ಮಂಗಳೂರಿನಲ್ಲಿ ಹಿಂದೂಯುವತಿ ಜೊತೆ ಬಸ್ ನಲ್ಲಿ ಸುತ್ತುತಿದ್ದ ಮುಸ್ಲಿಂ ಯುವಕನಿಗೆ ಹಲ್ಲೆ ಪ್ರಕರಣ, ಮೂವರನ್ನು ವಶಕ್ಕೆ ಪಡೆದುಕೊಂಡ ಪೊಲೀಸರು
ಮಂಗಳೂರು-ನಂತೂರು ಸರ್ಕಲ್ ಬಳಿ ಅನ್ಯಕೋಮಿನ ಯುವತಿ ಜೊತೆ ಬಸ್ ನಲ್ಲಿ ಪ್ರಯಾಣಿಸಿದ ಯುವಕನಿಗೆ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಕದ್ರಿ ಠಾಣಾ ಪೊಲೀಸರು ಮೂವರನ್ನು ಬಂಧಿಸಿರುವ ಬಗ್ಗೆ ವರದಿಯಾಗಿದೆ.
ಮುತ್ತು(18), ಪ್ರಕಾಶ್(21) ಮತ್ತು ರಾಕೇಶ್(23) ಬಂಧಿತರು.ಈ ಮೂವರೂ ಹಿಂದೂ ಸಂಘಟನೆಯವರು ಎಂದು ಹೇಳಲಾಗಿದೆ.
ರಶೀಂ ಎಂಬಾತ ಕಾರ್ಕಳದ ನಿಟ್ಟೆಯಿಂದ ತನ್ನ ಸಹಪಾಠಿ ಯುವತಿಯ ಜೊತೆಗೆ ಅಗಮಿಸುತ್ತಿದ್ದಾಗ ನಂತೂರು ಸರ್ಕಲ್ ಬಳಿ ಏಕಾಏಕಿ ಬಸ್ಸನ್ನು ಅಡ್ಡ ಹಾಕಿ ಒಳನುಗ್ಗಿದ ತಂಡ, ಯುವಕನ ಬಳಿ ಇದ್ದ ಐಡಿ ಕಾರ್ಡ್ ತೋರಿಸಲು ಹೇಳಿ ಬಳಿಕ ಬಸ್ಸಿನಿಂದ ಕೆಳಕ್ಕೆ ಎಳೆದು ಹಾಕಿ ಹಲ್ಲೆ ನಡೆಸಿದ್ದರು.