ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಈಶ್ವರ ಏನ್ ನಾಯ್ಕ ಮುರ್ಡೇಶ್ವರ ಆಯ್ಕೆ
ಭಟ್ಕಳ-ಭಾರತೀಯ ಜನತಾ ಪಾರ್ಟಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಉಪಾಧ್ಯಕ್ಷರಾಗಿ ಈಶ್ವರ ಏನ್ ನಾಯ್ಕ ಮುರ್ಡೇಶ್ವರ ಇವರನ್ನು ಆಯ್ಕೆ ಮಾಡಿ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಅಧ್ಯಕ್ಷ ಶ್ರೀ ಆರ್. ರಘು ಅವರು. ಆದೇಶ ಹೊರಡಿಸಿದ್ದಾರೆ.
ಆದೇಶದಲ್ಲಿ ಅವರು ಈ ಜವಾಬ್ದಾರಿಯನ್ನು ಅತ್ಯಂತ ಹೊಣೆಗಾರಿಕೆ ಯಿಂದ ನಿಭಾಯಿಸಿ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಜಯಭೇರಿ ಬಾರಿಸುವ ಮನೋಬಾವನೆಯಿಂದ ಶ್ರಮ ವಹಿಸಿ ಕೆಲಸ ಮಾಡುವಂತೆ ತಿಳಿಸಿದ್ದಾರೆ.ಈ ಈಶ್ವರ್ ನಾಯ್ಕ್ ಅವರು ಬಿಜೆಪಿ ಒಬಿಸಿ ಮೋರ್ಚಾದ ಜಿಲ್ಲಾ ಪ್ರಭಾರಿ ಆಗಿ ಕಾರ್ಯ ನಿರ್ವಹಿಸಿದ್ದರು. ಇವರು 2018 ಮತ್ತು 2023 ರ ಭಟ್ಕಳ ವಿಧಾನಸಭಾ ಬಿಜೆಪಿ ಎಂ.ಎಲ್.ಎ ಟಿಕೆಟ್ ಆಕಾಂಕ್ಷಿ ಆಗಿದ್ದರು.ಇದೀಗ ಈಶ್ವರ ನಾಯ್ಕ್ ಅವರಿಗೆ ಪಕ್ಷದಲ್ಲಿ ರಾಜ್ಯ ಮಟ್ಟದ ಹುದ್ದೆ ಸಿಕ್ಕಿರುವುದು ಅವರ ಅಭಿಮಾನಿಗಳಿಗೆ ಮತ್ತು ಬೆಂಬಲಿಗರಿಗೆ ಸಂತಸ ತಂದಿದೆ.