ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಕಡಬ-ಎಸೆಸೆಲ್ಸಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಎಲಿಮಲೆಯಲ್ಲಿ ನಡೆದಿದೆ ಎಲಿಮಲೆ ಸರಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಶಮಂತ್ ಮೃತ ವಿದ್ಯಾರ್ಥಿ.
ಮೂಲತಃ ಚೊಕ್ಕಾಡಿಯವರಾಗಿರುವ, ಪ್ರಸ್ತುತ ನೆಲ್ಲೂರು ಕೆಮ್ರಾಜೆ ಗ್ರಾಮದ ಹೊಟ್ಟುಚೋಡಿಯಲ್ಲಿ ನೆಲೆಸಿರುವ ದಿ| ವಾಸುದೇವ ಎಂಬವರ ಪುತ್ರ ಶಮಂತ್ ಇಂದು ಬೆಳಿಗ್ಗೆ6 ಗಂಟೆಯ ಸುಮಾರಿಗೆ ಮನೆಯಿಂದ ಹೊರಟು ಬಂದು ಶಾಲಾ ಆವರಣದ ಶೌಚಾಲಯದ ಹಿಂಬದಿ ಗಿಡವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ಥಳೀಯರು ವಿಷಯ ತಿಳಿದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.