ಅಬ್ದುಲ್ ರುಕ್ನುದ್ದೀನ್ ಗೆ ನ್ಯೂ ಶಮ್ಸ್ ಶಾಲೆಯ ಪ್ರತಿಷ್ಠಿತ “ನಜ್ಮೆ ಇಖ್ವಾನ್À” ಚಿನ್ನದ ಪದಕ
ಭಟ್ಕಳ: ನ್ಯೂ ಶಮ್ಸ್ ಶಾಲೆಯ ಹತ್ತನೆ ತರಗತಿಯಲ್ಲಿ ಓದುತ್ತಿರುವ ಉತ್ತಮ ವಿದ್ಯಾರ್ಥಿಗೆ ನೀಡಲ್ಪಡುವ ಪ್ರತಿಷ್ಠಿತ “ನಜ್ಮೆ ಇಖ್ವಾನ್À” ಚಿನ್ನದ ಪದಕವನ್ನು ಈ ಬಾರಿ ಅಬ್ದುಲ್ ರುಕ್ನುದ್ದೀನ್ ಮುಡಿಗೇರಿದೆ.
ಭಾನುವಾರ ನಡೆದ ತರಬಿಯತ್ ಎಜ್ಯುಕೇಶನ್ ಸೂಸೈಟಿಯ ನ್ಯೂಶಮ್ಸ್ ಸ್ಕೂಲ್ ಶಾಲಾ ವಾರ್ಷಿಕೋತ್ಸವ ಸಮಾರಂಭದಲ್ಲಿ ಅನಿವಾಸಿ ಉದ್ಯಮಿ ರಾಬಿತಾ ಸೂಸೈಟಿಯ ಪ್ರಧಾನ ಕಾರ್ಯದರ್ಶಿ ಅತಿಕರ್ರಹ್ಮಾನ್ ಮುರೀರಿ ಪ್ರದಾನಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುನೀರಿ, ಮುಸ್ಲಿಮರು ಜಗತ್ತಿಗೆ ಮಾದರಿಯಾಗಬೇಕಾದವರು. ನಿಮ್ಮ ಕಠಿಣ ಪರಿಶ್ರಮ ಮತ್ತು ನಿರಂತರ ಪ್ರಯತ್ನದಿಂದಾಗಿ ಜೀವನದಲ್ಲಿ ಉತ್ತಮ ಯಶಸ್ಸುಗಳಿಸಬೇಕು. ಪ್ರವಾದಿ ಮುಹಮ್ಮದ್(ಸ)ರ ಅನುಯಾಯಿಗಳಾಗಿರುವ ನಾವು ಪ್ರವಾದಿಯ ಹಾದಿಯಲ್ಲಿ ಮುನ್ನೆಡೆಯುವಂತಾದಾಗ ಮಾತ್ರ ಬದುಕಿನಲ್ಲಿ ಖಂಡಿತ ಯಶಸ್ಸು ಲಭಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು.
ಶಾಲಾಡಳಿತ ಸಮಿತಿಯ ಅಧ್ಯಕ್ಷ ಇಂಜಿನೀಯರ್ ನಝೀರ್ ಆಹ್ಮದ್ ಮಾತನಾಡಿದರು. ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಅಧ್ಯಕ್ಷ ಮುಹಮ್ಮದ್ ಇಸ್ಮಾಯಿಲ್ ಮೊಹತೆಶಮ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
ಪ್ರಾಂಶುಪಾಲ ಲಿಯಾಕತ್ ಅಲಿ ವಾರ್ಷಿಕ ವರದಿ ಮಂಡಿಸಿದರು. ಶಿಕ್ಷಕ ಮಂಜುನಾತ್ ಹೆಬ್ಬಾರ್ ಸ್ವಾಗತಿಸಿದರು. ಕಾರ್ಯದರ್ಶಿ ಅನಂ ಆಲಾ ಎಂ.ಟಿ. ಧನ್ಯವಾದ ಅರ್ಪಿಸಿದರು.
ಅಲ್ ಕೌಸರ್ ಗರ್ಲ್ಸ್ ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಎಸ್.ಎಂ.ಸೈಯ್ಯದ್ ಶಕೀಲ್, ಜಮಾಅತೆ ಇಸ್ಲಾಮಿ ಹಿಂದ್ ಭಟ್ಕಳ ಶಾಖೆಯ ಅಧ್ಯಕ್ಷ ಮೌಲಾನ ಎಸ್.ಎಂ ಸೈಯ್ಯದ್ ಝುಬೇರ್, ಇಸ್ಲಾಮಿಕ್ ವೆಲ್ಫೇರ್ ಸೂಸೈಟಿಯ ಚರ್ಮನ್ ಕಾದಿರ್ ಮೀರಾ ಪಟೇಲ್, ತರಬಿಯತ್ ಎಜ್ಯುಕೇಶನ್ ಸೂಸೈಟಿ ಮಾಜಿ ಅಧ್ಯಕ್ಷ ಇಕ್ಬಾಲ್ ಇಕ್ಕೇರಿ, ಆಡಳಿತ ಮಂಡಳಿಯ ಸಲಾಹುದ್ದೀನ್ ಎಸ್.ಕೆ, ಮೌಲಾನ ಅಝೀಝರ್ರಹ್ಮಾನ್ ರುಕ್ನುದ್ದೀನ್, ಡಾ. ಒವೇಸ್ ಕ್ವಾಜಾ ರುಕ್ನುದ್ದೀನ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಾರ್ಷಿಕ ಸ್ಮರಣ ಸಂಚಿಕೆ ‘ಸ್ಪೆಕ್ಟರ್ಮ್’ (sಠಿeಛಿಣಡಿum) ಅನ್ನು ಬಿಡುಗಡೆಗೊಳಿಸಲಾಯಿತು. ಅಲ್ಲದೆ ವಿವಿಧ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. (ಫೋಟೊ: ೮-ಬಿಕೆಎಲ್-೦೧
೨೫ ವರ್ಷಗಳ ನಿಸ್ವಾರ್ಥ ಸೇವೆಗೆ ಪವಿತ್ರ ‘ಉಮ್ರಾ’ ಕೊಡುಗೆ ನೀಡಿದ ಹಳೆಯ ವಿದ್ಯಾರ್ಥಿಗಳು
ಭಟ್ಕಳ: ಕಳೆದ ೨೫ ವರ್ಷಗಳಿಂದ ಶಮ್ಸ್ ಶಾಲೆಯಲ್ಲಿ ಶಿಕ್ಷಕರಾಗಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತಕರು, ಸಾಮಾಜಿಕ ಕಾರ್ಯಕರ್ತರು ಆಗಿರುವ ಎಂ.ಆರ್.ಮಾನ್ವಿಯವರನ್ನು ಭಾನುವಾರ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಅನಿವಾಸಿ ಉದ್ಯಮಿ ಅತಿಕರ್ರಹ್ಮಾನ್ ಮುನೀರಿ ಅಭಿನಂದನಾ ಪತ್ರ ಹಾಗೂ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಮೊದಲ ಬ್ಯಾಚ್ ಹಳೆಯ ವಿದ್ಯಾರ್ಥಿಗಳು ಅವರ ನಿಸ್ವಾರ್ಥ ಸೇವೆಗೆ ‘ಪವಿತ್ರ ಉಮ್ರಾ’ ಪ್ಯಾಕೇಜ್ ಕೊಡುಗೆಯಾಗಿ ನೀಡಿದ್ದಾರೆ.
ತರಬಿಯತ್ ಎಜ್ಯುಕೇಶನ್ ಸೂಸೈಟಿಯ ಶಮ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ೧೯೯೭ರಲ್ಲಿ ಶಿಕ್ಷಕರಾಗಿ ಸೇವೆಗೆ ಸೇರಿದ ಎಂ.ಆರ್.ಮಾನ್ವಿ ನಂತರ ಮುಖ್ಯಾಧ್ಯಾಪಕರಾಗಿ ೨೫ ವರ್ಷಗಳ ನಿಸ್ವಾರ್ಥ ಸೇವೆ ಸಲ್ಲಿಸಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ವಿದ್ಯಾರ್ಥಿಗಳೇ ಶಿಕ್ಷಕರಿಗೆ ಆಸ್ತಿಯಾಗಿದ್ದು ಪ್ರತಿಯೊಂದು ಹಂತದಲ್ಲೂ ಶಿಕ್ಷಕ ವಿದ್ಯಾರ್ಥಿಗಳಿಗೆ ಮಾದರಿಯಾಗಿ ಬದುಕಬೇಕು. ಪವಿತ್ರ ಉಮ್ರಾದ ಕೊಡುಗೆ ನೀಡಿರುವ ತಮ್ಮ ಹಳೆಯ ವಿದ್ಯಾರ್ಥಿಗಳಿಗೆ ಈ ಸಂದರ್ಭದಲ್ಲಿ ಅವರು ಕೃತಜ್ಞತೆಯನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಸಂಸ್ಥೆಯ ಅಧ್ಯಕ್ಷ ಇಸ್ಮಾಯಿಲ್ ಮೊಹತೆಶಮ್, ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಇಂಜಿನೀಯರ್ ನಝೀರ್ ಆಹ್ಮದ್, ಮೌಲಾನ ಸೈಯ್ಯದ್ ಝಬೇರ್, ಮೌಲಾನ ಅಝೀಝರ್ರಹ್ಮಾನ್ ರುಕ್ನುದ್ದೀನ್ ನದ್ವಿ, ಪ್ರಾಂಶುಪಾಲ ಲಿಯಾಖತ್ ಅಲಿ ಮುಂತಾದವರು ಉಪಸ್ಥಿತರಿದ್ದರು. (ಫೋಟೊ_೮ಬಿಕೆಎಲ್-೦೨)