• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Saturday, June 14, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ನಮ್ಮೊಳಗಿನ ಅಸುರೀ ಗುಣ ಸಂಹಾರವಾಗಬೇಕೆಂಬುದೇ ನವರಾತ್ರಿಯ ಆಚರಣೆಯ ಅಂತರಾರ್ಥ : ಶ್ರೀಧರ ಶೇಟ್.

Kannada News Desk by Kannada News Desk
October 27, 2023
in ಉತ್ತರ ಕನ್ನಡ
0
ನಮ್ಮೊಳಗಿನ ಅಸುರೀ ಗುಣ ಸಂಹಾರವಾಗಬೇಕೆಂಬುದೇ ನವರಾತ್ರಿಯ ಆಚರಣೆಯ ಅಂತರಾರ್ಥ : ಶ್ರೀಧರ ಶೇಟ್.
0
SHARES
42
VIEWS
WhatsappTelegram Share on FacebookShare on TwitterLinkedin

ನಮ್ಮೊಳಗಿನ ಅಸುರೀ ಗುಣ ಸಂಹಾರವಾಗಬೇಕೆಂಬುದೇ ನವರಾತ್ರಿಯ ಆಚರಣೆಯ ಅಂತರಾರ್ಥ : ಶ್ರೀಧರ ಶೇಟ್.

ಶಿರಾಲಿ:ನಮ್ಮೊಳಗಿನ ಅಸುರೀ ಗುಣ ಸಂಹಾರವಾಗಬೇಕೆಂಬುದೇ ನವರಾತ್ರಿಯ ಆಚರಣೆಯ ಅಂತರಾರ್ಥ ಎಂದು ಸಾಹಿತಿ ಶ್ರೀಧರ ಶೇಟ್ ಶಿರಾಲಿ ನುಡಿದರು. ಅವರು
ಕನ್ನಡ ಸಾಹಿತ್ಯ ಪರಿಷತ್ತು, ಭಟ್ಕಳ ತಾಲೂಕು ಘಟಕದಿಂದ ಇಲ್ಲಿನ ಸಾಲೆಮನೆಯ ಮಠದ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ನಡೆದ ದಸರಾ ಕಾವ್ಯೋತ್ಸವವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಕನ್ನಡ ನಾಡಿನಲ್ಲಿ ಆಚರಿಸುವ ನಾಡಹಬ್ಬ ಮೈಸೂರು ದಸರಾ ಧಾರ್ಮಿಕ‌, ಐತಿಹಾಸಿಕ, ಸಾಹಿತ್ಯಿಕ, ಸಾಂಸ್ಕೃತಿಕ ಹಿನ್ನೆಲೆಯಿಂದ ವಿಶ್ವ ಪ್ರಸಿದ್ಧಿಯನ್ನು ಪಡೆದಿದೆ. ಅಂತೆಯೇ ಸಾಲೆಮನೆಯಲ್ಲಿ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ದಸರಾ ಉತ್ಸವವನ್ನು
ಕವಿಗೋಷ್ಠಿ, ಮತ್ತು ಮಕ್ಕಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಿಸುವ ಮೂಲಕ ಆಚರಿಸುತ್ತಿರುವುದೂ ಕೂಡ ವಿಶೇಷವೇ ಆಗಿದೆ. ನವರಾತ್ರಿಯು ದುಷ್ಟ ರಾಕ್ಷಸರನ್ನು ಸಂಹಾರಮಾಡಿದ ದೇವಿಯನ್ನು ಆರಾಧಿಸುವ ಪರ್ವಕಾಲ. ಈ ಸಂದರ್ಭವು ನಮ್ಮೊಳಗಿನ ಅಸುರೀ ಗುಣಗಳನ್ನು ನೀಗಿಕೊಂಡು ಸಾತ್ವಿಕ ಗುಣಗಳನ್ನು ಸಂವರ್ಧನೆ ಮಾಡಿಕೊಳ್ಳಬೇಕೆಂಬುದೇ ನವರಾತ್ರಿಯ ಅಂತರಾರ್ಥ ಎಂದು ನುಡಿದು ತಮ್ಮ ಸ್ವರಚಿತ ಕವಿತೆ ವಾಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ಕಳೆದ ಅನೇಕ ವರ್ಷಗಳಿಂದ ಮಠದ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ದಸರಾ ಕಾವ್ಯೋತ್ಸವವನ್ನು ಆಚರಿಸಿಕೊಂಡು ಬರಲಾಗುತ್ತದೆ. ಈ ಕವಿಗೋಷ್ಠಿಯಲ್ಲಿ ಎಲ್ಲ ಕವಿಗಳು ವಾಚಿಸಿದ ಕವಿತೆಗಳು ವೈಚಾರಿಕತೆಯನ್ನು, ಸಂಸ್ಕಾರವನ್ನು ಮೂಡಿಸಲು ಪ್ರಚೋದಿಸುವಂಥ ವಿಷಯ ವಸ್ತುವನ್ನು ಒಳಗೊಂಡಿರುವುದು ವಿಶೇಷ. ದೇವಾಲಯಗಳು ನಮ್ಮಲ್ಲಿ ಧಾರ್ಮಿಕತೆಯ ಜೊತೆಗೆ ವೈಚಾರಿಕತೆಯನ್ನು ಬೆಳೆಸುವ ತಾಣವಾಗಬೇಕು. ಈ ದಿಸೆಯಲ್ಲಿ ಮಠದ ಸಿದ್ಧಿವಿನಾಯಕ ದೇವಸ್ಥಾನದ ಆಡಳಿತ ಮಂಡಳಿ ಕಾರ್ಯನಿರ್ವಹಿಸುತ್ತಿರುವುದು ನಿಜಕ್ಕೂ ಅಭಿನಂದನಾರ್ಹ ಎಂದರು. ಕವಿಗೋಷ್ಠಿಯಲ್ಲಿ ಶಂಕರ ನಾಯ್ಕ ಶಿರಾಲಿ, ಎಂ.ಡಿ.ಪಕ್ಕಿ ಶಿರಾಲಿ, ಶಿಕ್ಷಕ ರಾಘವೇಂದ್ರ ಮಡಿವಾಳ, ನಂದನ ನಾಯ್ಕ ಚಿತ್ರಾಪುರ, ಹೇಮಲತಾ ರಾವ್, ಉದಯ ನಾಯ್ಕ, ಆನಂದ ನಾಯ್ಕ, ಕೃಷ್ಣ ಮೊಗೇರ್ ಅಳ್ವೆಕೋಡಿ, ಶಿಕ್ಷಕ ಶಂಕರ ನಾಯ್ಕ ಮುಂತಾದ ಕವಿಗಳು ವಾಚಿಸಿದ ಕವಿತೆಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಈ ಸಂದರ್ಭದಲ್ಲಿ ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಅವರನ್ನು ದೇವಾಲಯದ ವತಿಯಿಂದ ಸನ್ಮಾನಿಸಲಾಯಿತು. ಶಿಕ್ಷಕ ದೇವಿದಾಸ ನಾಯ್ಕ ಎಲ್ಲರನ್ನು ಸ್ವಾಗತಿಸಿ ಕಾರ್ಯಕ್ರಮ‌ ನಿರ್ವಹಿಸಿದರು. ಕಾರ್ಯಕ್ರಮದಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು, ದೇಗುಲದ ಭಕ್ತರು ಹಾಗೂ ಊರ ನಾಗರಿಕರು ಉಪಸ್ಥಿತರಿದ್ದರು.

Related

Previous Post

ಲಂಚ ಪಡೆಯುತ್ತಿರುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಸಿಯ ಉಪ ನೋಂದಣಾಧಿಕಾರಿ ರಾಧಮ್ಮ ಎಂ.ವಿ

Next Post

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇಂದ್ರ ಸರಕಾರ ಮರು ತನಿಖೆ ನಡೆಸಲಿ: ನಾವೇನು ಮಾಡಲು ಸಾಧ್ಯವಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

Kannada News Desk

Kannada News Desk

Next Post
ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇಂದ್ರ ಸರಕಾರ ಮರು ತನಿಖೆ ನಡೆಸಲಿ: ನಾವೇನು ಮಾಡಲು ಸಾಧ್ಯವಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಕೇಂದ್ರ ಸರಕಾರ ಮರು ತನಿಖೆ ನಡೆಸಲಿ: ನಾವೇನು ಮಾಡಲು ಸಾಧ್ಯವಿಲ್ಲ ಮುಖ್ಯಮಂತ್ರಿ ಸಿದ್ದರಾಮಯ್ಯ

Please login to join discussion

ಕ್ಯಾಲೆಂಡರ್

June 2025
M T W T F S S
 1
2345678
9101112131415
16171819202122
23242526272829
30  
« May    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.