ಮನೆಯ ಖಾತೆ ಬದಲಾವಣೆಗೆ 80 ಸಾವಿರ ರೂ. ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಲಂಚಬಾಕ ಕಡು ಭ್ರಷ್ಟ ಕಂದಾಯ ನಿರೀಕ್ಷಕ ಅಬ್ದುಲ್ ಖಾದರ್
ಬಳ್ಳಾರಿ-ಬಳ್ಳಾರಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಮನೆಯ ಖಾತೆ ಬದಲಾವಣೆಗೆ 80 ಸಾವಿರ ರೂ. ಲಂಚ ಪಡೆಯುವ ವೇಳೆ ಕಂದಾಯ ನಿರೀಕ್ಷಕ ಹಾಗೂ ಕೇಸ್ ವರ್ಕರ್ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಸಿಬ್ಬಂದಿಗಳಾದ ಫಸ್ಟ್ ಗ್ರೇಡ್ ಕಂದಾಯ ನಿರೀಕ್ಷಕ ಅಬ್ದುಲ್ ಖಾದರ್, ಕೇಸ್ ವರ್ಕರ್ ಚಿನ್ನಯ್ಯ ಎನ್ನುವವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಇವರು ಕಿರಣ್ ಯಾದವ್ ಎಂಬುವವರಿಗೆ ಯೂಸೋಫ್ ಎನ್ನುವ ಬ್ರೋಕರ್ ಮೂಲಕ 80 ಸಾವಿರ ರೂ. ಲಂಚದ ಬೇಡಿಕೆಯಿಟ್ಟಿದ್ದರು ಎಂದು ತಿಳಿದುಬಂದಿದೆ.
ಇದರಿಂದ ಬೇಸತ್ತ ಕಿರಣ್ ನ.16 ರಂದು ಬುಧವಾರ ಲೋಕಾಯುಕ್ತ ಕಚೇರಿಯಲ್ಲಿ ದೂರು ನೀಡಿದ್ದು, ಲೋಕಾಯುಕ್ತ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದರು.
ಬ್ರೋಕರ್ ಯುಸೋಫ್ ಮೂಲಕ ಕಂದಾಯ ನಿರೀಕ್ಷಕ ಅಬ್ದುಲ್ ಖಾದರ್ 80 ಸಾವಿರ ರೂ. ಲಂಚದ ಹಣವನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಲಂಚದ ಹಣ ಸಮೇತ ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದಾರೆ