರಿತು ಮಾತನಾಡಿದರು. ಶಾಲಾ ವಿದ್ಯಾರ್ಥಿಗಳು ದೇಸಾತಿಯವರ ಚುಟುಕು ವಾಚನ ಮಾಡಿದರು.ಮುಖ್ಯಾಧ್ಯಾಪಕಿ ಆಶಾ ಭಟ್ ಎಲ್ಲರನ್ನು ಸ್ವಾಗತಿಸಿದರು. ದಿನಕರ‌ ದೇಸಾಯಿ ಸಂಸ್ಮರಣೆಯ ಅಂಗವಾಗಿ ಆಯೋಜಿಸಿದ ಚುಟುಕು ವಾಚನ, ಗೀತ ಗಾಯನ ಹಾಗೂ ಭಾಷಣ‌ ಸ್ಪರ್ಧೆಯಲ್ಲಿ ವಿಜೇತ ಹಾಗೂ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪುಸ್ತಕ ಬಹುಮಾನ ವಿತರಿಸಲಾಯಿತು. ಆರಂಭದಲ್ಲಿ ದಿನಕರ ದೇಸಾಯಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.
ಶಿಕ್ಷಕಿ ಲೀಲಾವತಿ ಮೊಗೇರ ಹಾಗೂ ಶಿಕ್ಷಕ ಅರುಣ ಗೌಡ ನಿರೂಪಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಶಿಕ್ಷಕ ಕೃಷ್ಣ ಕಾಂಬಳೆ ವಂದಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕರಾದ ಸುರೇಶ ನಾಯ್ಕ, ನಾಗರತ್ನಾ ನಾಯ್ಕ, ಎಸ್.ಎಂ.ಹೊಂಬಳ ಹಾಗೂ ಶಾಲಾ‌ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related

Previous Post

ಅಕ್ರಮ ಚಟುವಟಿಕೆ ತಡೆಯಲು ವಿಫಲವಾಗಿ ಅಮಾನತುಗೊಂಡ ಪಿ.ಎಸ್.ಐ ಮಂಜುನಾಥ್ ಗೆ ಅಧಿಕಾರ ಭಾಗ್ಯ- ಭ್ರಷ್ಟರಿಗೆ ಬೆಂಬಲವಾಗಿ ನಿಂತನೆ ಪ್ರಭಾವಿ ಸಚಿವ?

Next Post

ವ್ಯವಸಾಯ ಸೇವಾ ಸಹಕಾರಿ ಸಂಘ ಭಟ್ಕಳ ವತಿಯಿಂದ ಭಟ್ಕಳದ ಪುರವರ್ಗ ಸರ್ಕಾರಿ ಪ್ರಾಥಮಿಕ ಶಾಲೆಗೆ 15 ಡೆಸ್ಕ್ ಮತ್ತು ಬೆಂಚ ದೇಣಿಗೆಯಾಗಿ ವಿತರಣೆ

Kannada News Desk

Kannada News Desk

Next Post
ವ್ಯವಸಾಯ ಸೇವಾ ಸಹಕಾರಿ ಸಂಘ ಭಟ್ಕಳ ವತಿಯಿಂದ ಭಟ್ಕಳದ ಪುರವರ್ಗ ಸರ್ಕಾರಿ ಪ್ರಾಥಮಿಕ ಶಾಲೆಗೆ 15 ಡೆಸ್ಕ್ ಮತ್ತು ಬೆಂಚ ದೇಣಿಗೆಯಾಗಿ ವಿತರಣೆ

ವ್ಯವಸಾಯ ಸೇವಾ ಸಹಕಾರಿ ಸಂಘ ಭಟ್ಕಳ ವತಿಯಿಂದ ಭಟ್ಕಳದ ಪುರವರ್ಗ ಸರ್ಕಾರಿ ಪ್ರಾಥಮಿಕ ಶಾಲೆಗೆ 15 ಡೆಸ್ಕ್ ಮತ್ತು ಬೆಂಚ ದೇಣಿಗೆಯಾಗಿ ವಿತರಣೆ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.