
ವಿವಾಹಿತ ಮಹಿಳೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪಾಗಲ್ ಪ್ರೇಮಿ
ವಿಜಯನಗರ – ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ದುಗ್ಗಾವತಿ ಗ್ರಾಮದ ದುಗ್ಗಮ್ಮ ದೇವಿ ಜಾತ್ರೆಯಲ್ಲಿ ಪ್ರೀತಿಸಿದವಳು ಸಿಗಲಿಲ್ಲ ಎಂದು ಆಕೆಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಪ್ರತಿಭಾ (25) ಎಂಬಾಕೆಯನ್ನು ಹನುಮಂತ ಮೂಕಪ್ಪನವರ ಎಂಬಾತ ಕೊಲೆ ಮಾಡಿದ್ದಾನೆ.
ಆರೋಪಿ ಹನುಮಂತ ಪ್ರತಿಭಾಳನ್ನು ಪ್ರೀತಿಸುವುದಾಗಿ ಹೇಳಿಕೊಂಡು ಗ್ರಾಮದಲ್ಲಿ ಸುತ್ತುತ್ತಿದ್ದ. ಇದಾದ ಬಳಿಕ ಪ್ರತಿಭಾಳನ್ನು ರಾಣೆಬೆನ್ನೂರಿನ ನಾಗರಾಜ್ ಎಂಬುವವರ ಜೊತೆ ಮದುವೆ ಮಾಡಿಕೊಡಲಾಗಿತ್ತು. ಜೊತೆಗೆ ಆಕೆಗೆ ಮಗು ಸಹ ಇದೆ.
ಮದುವೆಯಾದ ಬಳಿಕ ಚೆನ್ನಾಗಿ ಜೀವನ ನಡೆಸುತ್ತಿದ್ದ ಪ್ರತಿಭಾ ಚಿಕ್ಕಮ್ಮನ ಊರಿಗೆ ಜಾತ್ರೆಗೆಂದು ಬಂದಿದ್ದಳು. ಅಲ್ಲಿಂದ ವಾಪಸ್ಸು ತನ್ನೂರಿಗೆ ಹೋಗಬೇಕು ಎನ್ನುವಷ್ಟರಲ್ಲಿ ಪಾಗಲ್ ಪ್ರೇಮಿ ಹನುಮಂತ ಆಕೆಯನ್ನು ನಡು ರಸ್ತೆಯಲ್ಲಿ ಮನ ಬಂದಂತೆ ದೇಹದ ಬಹುತೇಕ ಭಾಗಗಳಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡುವ ಮಾರ್ಗಮಧ್ಯೆಯೇ ಸಾವನ್ನಪ್ಪಿದ್ದಾಳೆ.
ಹಲವಾಗಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.