• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Sunday, June 1, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ಕುಮಟಾದ ಪತ್ರಕರ್ತ ಚರಣರಾಜ್ ನಾಯ್ಕರ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದು ಪಡಿಸುವಂತೆ ಆಗ್ರಹಿಸಿ ಸಿದ್ದಾಪುರ ತಾಲೂಕಾ ಮಾಧ್ಯಮ ಪ್ರತಿನಿಧಿಗಳ ಸಂಘದಿಂದ ಎಸ್.ಪಿ ಗೆ ಮನವಿ

Kannada News Desk by Kannada News Desk
December 18, 2024
in Uncategorized
0
ಕುಮಟಾದ ಪತ್ರಕರ್ತ ಚರಣರಾಜ್ ನಾಯ್ಕರ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದು ಪಡಿಸುವಂತೆ ಆಗ್ರಹಿಸಿ ಸಿದ್ದಾಪುರ ತಾಲೂಕಾ ಮಾಧ್ಯಮ ಪ್ರತಿನಿಧಿಗಳ ಸಂಘದಿಂದ ಎಸ್.ಪಿ ಗೆ ಮನವಿ
0
SHARES
536
VIEWS
WhatsappTelegram Share on FacebookShare on TwitterLinkedin
http://kannadatodaynews.net/wp-content/uploads/2024/12/VID-20241218-WA1447.mp4

ಸಿದ್ದಾಪುರ: ಕುಮಟಾದ ಪತ್ರಕರ್ತ ಚರಣರಾಜ್ ನಾಯ್ಕರ ವಿರುದ್ಧ ದಾಖಲಾದ ಪ್ರಕರಣವನ್ನು ರದ್ದು ಪಡಿಸುವಂತೆ ಆಗ್ರಹಿಸಿ ಸಿದ್ದಾಪುರ ತಾಲೂಕಾ ಮಾಧ್ಯಮ ಪ್ರತಿನಿಧಿಗಳ ಸಂಘದ ಸದಸ್ಯರು ಹಾಗೂ ಪ್ರಮುಖರು ಬುಧವಾರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು.

ತಾಲೂಕಿನಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿರುವ ನಾವುಗಳು ಸಂವಿಧಾನಬದ್ಧವಾಗಿ ಹಾಗೂ ಪತ್ರಿಕಾ ಧರ್ಮದಂತೆ ಕಳೆದ ಹಲವು ವರ್ಷಗಳಿಂದ ಕರ್ತವ್ಯವನ್ನು ನಿರ್ವಹಿಸುತ್ತಾ ಬಂದಿದ್ದೇವೆ. ಜಾತಿ, ಧರ್ಮ ಬೇಧವಿಲ್ಲದೇ ಪಕ್ಷಾತೀತವಾಗಿ ಮತ್ತು ವಸ್ತುನಿಷ್ಠ ವರದಿಗಳನ್ನು ಮಾಡುವ ಮೂಲಕ ಸಮಾಜದಲ್ಲಿ ಪ್ರೀತಿ, ವಿಶ್ವಾಸದ ಜೊತೆಗೆ ಗೌರವವನ್ನು ಸಂಪಾದಿಸಿದ್ದೇವೆ. ಸಾರ್ವಜನಿಕರ ಬದುಕಿನಲ್ಲಿರುವ ಕೆಲ ರಾಜಕಾರಣಿಗಳು ಮತ್ತು ಜನಪ್ರತಿನಿಧಿಗಳ ಮೇಲೆ ಆರೋಪಗಳು ಸಾರ್ವಜನಿಕವಾಗಿ ವ್ಯಕ್ತವಾದಾಗ ಅದನ್ನು ಅವರು ತಮ್ಮ ವಿರುದ್ಧದ ಅಪಪ್ರಚಾರ ಎಂದು ಭಾವಿಸುವುದು ಸಾಮಾನ್ಯವಾಗಿದೆ. ಆದರೆ ಪತ್ರಕರ್ತರು ಯಾವುತ್ತೂ ನಿಷ್ಠೆ ಮತ್ತು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವುದರಿಂದ ತಮ್ಮ ವೃತ್ತಿನಿಷ್ಠೆಯನ್ನು ಮತ್ತು ನಿಲುವನ್ನು ಸಾರ್ವಜನಿಕರ ಪರವಾಗಿ ವ್ಯಕ್ತಪಡಿಸುವುದು ಪತ್ರಿಕಾ ಧರ್ಮವಾಗಿದೆ. ಆದರೆ ಇದನ್ನು ಸಹಿಸದ ಕೆಲ ಜನಪ್ರತಿನಿಧಿಗಳು ತಮ್ಮ ಬೆಂಬಲಿಗರ ಮೂಲಕ ಪತ್ರಕರ್ತರ ವಿರುದ್ಧ ಸುಳ್ಳು ದೂರು ದಾಖಲಿಸುವುದು ಪತ್ರಿಕಾ ಸ್ವಾತಂತ್ರ್ಯದ ಕಗ್ಗೊಲೆಯಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಸಂಘದ ಅಧ್ಯಕ್ಷ ಕನ್ನೇಶ ಕೋಲಶಿರ್ಸಿ ಮಾತನಾಡಿ, ಕುಮಟಾ ಶಾಸಕ ದಿನಕರ ಶೆಟ್ಟಿಯವರ ಅಭಿಮಾನಿಯಾದ ಜಯಾ ಶೇಟ್ ಮತ್ತು ಕುಮಟಾದ ಬಿಜೆಪಿಯ ಕೆಲ ಕಾರ್ಯಕರ್ತರು ಸೇರಿ ಕುಮಟಾ ತಾಲೂಕಿನ ಪತ್ರಕರ್ತರಾದ ಚರಣರಾಜ್ ನಾಯ್ಕರ ಮೇಲೆ ಸುಳ್ಳು ದೂರು ದಾಖಲಿಸಿರುವುದು ನಿಜಕ್ಕೂ ಖಂಡನೀಯ. ಪತ್ರಕರ್ತರ ಸಂವಿಧಾನಿಕ ಪತ್ರಿಕಾ ಸ್ವಾತಂತ್ರ್ಯವನ್ನು ಹರಣ ಮಾಡುವ ಮತ್ತು ಪತ್ರಕರ್ತರ ನೈತಿಕ ಸ್ಥೈರ್ಯವನ್ನು ಕುಗ್ಗಿಸುವ ಕಾರ್ಯವಾಗಿದೆ. ಹಾಗಾಗಿ ಚರಣರಾಜ್ ನಾಯ್ಕರ ವಿರುದ್ಧ ದಾಖಲಾದ ದೂರನ್ನು ರದ್ದುಗೊಳಿಸುವ ಮೂಲಕ ಪತ್ರಕರ್ತರು ನಿರ್ಭಯರಾಗಿ ಕರ್ತವ್ಯ ನಿರ್ವಹಿಸಲು ಅನುವು ಮಾಡಿಕೊಡಬೇಕು. ಅಲ್ಲದೇ ಪತ್ರಕರ್ತರ ವಿರುದ್ಧ ಸುಳ್ಳು ದೂರುಗಳು ಬಂದಾಗ ಪೊಲೀಸ್ ಅಧಿಕಾರಿಗಳು ಅದನ್ನು ಪರಿಶೀಲಿಸಿ ಸತ್ಯಾಸತ್ಯತೆಯನ್ನು ಅರಿತುಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಬೇಕೆ ಹೊರತು ರಾಜಕಾರಣಿಗಳ ಒತ್ತಡಕ್ಕೆ ಮಣಿದು ನೇರವಾಗಿ ಪ್ರಕರಣ ದಾಖಲಿಸಿ ತೊಂದರೆ ನೀಡುವ ಕಾರ್ಯ ಪೊಲೀಸ್ ಇಲಾಖೆ ಮಾಡಬಾರದೆಂದು ಆಗ್ರಹಿಸಿದರು.

ರೈತ ಮುಖಂಡ ವೀರಭದ್ರ ನಾಯ್ಕ ಮಾತನಾಡಿ ಪತ್ರಕರ್ತ ರ ಮೇಲೆ ದಾಖಲಾಗಿರುವ ಪ್ರಕರಣ ಹಿಂದಕ್ಕೆ ಪಡೆಯುವಂತೆ ಅಗ್ರಹಿಸುತ್ತೇವೆ.ಪತ್ರಕರ್ತರ ಪ್ರಾಮಾಣಿಕ ಕಾರ್ಯವನ್ನು ನಿರ್ವಹಿಸಲು ನಮ್ಮ ನೈತಿಕವಾದ ಬೆಂಬಲ ನೀಡುತ್ತಿದ್ದೇವೆ ಎಂದರು.ಸಾಮಾಜಿಕ ಧುರೀಣ ನಾಸಿರ್ ಖಾನ್ ಮನವಿ ನೀಡುವ ವೇಳೆ ಹಾಜರಿದ್ದು ಬೆಂಬಲ ಸೂಚಿಸಿದರು.ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ನಾಗರಾಜ ನಾಯ್ಕ ಮೋಳ್ಕೋಡ, ಕಾರ್ಯದರ್ಶಿ ಯಶವಂತ ನಾಯ್ಕ ತ್ಯಾರ್ಸಿ, ಖಜಾಂಚಿ ಪ್ರಶಾಂತ ಶೇಟ್, ಸದಸ್ಯ ದಿವಾಕರ ಸಂಪಖಂಡ ಉಪಸ್ಥಿತರಿದ್ದರು.

Related

Previous Post

ಭೂಕಬಳಿಕೆ ನಿಷೇಧ ಕಾಯಿದೆ: ನಗರ ಅರಣ್ಯವಾಸಿಗಳಿಗೆ ಜೈಲೇ ಗತಿ…….! ಕಾಯಿದೆ ಸಡಲಿಕರಣ ಅವಶ್ಯ-ರವೀಂದ್ರ ನಾಯ್ಕ

Next Post

ಕೊಪ್ಪಳ ಜಿಲ್ಲೆಯ ಯಲಬುರ್ಗದಿಂದ ಶೈಕ್ಷಣಿಕ ಪ್ರವಾಸಕ್ಕಾಗಿ ಆಗಮಿಸಿದ್ದ ವಿದ್ಯಾರ್ಥಿ ಭಟ್ಕಳದಲ್ಲಿ ಬಾವಿಗೆ ಬಿದ್ದು ಸಾವು

Kannada News Desk

Kannada News Desk

Next Post
ಕೊಪ್ಪಳ ಜಿಲ್ಲೆಯ ಯಲಬುರ್ಗದಿಂದ ಶೈಕ್ಷಣಿಕ ಪ್ರವಾಸಕ್ಕಾಗಿ ಆಗಮಿಸಿದ್ದ ವಿದ್ಯಾರ್ಥಿ ಭಟ್ಕಳದಲ್ಲಿ ಬಾವಿಗೆ ಬಿದ್ದು ಸಾವು

ಕೊಪ್ಪಳ ಜಿಲ್ಲೆಯ ಯಲಬುರ್ಗದಿಂದ ಶೈಕ್ಷಣಿಕ ಪ್ರವಾಸಕ್ಕಾಗಿ ಆಗಮಿಸಿದ್ದ ವಿದ್ಯಾರ್ಥಿ ಭಟ್ಕಳದಲ್ಲಿ ಬಾವಿಗೆ ಬಿದ್ದು ಸಾವು

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.