• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, May 28, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

100ಕ್ಕೂ ಅಧಿಕ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಕರಣ-ಸ್ವಯಂ ಘೋಷಿತ ದೇವಮಾನವ ಜೇಲೇಬಿ ಬಾಬಾ ಅಮರ್ ಪುರಿ ಗೆ 14 ವರ್ಷ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದ ಕೋರ್ಟ್

ಸಂಪಾದಕರು-ಕುಮಾರ ನಾಯ್ಕ

Kannada News Desk by Kannada News Desk
January 12, 2023
in ದೇಶಿ ಸುದ್ದಿ
0
100ಕ್ಕೂ ಅಧಿಕ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಕರಣ-ಸ್ವಯಂ ಘೋಷಿತ ದೇವಮಾನವ ಜೇಲೇಬಿ ಬಾಬಾ ಅಮರ್ ಪುರಿ ಗೆ 14 ವರ್ಷ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದ ಕೋರ್ಟ್
0
SHARES
450
VIEWS
WhatsappTelegram Share on FacebookShare on TwitterLinkedin

100ಕ್ಕೂ ಅಧಿಕ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಕರಣ-ಸ್ವಯಂ ಘೋಷಿತ ದೇವಮಾನವ ಜೇಲೇಬಿ ಬಾಬಾ ಅಮರ್ ಪುರಿ ಗೆ 14 ವರ್ಷ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದ ಕೋರ್ಟ್

ಚಂಡೀಗಢ- ನೂರಕ್ಕೂ ಅಧಿಕ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಪ್ರಕರಣಗಳಿಗೆ ಸಂಬಂಧಿಸಿದಂತೆ ಹರ್ಯಾಣದ ಬಾಬಾ ಬಾಲಕನಾಥ್ ದೇವಾಲಯದ ಅರ್ಚಕ, ಜಿಲೇಬಿ ಬಾಬಾ ಎಂದೇ ಹೆಸರು ಪಡೆದಿದ್ದ ಸ್ವಯಂ ಘೋಷಿತ ದೇವಮಾನವ ಅಮರ್ ಪುರಿಗೆ ಫತೇಹಾಬಾದ್ ಫಾಸ್ಟ್ ಟ್ರ್ಯಾಕ್ ಕೋರ್ಟ್ ಬುಧವಾರ 14 ವರ್ಷ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ನಾಲ್ಕು ಹೆಣ್ಣು ಮಕ್ಕಳು ಹಾಗೂ ಇಬ್ಬರು ಗಂಡು ಮಕ್ಕಳ ತಂದೆಯಾಗಿದ್ದ ಅಮರ್ ಪುರಿ ಸುಮಾರು 23 ವರ್ಷಗಳ ಹಿಂದೆ ಪಂಜಾಬ್ ನ ಮಾನ್ಸಾದಿಂದ ಹರ್ಯಾಣದ ತೋಹಾನಾ ಪ್ರದೇಶಕ್ಕೆ ವಲಸೆ ಬಂದಿದ್ದ. ಮೊದಲ 13 ವರ್ಷಗಳ ಕಾಲ ರೈಲ್ವೆ ನಿಲ್ದಾಣದ ಬಳಿ ಜಿಲೇಬಿ ಅಂಗಡಿ ಇಟ್ಟುಕೊಂಡಿದ್ದ. ಈ ಸಂದರ್ಭದಲ್ಲಿ ಮಂತ್ರವಾದಿಯೊಬ್ಬನನ್ನು ಭೇಟಿಯಾಗಿದ್ದ ಅಮರ್ ಪುರಿ, ಆತನಿಂದ ಕೆಲವು ವಿದ್ಯೆಗಳನ್ನು ಕಲಿತುಕೊಂಡ ಬಳಿಕ ತೋಹಾನಾದಿಂದ ಕೆಲವು ವರ್ಷಗಳ ಕಾಲ ಕಣ್ಮರೆಯಾಗಿದ್ದ.

ಹಲವು ವರ್ಷಗಳ ನಂತರ ಊರಿಗೆ ವಾಪಸ್ ಆಗಿದ್ದ ಅಮರ್ ಪುರಿ ದೇವಸ್ಥಾನದ ಸಮೀಪ ಮನೆಯೊಂದನ್ನು ನಿರ್ಮಿಸಿದ್ದು, ಆತನಿಗೆ ಅನುಯಾಯಿಗಳು ಹುಟ್ಟಿಕೊಳ್ಳತೊಡಗಿದ್ದರು. ಅದರಲ್ಲಿ ಹೆಚ್ಚಿನವರು ಮಹಿಳೆಯರೇ ಆಗಿದ್ದರು. ದಿನಕಳೆದಂತೆ ಅಮರ್ ವೀರ್ ಜಿಲೇಬಿ ಬಾಬಾನಾಗಿ ಜನಪ್ರಿಯತೆ ಪಡೆದ.

ಹೀಗೆ ತನ್ನ ಬಳಿ ದೋಷ ಪರಿಹಾರಕ್ಕಾಗಿ ಬರುತ್ತಿದ್ದ ಮಹಿಳೆಯರು, ಯುವತಿಯರಿಗೆ ಡ್ರಗ್ಸ್, ಅಮಲು ಪದಾರ್ಥ ನೀಡಿ ದೈಹಿಕ ದೌರ್ಜನ್ಯ ಎಸಗಿ ವಿಡಿಯೋ ರೆಕಾರ್ಡ್ ಮಾಡಿ ಇಟ್ಟುಕೊಂಡು, ಅವರನ್ನು ಬ್ಲ್ಯಾಕ್ ಮೇಲ್ ಮಾಡುತ್ತಿದ್ದ.

“ ಇದೀಗ ಪೋಕ್ಸೋ ಕಾಯ್ದೆ ಸೆಕ್ಷನ್ 6 ಸೇರಿದಂತೆ ವಿವಿಧ ಕಲಂನಡಿ ಜಿಲೇಬಿ ಬಾಬಾ ಅಲಿಯಾಸ್ ಅಮರ್ ಪುರಿ (63) ಗೆ ಹೆಚ್ಚುವರಿ ಜಿಲ್ಲಾ ಜಡ್ಜ್ ಬಲ್ವಂತ್ ಸಿಂಗ್ 14 ವರ್ಷಗಳ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

ಎಲ್ಲಾ ಪ್ರಕರಣ ಸೇರಿ ಜಿಲೇಬಿ ಬಾಬಾ 14 ವರ್ಷ ಜೈಲುಶಿಕ್ಷೆ ಅನುಭವಿಸಬೇಕು ಎಂದು ಸಂತ್ರಸ್ತರ ಪರ ವಕೀಲ ಸಂಜಯ್ ವರ್ಮಾ ತಿಳಿಸಿದ್ದಾರೆ.

ಅಮರ್ ಪುರಿ ಅಲಿಯಾಸ್ ಬಿಲ್ಲು ಎಂಬ ಸ್ವಯಂಘೋಷಿತ ದೇವಮಾನವ ಜಿಲೇಬಿ ಬಾಬಾನನ್ನು ಫತೇಹಾಬಾದ್ ಕೋರ್ಟ್ ದೋಷಿ ಎಂದು ಜನವರಿ 5ರಂದು ಆದೇಶ ನೀಡಿತ್ತು. ಈ ಸಂದರ್ಭದಲ್ಲಿ ಅಮರ್ ಪುರಿ ಕೋರ್ಟ್ ರೂಂನಲ್ಲಿ ಕಣ್ಣೀರಿಟ್ಟಿದ್ದ.

Related

Previous Post

ಮಂಗಳೂರಿನಲ್ಲಿ ಗಾಂಜಾ ಮಾರಾಟ: ಖಾಸಗಿ ಮೆಡಿಕಲ್ ಕಾಲೇಜಿನ ವೈದ್ಯರು, ವಿದ್ಯಾರ್ಥಿನಿಯರು, ವಿದ್ಯಾರ್ಥಿಗಳು ಸಹಿತ 10 ಮಂದಿಯ ಬಂಧನ*

Next Post

ಶಾಸಕ ಸುನೀಲ್ ನಾಯ್ಕರಿಂದ ಭಟ್ಕಳ ಪುರಸಭಾ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆ ಅಡಿ .6.14 ಕೋಟಿ ರೂಪಾಯಿ ಕಾಮಗಾರಿ ಉದ್ಘಾಟನೆ- ಪುರಸಭೆ ಅಧ್ಯಕ್ಷ ಪರ್ವೇಜ್ ಕಾಶೀಂಜಿ ಅವರ ಕಾರ್ಯವೈಖರಿ ಹಾಡಿ ಹೊಗಳಿದ ಶಾಸಕ ಸುನೀಲ್ ನಾಯ್ಕ

Kannada News Desk

Kannada News Desk

Next Post
ಶಾಸಕ ಸುನೀಲ್ ನಾಯ್ಕರಿಂದ ಭಟ್ಕಳ ಪುರಸಭಾ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆ ಅಡಿ .6.14 ಕೋಟಿ ರೂಪಾಯಿ ಕಾಮಗಾರಿ ಉದ್ಘಾಟನೆ- ಪುರಸಭೆ ಅಧ್ಯಕ್ಷ ಪರ್ವೇಜ್ ಕಾಶೀಂಜಿ ಅವರ ಕಾರ್ಯವೈಖರಿ ಹಾಡಿ ಹೊಗಳಿದ ಶಾಸಕ ಸುನೀಲ್ ನಾಯ್ಕ

ಶಾಸಕ ಸುನೀಲ್ ನಾಯ್ಕರಿಂದ ಭಟ್ಕಳ ಪುರಸಭಾ ವ್ಯಾಪ್ತಿಯಲ್ಲಿ ನಗರೋತ್ಥಾನ ಯೋಜನೆ ಅಡಿ .6.14 ಕೋಟಿ ರೂಪಾಯಿ ಕಾಮಗಾರಿ ಉದ್ಘಾಟನೆ- ಪುರಸಭೆ ಅಧ್ಯಕ್ಷ ಪರ್ವೇಜ್ ಕಾಶೀಂಜಿ ಅವರ ಕಾರ್ಯವೈಖರಿ ಹಾಡಿ ಹೊಗಳಿದ ಶಾಸಕ ಸುನೀಲ್ ನಾಯ್ಕ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಯಲ್ಲಾಪುರ-ಮುಂಡಗೋಡು ವಿಧಾನಸಭಾ ಕ್ಷೇತ್ರದ ಶಾಸಕ ಶಿವರಾಮ ಹೆಬ್ಬಾರನ್ನು ಪಕ್ಷದಿಂದ ಉಚ್ಚಾಟಿಸಿದ ಬಿಜೆಪಿ
ಹೊನ್ನಾವರದಲ್ಲಿ ಅಕ್ರಮ ಮರಳು ದಂಧೆಯ ಟಿಪ್ಪರ್ ನದಿಗೆ ಬಿದ್ದ ವಿಡಿಯೋ ವೈರಲ್ ಆಗಿ ಮುಜುಗರಕ್ಕೆ ಒಳಗಾದ ಬಳಿಕ ಪೊಲೀಸ ಇಲಾಖೆಯಿಂದ ಸುಮೋಟೋ ಪ್ರಕರಣ ದಾಖಲು
ಉತ್ತರ ಕನ್ನಡ ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ಓಪನ್
ಹೊನ್ನಾವರ ದ ಶರಾವತಿ ನದಿಯಲ್ಲಿ ಅಕ್ರಮ ಮರಳುಗಾರಿಕೆ: ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಕರ್ನಾಟಕ ರಣಧೀರರ ವೇಧಿಕೆ (ರಿ) ಬೆಂಗಳೂರು ಸಂಘಟನೆಯ ಭಟ್ಕಳ ತಾಲೂಕ ಅಧ್ಯಕ್ಷರಾಗಿ ಸಾಮಾಜಿಕ ಹೋರಾಟಗಾರ ಮಂಜುನಾಥ.ಎಸ್. ನಾಯ್ಕ ಮುಂಡಳ್ಳಿ ಆಯ್ಕೆ
ಶಿರಸಿಯ ಪಂಚಾಯತ ರಾಜ್ ಇಂಜಿನಿಯರಿಂಗ್ ಕಚೇರಿಯ ಉಪವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಕಚೇರಿಯ ಲೆಕ್ಕಾಧಿಕಾರಿ ಸುರೇಶ ಬೀಳಗಿ 10 ಸಾವಿರ ರೂಪಾಯಿ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ
ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರು: ಜಿಲ್ಲಾಧಿಕಾರಿಗಳಿಂದ ಅಂಗನವಾಡಿಗಳಿಗೆ ನಾಳೆ ರಜೆ ಘೋಷಣೆ
ಸಚಿವ ಮಂಕಾಳ ವೈದ್ಯ ಪರಿಶಿಷ್ಟ ಎಂದು ಸುಳ್ಳು ಹೇಳಿ ಅಧಿಕಾರ ಅನುಭವಿಸಿದ್ದಾರೆ ಎಂದು ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮೀಸಲಾತಿ ರಕ್ಷಣಾ ವೇದಿಕೆಯಿಂದ ರಾಜ್ಯಪಾಲರಿಗೆ ದೂರು
ಭಟ್ಕಳದಲ್ಲಿ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ನೇತೃತ್ವದಲ್ಲಿ ನಡೆದ ಉತ್ತರ ಕನ್ನಡ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಸಮಸ್ಯೆಗಳ ಸುರಿಮಳೆ
ಆರ್.ಟಿ.ಐ ಕಾರ್ಯಕರ್ತರು ಮಾಹಿತಿ ಹಕ್ಕು ಕಾಯ್ದೆ ಅಡಿ ಹೊಟ್ಟೆಪಾಡಿಗಾಗಿ ಅರ್ಜಿ ಹಾಕುತ್ತಾರೆ ಎಂದು ಸಚಿವ ಮಂಕಾಳ ವೈದ್ಯ ಹೇಳಿದ್ದು ಯಾಕೆ ಅಸಲಿ ವಿಷಯ ಇಲ್ಲಿದೆ ನೋಡಿ
16:37