ಬಿಜೆಪಿ ಕಾರ್ಯಕರ್ತನ ಕಿರುಕುಳಕ್ಕೆ ಬೆಸೆತ್ತು ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ- ಬಿ.ಜೆ.ಪಿ ಕಾರ್ಯಕರ್ತ ನಿತೇಶ ಬಂಧನ
ಕೊಟ್ಟಿಗೆಹಾರ- ಬಿಜೆಪಿ ಕಾರ್ಯಕರ್ತನ ನಿತೀಶ್ ನ ಕಿರುಕುಳಕ್ಕೆ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನಲ್ಲಿ ನಡೆದಿದೆ.
ಸಾವಿಗೂ ಮೊದಲು ಬಾಲಕಿ ಆಸ್ಪತ್ರೆಯಲ್ಲಿ ಡೆತ್ ನೋಟ್ ಬರೆದಿದ್ದು, ಬಿಜೆಪಿ ಕಾರ್ಯಕರ್ತ ನಿತೇಶ(25) ಎಂಬಾತ ತನ್ನ ಸಾವಿಗೆ ಕಾರಣ ಎಂದು ತಿಳಿಸಿದ್ದಾಳೆನ್ನಲಾಗಿದೆ. ಬಿಜೆಪಿ ಕಾರ್ಯಕರ್ತ ನಿತೇಶನನ್ನು ಇಂದು ಪೊಲೀಸರು ಬಂಧಿಸಿದ್ದಾರೆ.
ಕಳಸ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿನಿ 17 ವರ್ಷದ ದೀಪ್ತಿ ಮೃತ ದುರ್ದೈವಿಯಾಗಿದ್ದಾಳೆ. ಅಪ್ರಾಪ್ತ ಬಾಲಕಿಯನ್ನು ಪ್ರೀತಿಸುವ ನಾಟಕವಾಡಿ ಬಳಿಕ ಬಿಜೆಪಿ ಕಾರ್ಯಕರ್ತ ವಂಚಿಸಿದ್ದಾನೆ. ಇದರಿಂದ ನೊಂದು ಜನವರಿ 10ರಂದು ಬಾಲಕಿ ಕಳೆ ನಾಶಕ ಸೇವಿಸಿದ್ದಾಳೆ.
ಗಂಭೀರ ಸ್ಥಿತಿಯಲ್ಲಿದ್ದ ಬಾಲಕಿ ಮಂಗಳೂರಿನ ಎ.ಜೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಜನವರಿ 14ರಂದು ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಕೊನೆಯುಸಿರೆಳೆದಿದ್ದಾಳೆ.