• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Thursday, July 3, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಯಕ್ಷಗಾನದ ಲೋಕದ ಗಾನಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ನಿಧನ

Kannada News Desk by Kannada News Desk
April 25, 2024
in ನಮ್ಮ ಕರಾವಳಿ
0
ಯಕ್ಷಗಾನದ ಲೋಕದ ಗಾನಕೋಗಿಲೆ ಸುಬ್ರಹ್ಮಣ್ಯ ಧಾರೇಶ್ವರ ನಿಧನ
0
SHARES
530
VIEWS
WhatsappTelegram Share on FacebookShare on TwitterLinkedin

ಕುಂದಾಪುರ: ಯಕ್ಷಗಾನದ ಬಡಗುತಿಟ್ಟಿನ ಶ್ರೇಷ್ಠ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ತಮ್ಮ 67ನೇ ವಯಸ್ಸಿನಲ್ಲಿ ಬೆಂಗಳೂರಿನ ಮನೆಯಲ್ಲಿ ಏ.25ರಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ʼಗಾನಕೋಗಿಲೆʼ ಎಂದೇ ಅಭಿಮಾನಿಗಳ ಮನದಲ್ಲಿ ನೆಲೆಯೂರಿರುವ, ಭಾಗವತರ ಅಂತ್ಯಕ್ರಿಯೆ ಇಂದು ಸಂಜೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ. ಸುಮಾರು 46 ವರ್ಷಗಳ ಕಾಲ ಯಕ್ಷಗಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಅವರು, ಪತ್ನಿ, ಪುತ್ರ ಹವ್ಯಾಸಿ ಕಲಾವಿದ ಕಾರ್ತಿಕ್ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

1957ರ ಸೆ.5ರಂದು ಜನಿಸಿದ ಅವರನ್ನು ಯಕ್ಷರಂಗದ ತಜ್ಞ ಭಾಗವತರೆಂದೇ ಗುರುತಿಸಲಾಗುತ್ತಿತ್ತು. ಯಕ್ಷಗಾನದ ಹೊಸ ಹಾಗೂ ಹಳೆಯ ಪ್ರಸಂಗಗಳ ಪರಿಣಿತರಾಗಿದ್ದರು. ಕೋಟ ಅಮೃತೇಶ್ವರಿ ಮೇಳ, ಪೆರ್ಡೂರು ಮೇಳಗಳಲ್ಲಿ ಭಾಗವತರಾಗಿ, ಹೊಸರಾಗಗಳನ್ನು ಹೊಸ ತಾಂತ್ರಿಕತೆಯನ್ನು ಯಕ್ಷರಂಗದಲ್ಲಿ ಯಶಸ್ವಿಯಾಗಿ ಬಳಸಿದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವಾರು ಪ್ರಶಸ್ತಿ, ಸನ್ಮಾನಗಳಿಗೆ ಪಾತ್ರರಾಗಿರುವ ಧಾರೇಶ್ವರ ಅವರು ಗುರುಗಳಾದ ನಾರಾಯಣಪ್ಪ ಉಪ್ಪೂರರನ್ನು ಸದಾ ಸ್ಮರಿಸುತ್ತಿದ್ದರು. ಸಾಂಪ್ರದಾಯಿಕ ರಾಗಗಳೊಂದಿಗೆ ಹೊಸ ರಾಗಗಳನ್ನು ತಂದು ಪೌರಾಣಿಕ ಹಾಗೂ ಸಾಮಾಜಿಕ ಪ್ರಸಂಗಗಳನ್ನು ಚೆನ್ನಾಗಿ ನಿರ್ವಹಿಸುತ್ತಿದ್ದ ಸುಬ್ರಹ್ಮಣ್ಯ ಧಾರೇಶ್ವರರು, ಕಾಳಿಂಗ ನಾವಡರರ ನಂತರ ಯಕ್ಷಗಾನ ರಂಗದಲ್ಲಿ ತನ್ನ ಇಂಪಾದ ಕಂಠದಿಂದ ಜನಪ್ರಿಯರಾದವರು.

ಮೂಲತಃ ಎಲೆಕ್ಟ್ರಿಕಲ್ ಅಂಗಡಿ ಮಾಡಿಕೊಂಡಿದ್ದ ಸುಬ್ರಹ್ಮಣ್ಯ ಧಾರೇಶ್ವರ ಕೋಟದಲ್ಲಿ ಯಕ್ಷಗಾನ ಕೇಂದ್ರಕ್ಕೆ ಸೇರಿ ಅಲ್ಲಿ ಭಾಗವತಿಕೆಯ ಮಟ್ಟುಗಳನ್ನು ಕಲಿತರು. ಉಪ್ಪೂರರಿಂದ ಭಾಗವತಿಕೆಯ ಎಲ್ಲ ಪಟ್ಟುಗಳನ್ನು ಕಲಿತರು. ಆರಂಭದಲ್ಲಿ ಎಲೆಕ್ಟ್ರಿಶಿಯನ್ ಆಗಿ ಅಮೃತೇಶ್ವರಿ ಮೇಳಕ್ಕೆ ಸೇರಿದರು. ಈ ಸಂದರ್ಭ ಗುರುಗಳಾದ ಉಪ್ಪೂರರ ಒತ್ತಾಸೆಯಿಂದ ಭಾಗವತಿಕೆ ಮಾಡಲು ಆರಂಭಿಸಿದರು. ಪೀಠಿಕೆ ಸ್ತ್ರೀವೇಷದವರೆಗೆ ಪದ್ಯ ಹೇಳಿ, ಎಲೆಕ್ಟ್ರಿಶಿಯನ್ ಆಗಿ, ಹಗಲು ಮೈಕ್ ಜಾಹೀರಾತು ನೀಡುವ ಕೆಲಸವನ್ನು ಮಾಡುತ್ತಿದ್ದ ಧಾರೇಶ್ವರರು, ಬಳಿಕ ಭಾಗವತಿಕೆಯಲ್ಲೇ ತೊಡಗಿಸಿಕೊಂಡು ಜನಪ್ರಿಯರಾದರು. ಪೆರ್ಡೂರು ಮೇಳದಲ್ಲಿ ಸುಮಾರು 26ಕ್ಕೂ ಅಧಿಕ ವರ್ಷಗಳ ತಿರುಗಾಟ ಸಹಿತ ಧಾರೇಶ್ವರ ಚಾರಿಟೇಬಲ್ ಟ್ರಸ್ಟ್ ಮೂಲಕ ಯಕ್ಷಗಾನ ಸೇವೆ ಮಾಡಿದ್ದಾರೆ.

ಸುಮಾರು 300ಕ್ಕೂ ಅಧಿಕ ಪೌರಾಣಿಕ, ಐತಿಹಾಸಿಕ, ಸಾಮಾಜಿಕ ಪ್ರಸಂಗಗಳನ್ನು ನಿರ್ದೇಶಿಸಿದ ಕೀರ್ತಿ ಧಾರೇಶ್ವರ ಅವರಿಗಿದೆ. ಪುರಂದರದಾಸ, ಕನಕದಾಸ, ಬಸವಣ್ಣ, ಚೆನ್ನಮಲ್ಲಿಕಾರ್ಜುನರ ಕೀರ್ತನೆಗಳನ್ನೂ ಅವರು ಹಾಡಿದ್ದಾರೆ. ಕುವೆಂಪು, ಬೇಂದ್ರೆಯವರ ಹಾಡುಗಳೂ ಯಕ್ಷಗಾನದ ಹಾಡುಗಳಾಗಿದ್ದು ಧಾರೇಶ್ವರರ ಕಂಠದಲ್ಲಿ. ಅಮೃತ ವರ್ಷಿಣಿ, ಸಿಂಧೂರ ಭಾಗ್ಯ, ರಕ್ತ ತಿಲಕ, ಶೂದ್ರ ತಪಸ್ವಿನಿ, ಚಾರು ಚಂದ್ರಿಕೆ, ಗಗನ ಗಾಮಿನಿ, ವಸಂತ ಸೇನೆ ನಿರ್ದೇಶಿಸಿದ ಎಲ್ಲ ಪ್ರಸಂಗಗಳೂ ಜನಮಾನಸದಲ್ಲಿ‌ ಅಚ್ಚಳಿಯದೇ ಉಳಿದಿವೆ.

Related

Previous Post

ಅಂಕೋಲಾದಲ್ಲಿ ಬೈಕ್ ಹಾಗೂ ಟ್ರ್ಯಾಕ್ಸ್ ವಾಹನ ನಡುವೆ ಭೀಕರ ಅಪಘಾತ – ಬೈಕ್ ಸವಾರ ಸ್ಥಳದಲ್ಲೇ ಸಾವು

Next Post

ಕಾಂಗ್ರೆಸ್ ಸರ್ಕಾರದಲ್ಲಿ ದೇಶದ್ರೋಹಿಗಳಿಗೆ ಪ್ರೋತ್ಸಾಹ ಮತ್ತು ರಕ್ಷಣೆ ಸಿಗುತ್ತಿದೆ – ಭಟ್ಕಳದ ಮಾಜಿ ಶಾಸಕ ಸುನೀಲ್ ನಾಯ್ಕ

Kannada News Desk

Kannada News Desk

Next Post
ಕಾಂಗ್ರೆಸ್ ಸರ್ಕಾರದಲ್ಲಿ ದೇಶದ್ರೋಹಿಗಳಿಗೆ ಪ್ರೋತ್ಸಾಹ ಮತ್ತು ರಕ್ಷಣೆ ಸಿಗುತ್ತಿದೆ – ಭಟ್ಕಳದ ಮಾಜಿ ಶಾಸಕ ಸುನೀಲ್ ನಾಯ್ಕ

ಕಾಂಗ್ರೆಸ್ ಸರ್ಕಾರದಲ್ಲಿ ದೇಶದ್ರೋಹಿಗಳಿಗೆ ಪ್ರೋತ್ಸಾಹ ಮತ್ತು ರಕ್ಷಣೆ ಸಿಗುತ್ತಿದೆ - ಭಟ್ಕಳದ ಮಾಜಿ ಶಾಸಕ ಸುನೀಲ್ ನಾಯ್ಕ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.