• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, May 24, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಪತ್ರಕರ್ತ ಹಾಗೂ  ಸಾಮಾಜಿಕ ಹೋರಾಟಗಾರ ಕಿರಣ್‌ ಪೂಜಾರಿಯವರಿಂದ ಅರೆಬೆತ್ತಲೆ ಧರಣಿ

Kannada News Desk by Kannada News Desk
April 22, 2025
in ಉಡುಪಿ
0
ಪತ್ರಕರ್ತ ಹಾಗೂ  ಸಾಮಾಜಿಕ ಹೋರಾಟಗಾರ ಕಿರಣ್‌ ಪೂಜಾರಿಯವರಿಂದ ಅರೆಬೆತ್ತಲೆ ಧರಣಿ
0
SHARES
126
VIEWS
WhatsappTelegram Share on FacebookShare on TwitterLinkedin

ಕುಂದಾಪುರ : ಪೊಲೀಸ್ ಅಧಿಕಾರಿ ವಿನಯ್ ಕೊರ್ಲಹಳ್ಳಿ ಹಾಗೂ ಗ್ರಾಮ ಪಂಚಾಯತ್ ಅಧಿಕಾರಿ ಹರೀಶ್ ಮೊಗವೀರ ಕರ್ತವ್ಯಲೋಪ ಎಸಗಿ ಸುಳ್ಳು ಕೇಸ್ ಗಳನ್ನು ದಾಖಲಿಸಿ ದಲಿತ ಮಹಿಳೆಯರ ಮೇಲೆ ಮತ್ತು ಪತ್ರಕರ್ತರ ಮೇಲೆ ದೌರ್ಜನ್ಯವೆಸಗಿದ್ದಾರೆ ಮತ್ತು ರವೀಶ್ ಚಂದ್ರ ಶೆಟ್ಟಿ ನ್ಯಾಯವಾದಿಯೊಬ್ಬರು ತಮಗೆ ಹಾಗೂ ತಮ್ಮ ಸಮಾಜಕ್ಕೆ ಅವಮಾನಿಸಿ ತಮ್ಮ ಮೇಲೆ ಸುಳ್ಳು ಪ್ರಕರಣಗಳು ದಾಖಲಿಸುವಂತೆ ಪೋಲಿಸರ ಮೇಲೆ ಒತ್ತಡ ಹೇರಿದ್ದಾರೆ. ಈ ಮೂವರ ವಿರುದ್ಧ ಸೋಮವಾರ ಮಿನಿ ವಿಧಾನ ಸೌಧದ ಎದುರಿಗೆ ಸಾಂಕೇತಿಕ ಆರೆಬೆತ್ತಲೆ ಧರಣಿ ನಡೆಸಿದ್ದಾರೆ.

ದಲಿತ ಮಹಿಳೆಯರಿಗೆ ಮತ್ತು ಬಿಲ್ಲವ ಪತ್ರಕರ್ತನಿಗೆ ಇಂದಿಗೂ ಹೊಸೂರು, ಇಡೂರ್, ಕುಕ್ಕಡ, ಜಾನ್ನಲನಲ್ಲಿ ಬಿಲ್ಲವರಿಗೆ ಬಾವಿ ಮುಟ್ಟಲಿಕೆ, ನೀರು ತೆಗೆಯಲು ಬಿಡುವುದಿಲ್ಲ ಇವರನ್ನು SC, ST ರೀತಿ ಪರಿಗಣಿಸುತ್ತೇವೆ ಎಂದು ತನ್ನ ಸಹಚರರಿಗೆ ಪೂಜಾರಿ ಮೇಲೆ ಕಲ್ಲು ಹಾಕಿ ಕೊಲ್ಲಿ ಎಂದು PSI ವಿನಯ್ ಕೊರ್ಲಹಳ್ಳಿ ಎದುರಿಗೆ ಹಲ್ಲೆಗೆ ಮುಂದಾಗಿದ್ದರು. ಆದರೆ PSI ಅವರ ಮೇಲೆ ಯಾವುದೇ ಕ್ರಮ ಜರುಗಿಸಿಲ್ಲ. ದಲಿತ, ಬಿಲ್ಲವರ ಬಗ್ಗೆ ಮತ್ತು ಪತ್ರಕರ್ತನ ಬಗ್ಗೆ, ತನ್ನ ಸಮಾಜದ ಬಗ್ಗೆ ಅವಮಾನಕರವಾಗಿ ನಿಂದಿಸಿ ಸುಳ್ಳು ಪ್ರಕರಣಗಳನ್ನು ದಾಖಲಿಸುವಂತೆ ಒತ್ತಡ ಹೇರಿದ ಹಾಗು ತಹಸೀಲ್ದಾರ್ ಎಂಟು ಸಲ ಆದೇಶ ಮಾಡಿದರೂ ಅವರಿಗೂ ಅಗೌರವ ತೋರಿದಲ್ಲದೇ ಉಚ್ಚ ನ್ಯಾಯಾಲಯ ಮತ್ತು ವಿಶೇಷ ಭೂ ಕಬಳಿಕೆ ನ್ಯಾಯಾಲಯದಲ್ಲಿ ಕೇಸ್ ಇದ್ದರೂ ನ್ಯಾಯಾಂಗ ಉಲ್ಲಂಘನೆ ಮಾಡಿಸಿ ನ್ಯಾಯವಾದಿಯೊಬ್ಬರು ವಕೀಲ ವೃತ್ತಿಗೆ ಕಳಂಕ ತಂದಿದ್ದಾರೆ ಎಂದು ಆರೋಪಿಸಿದ್ದಾರೆ. ಕರ್ತವ್ಯ ಲೋಪ ಮಾಡಿದ ನ್ಯಾಯವಾದಿಯನ್ನು ಬಾರ್ ಕೌನ್ಸಿಲ್‌ನಿಂದ ಅಮಾನತು ಮಾಡಬೇಕು ಹಾಗು ಬಿಲ್ಲವ, ದಲಿತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದ್ದಾರೆ.

ಪೋಲಿಸ್ ಅಧಿಕಾರಿ PSI ವಿನಯ್ ಕೊರ್ಲಹಳ್ಳಿ ತಮ್ಮ ಮೇಲೆ ಕುಂದಾಪುರದಲ್ಲಿ ಎರಡು ಮತ್ತು ಕೊಲ್ಲೂರಿನಲ್ಲಿ ಒಂದು ಸುಳ್ಳು ಕಂಪ್ಲೇಂಟ್ ದಾಖಲಿಸಿ, ಉಚ್ಚ ನ್ಯಾಯಾಲಯ ಮತ್ತು ವಿಶೇಷ ಭೂ ಕಬಳಿಕೆ ನ್ಯಾಯಾಲಯದಲ್ಲಿ ಕೇಸ್ ಇರುವಾಗ ಕೇಸು ದಾಖಲಿಸಿದವರ ಪರವಾಗಿ ಸತ್ಯ ಅಸತ್ಯೆಯನ್ನು ಅವಲೋಕಿಸದೆ, ದಲಿತ ಮಹಿಳೆಯರ ಮೇಲೆ ಸುಳ್ಳು ದೂರು ದಾಖಲಿಸಿ, ಅವರು ನೀಡಿದ ದೂರನ್ನು ದಾಖಲಿಸದೇ ಹಿಂದೆ ಕಳುಹಿಸಿದ್ದಾರೆ. ಇವರ ವಿರುದ್ಧ ಇಲಾಖಾ ತನಿಖೆ ಮಾಡಿ ಕ್ರಮ ಕೈಗೊಳ್ಳಬೇಕು ಗ್ರಾಮ ಆಡಳಿತ ಅಧಿಕಾರಿ ಹರೀಶ್ ಮೊಗವೀರ ಸರಕಾರಿ ಜಾಗವನ್ನು ಒತ್ತುವರಿ ಮಾಡಿದ ಕೆಲವರ ಕೈಗೊಂಬೆ ಆಗಿ ಬಹುಪರಾಕ್ ಹೇಳುತ್ತಿದ್ದಾರೆ ಎಂಟು ಬಾರಿ ತಹಸೀಲ್ದಾ‌ರ್ ಆದೇಶ ಉಲ್ಲಂಘನೆ ಮಾಡಿದ್ದಾರೆ. ಪತ್ರಕರ್ತರು ಮಾಹಿತಿ ಕೇಳಿದಾಗ ಸರಿಯಾದ ವರದಿ ನೀಡದೆ ಏನು ಮಾಡಲಿಕ್ಕೆ ಆಗುತ್ತೆ ಎಂದು ಅಗೌರವ ತೋರಿದ್ದಾರೆ. ಉಚ್ಚ ನ್ಯಾಯಾಲಯ ಮತ್ತು ವಿಶೇಷ ಭೂ ಕಬಳಿಕೆ ನ್ಯಾಯಾಲಯದಲ್ಲಿ ಕೇಸ್ ಇದ್ದರು ನ್ಯಾಯಾಂಗ ಉಲ್ಲಂಘನೆ ಬಗ್ಗೆ ಅರಿವು ಮೂಡಿಸದೆ, ಕರ್ತವ್ಯದಲ್ಲಿ ಲೋಪ, ನಿರ್ಲಕ್ಷತನ, ಹಾಗು ಕರ್ತವ್ಯ ದುರ್ಬಳಕೆ ಮಾಡಿದ ಅವರನ್ನು ಕೂಡಲೇ ಅಮಾನತು ಮಾಡಬೇಕು ಎಂದು ಅಗ್ರಹಿಸಿದ್ದಾರೆ.

ಧರಣಿ ಸ್ಥಳಕ್ಕೆ ಕುಂದಾಪುರ ತಹಸೀಲ್ದಾರ್ ಪ್ರದೀಪ್ ಕುರ್ಡೇಕರ್, DYSP ಕುಲಕರ್ಣಿ, ಸಬ್ ಇನ್ಸ್ಪೆಕ್ಟರ್ ನಂಜಪ್ಪರವರು ಭೇಟಿ ನೀಡಿ ನೀವು ಹೇಳಿದ ಎಲ್ಲಾ ಪ್ರಕರಣಗಳು ನಮ್ಮ ಗಮನದಲ್ಲಿದೆ ಈಗಾಗಲೇ ತಪ್ಪಿದಸ್ತರಿಗೆ ನೋಟಿಸ್ ನೀಡಿದ್ದೇವೆ. DYSP ಯವರು ಪತ್ರಿಭಟನ ಸ್ಥಳದಲ್ಲಿ ದಲಿತ ಮಹಿಳೆಯರ ದೂರು ಅರ್ಜಿಯನ್ನು ಪಡೆದು ತಪ್ಪಿದಸ್ತರ ಎಲ್ಲರ ವಿರುದ್ಧ ಕುಲಂಕುಶವಾಗಿ ಪರಿಶೀಲಿಸಿ ಸೂಕ್ತ ಕಾನೂನು ಕ್ರಮವನ್ನು ಕೈಗೊಳ್ಳಲಾಗುತ್ತದೆ ಎಂದು ಭರವಸೆ ನೀಡಿ ಧರಣಿಯನ್ನು ಮುಗಿಸಲು ಹೇಳಿದ್ದರು. ಅವರ ಮಾತಿಗೆ ಮನ್ನಣೆ ನೀಡಿ ಉಚ್ಚ ನ್ಯಾಯಾಲಯಕ್ಕೆ ಅಗೌರವ ತೋರಿದ ಎಲ್ಲರನ್ನು ಬಂಧಿಸಬೇಕೆಂದು ಪತ್ರಕರ್ತ ಕಿರಣ್ ಪೂಜಾರಿ ಆಗ್ರಹಿಸಿ ಒಂದು ವೇಳೆ ನ್ಯಾಯ ಸಿಗದೇ ಇದ್ದಲ್ಲಿ ಮುಂದಿನ ದಿನದಲ್ಲಿ ಜಿಲ್ಲಾಧಿಕಾರಿಯ ಕಚೇರಿಯ ಮುಂದೆ ದೊಡ್ಡ ಮಟ್ಟದಲ್ಲಿ ಧರಣಿ ನಡೆಸುತ್ತೇವೆ ಎಂದು ಮಾಧ್ಯಮಕ್ಕೆ ತಿಳಿಸಿರುತ್ತಾರೆ.

Related

Previous Post

ಭಟ್ಕಳದಿಂದ ಶಿರಸಿ ಮಾರ್ಗವಾಗಿ ಸಂಚರಿಸುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಸ್ಕಾರ್ಪಿಯೋ ನಡುವೆ ಹೊನ್ನಾವರ ಉಪೋಣಿ ಬಳಿ ಭೀಕರ ಅಪಘಾತ- ಇಬ್ಬರು ಸ್ಥಳದಲ್ಲೇ ಸಾವು

Next Post

ಭಟ್ಕಳ ದಲ್ಲಿ 14 ಜನ ಪಾಕಿಸ್ತಾನಿ ಪ್ರಜೆಗಳು ವಾಸ

Kannada News Desk

Kannada News Desk

Next Post
ಭಟ್ಕಳ ದಲ್ಲಿ 14 ಜನ ಪಾಕಿಸ್ತಾನಿ ಪ್ರಜೆಗಳು ವಾಸ

ಭಟ್ಕಳ ದಲ್ಲಿ 14 ಜನ ಪಾಕಿಸ್ತಾನಿ ಪ್ರಜೆಗಳು ವಾಸ

Please login to join discussion

ಕ್ಯಾಲೆಂಡರ್

May 2025
M T W T F S S
 1234
567891011
12131415161718
19202122232425
262728293031  
« Apr    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.