• ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
Wednesday, July 2, 2025
  • Login
Kannada Today News
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ

    Trending Tags

    • Nintendo Switch
    • CES 2017
    • Playstation 4 Pro
    • Mark Zuckerberg
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು
No Result
View All Result
Kannada Today News
No Result
View All Result
  • ಮುಖ್ಯಾಂಶ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
  • ಇತರೆ ಸುದ್ದಿ ಗಳು

ನಾವು ತಾಯಿ ಹೊಟ್ಟೆಯಿಂದಲೇ ಹಿಂದುತ್ವ ಕಲಿತು ಬಂದಿದ್ದೇವೆ. ಬಿಜೆಪಿಗರೆ ನಿಮ್ಮ ಹಿಂದುತ್ವದ ಪಾಠ ನಮಗೆ ಬೇಕಿಲ್ಲ -ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ವಾಗ್ದಾಳಿ

Kannada News Desk by Kannada News Desk
April 15, 2024
in ಉತ್ತರ ಕನ್ನಡ
0
ನಾವು ತಾಯಿ ಹೊಟ್ಟೆಯಿಂದಲೇ ಹಿಂದುತ್ವ ಕಲಿತು ಬಂದಿದ್ದೇವೆ. ಬಿಜೆಪಿಗರೆ ನಿಮ್ಮ ಹಿಂದುತ್ವದ ಪಾಠ ನಮಗೆ ಬೇಕಿಲ್ಲ -ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ವಾಗ್ದಾಳಿ
0
SHARES
396
VIEWS
WhatsappTelegram Share on FacebookShare on TwitterLinkedin

ನಾವು ತಾಯಿ ಹೊಟ್ಟೆಯಿಂದಲೇ ಹಿಂದುತ್ವ ಕಲಿತು ಬಂದಿದ್ದೇವೆ. ಬಿಜೆಪಿಗರೆ ನಿಮ್ಮ ಹಿಂದುತ್ವದ ಪಾಠ ನಮಗೆ ಬೇಕಿಲ್ಲ -ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ವಾಗ್ದಾಳಿ

ಹೊನ್ನಾವರ: ಹಿಂದುತ್ವದ ರಕ್ಷಣೆ ಮಾಡುತ್ತೇವೆನ್ನುವ ಬಿಜೆಪಿಗರೇ, ನಾವು ತಾಯಿ ಹೊಟ್ಟೆಯಿಂದಲೇ ಹಿಂದುತ್ವ ಕಲಿತು ಬಂದಿದ್ದೇವೆ. ನಿಮ್ಮ ಹಿಂದುತ್ವದ ಪಾಠ ನಮಗೆ ಬೇಕಿಲ್ಲ ಎಂದು ಉತ್ತರಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಅಂಜಲಿ ನಿಂಬಾಳ್ಕರ್ ವಾಗ್ದಾಳಿ ನಡೆಸಿದರು.

ಬಳ್ಕೂರು ಜಿಲ್ಲಾ ಪಂಚಾಯತಿ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿಗರದ್ದು ಕೇವಲ ಕೋಮುವಾದಿ ಶಿಕ್ಷಣ, ಬೆಂಕಿ ಹಚ್ಚುವ ಕೆಲಸ. ಛತ್ರಪತಿ ಶಿವಾಜಿ, ಸಾವಿತ್ರಿಬಾಯಿ ಫುಲೆರಂಥವರು ಹಾಕಿಕೊಟ್ಟ ಹಾದಿಯಲ್ಲಿ ನಡೆಯುವವರು ಕಾಂಗ್ರೆಸ್ಸಿಗರು‌. ಬಿಜೆಪಿಗರು ಕಾಂಗ್ರೆಸ್‌ಗೆ ಬಂದರೂ ಸ್ವಾಗತ, ಬರದಿದ್ದರೂ ಸ್ವಾಗತವಿದೆ. ಕಾಂಗ್ರೆಸ್ ಕುಟುಂಬ ಜಿಲ್ಲೆಯಲ್ಲಿ ಗಟ್ಟಿಯಾಗಿ ನಿಂತಿದೆ. ಬಿಜೆಪಿಗರು ಮೇಲೆ ನೋಡಿ ಮತ ಹಾಕಿ ಎನ್ನುತ್ತಾರೆ. ೧೦ ವರ್ಷದಿಂದ ನೋಡುತ್ತಿದ್ದೇವೆ, ಮೇಲೆ ಏನೂ ಕಾಣಿಸುತ್ತಿಲ್ಲ ಎಂದು ವ್ಯಂಗ್ಯವಾಡಿದರು.

 

ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, ೧೦ ವರ್ಷದಲ್ಲಿ ಮಾಡದ ಕೆಲಸಗಳನ್ನ ಬಿಜೆಪಿಗರು ಈಗ ಮಾಡುತ್ತಾರಾ? ಏನೂ ಮಾಡಲು ಬಾರದ ಪಕ್ಷ ದೇಶದಲ್ಲಿದ್ದರೆ ಅದು ಬಿಜೆಪಿ ಮಾತ್ರ. ೩೦ ವರ್ಷಗಳಲ್ಲಿ ಜಿಲ್ಲೆಯ ಹೆಸರು ಸಂಸತ್‌ನಲ್ಲಿ ಒಂದೇ ಒಂದು ದಿನ ಬಂದಿಲ್ಲ. ಡಾ.ಅಂಜಲಿ ನಿಂಬಾಳ್ಕರ್ ಅವರು ಜಿಲ್ಲೆಯ ಜನರ ಧ್ವನಿಯಾಗಲಿದ್ದಾರೆ. ಅವರಿಗೆ ಮತ ನೀಡಿ ಆರಿಸಿದರೆ ಮುಂದಿನ ಬಾರಿ ಅತಿಕ್ರಮಣದಾರರಿಗೆ ಹಕ್ಕುಪತ್ರ ನೀಡಲು ಇಲ್ಲಿಗೆ ಬರುತ್ತಾರೆ ಎಂದರು‌.

 

 

ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರೂ ಆದ ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಮಾತನಾಡಿ, ಸಂವಿಧಾನದ ಅಡಿಯಲ್ಲಿ ಸರ್ಕಾರ ನಡೆಯುತ್ತಿದೆ. ಆದರೆ ಸಂವಿಧಾನವನ್ನ ಬಿಜೆಪಿಗರು ಬದಲಿಸುತ್ತೇವೆನ್ನುತ್ತಾರೆ. ಬಿಜೆಪಿ ಹೇಳೋದೊಂದು, ಮಾಡೋದೊಂದು. ಒಂದೇ ಒಂದು ಭರವಸೆಯನ್ನ ಅವರು ಈಡೇರಿಸಿಲ್ಲ. ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಗ್ಯಾರಂಟಿ ಯೋಜನೆಗಳನ್ನ ಎಲ್ಲರೂ ಸದುಪಯೋಗ ಪಡೆಯುತ್ತಿದ್ದಾರೆ. ದೇಶದ ಭವಿಷ್ಯಕ್ಕಾಗಿ ಕಾಂಗ್ರೆಸ್ ಗೆಲ್ಲಿಸಬೇಕಿದೆ; ನಮ್ಮ ಅಭ್ಯರ್ಥಿ ಡಾ.ಅಂಜಲಿ ಅವರನ್ನ ಆರಿಸಿ ಸಂಸತ್‌ಗೆ ಕಳುಹಿಸಬೇಕಿದೆ ಎಂದರು.

 

ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮಾತನಾಡಿ, ಬಿಜೆಪಿಯವರು ಇಂದು ಬಿಡುಗಡೆ ಮಾಡಿರುವುದು ಪ್ರಣಾಳಿಕೆಯಲ್ಲ, ಸುಳ್ಳಿನ ಪತ್ರ. ರೈತರ ಆದಾಯ ಡಬಲ್ ಮಾಡುತ್ತೇವೆಂದಿದ್ದ ಬಿಜೆಪಿಗರು ಅವರ ಸಾಲ ಹೆಚ್ಚಿಸಿದ್ದಾರೆ. ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಾಗಿದೆ, ರೈತರ ಆತ್ಮಹತ್ಯೆ ನಡೆಯುತ್ತಿದೆ, ಯುವಕರು ನಿರುದ್ಯೋಗಿಗಳಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದನ್ನ ಕೇಳಲು ಮೋದಿಯವರಿಗೆ ಸಮಯವೂ ಇಲ್ಲ. ಉತ್ತರಪ್ರದೇಶದಲ್ಲಿ ಪ್ರತಿ ಆರು ನಿಮಿಷಕ್ಕೊಂದು ಅತ್ಯಾಚಾರ ಆಗುತ್ತಿದೆ. ಭೇಟಿ ಬಚಾವೋ ಭೇಟಿ ಪಡಾವೋ ಎನ್ನುವ ಮೋದಿಯವರಿಗೆ ನಮ್ಮ ಹೆಣ್ಣುಮಕ್ಕಳ ರಕ್ಷಣೆ ಮಾಡಲಾಗುತ್ತಿಲ್ಲ. ಭವಿಷ್ಯ ಉಜ್ವಲಗೊಳಿಸುತ್ತೇವೆಂದು ಚಂದ್ರ ತೋರಿಸುವ ಕೆಲಸ ಬಿಜೆಪಿಯಿಂದಾಗುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಶಿರಸಿ ಶಾಸಕ ಭೀಮಣ್ಣ ನಾಯ್ಕ, ಡಾ.ಅಂಜಲಿ ಗೆಲುವು ನಮ್ಮೆಲ್ಲರ ಗೆಲುವು. ಹಲವಾರು ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ಜನಮನ್ನಣೆ ಪಡೆದಿರುವ ಕಾಂಗ್ರೆಸ್ ಸರ್ಕಾರವನ್ನ ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕಿದೆ ಎಂದರು‌.

ಸ್ಥಳೀಯ ಮಹಿಳೆಯರಿಂದ ಡಾ.ಅಂಜಲಿ ಅವರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ಇದೇವೇಳೆ‌ ಮರಾಠಿ ಸಮುದಾಯದಿಂದ ಮೈಸೂರು ಪೇಟ ತೊಡಿಸಿ ಸನ್ಮಾನಿಸಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವ್ಕರ್ ಪ್ರಾಸ್ತಾವಿಕ ಮಾತನಾಡಿದರು. ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ, ಜಿಲ್ಲಾ ಪಂಚಾಯತಿ ಮಾಜಿ ಸದಸ್ಯೆ ಪುಷ್ಪಾ ನಾಯ್ಕ, ವೆಂಕಟೇಶ ಹೆಗಡೆ ಹೊಸಬಾಳೆ, ಮಂಕಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗೋವಿಂದ ನಾಯ್ಕ ಮುಂತಾದವರಿದ್ದರು.

Related

Previous Post

ರಾಜ್ಯದಲ್ಲಿ ಈ ಅಪ್ಪ-ಮಕ್ಕಳ ಸಂಪೂರ್ಣ ಹಿಡಿತದಲ್ಲಿರುವ ಬಿಜೆಪಿ ಪಕ್ಷವನ್ನು ರಕ್ಷಿಸಲು ನಾನು ನಾಮಪತ್ರ ಸಲ್ಲಿಸಿದೆನೆ – ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ

Next Post

ಇಂದು ಉತ್ತರ ಕನ್ನಡ ಜಿಲ್ಲಾ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೀಮತಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಕೆ

Kannada News Desk

Kannada News Desk

Next Post
ಇಂದು ಉತ್ತರ ಕನ್ನಡ ಜಿಲ್ಲಾ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೀಮತಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಕೆ

ಇಂದು ಉತ್ತರ ಕನ್ನಡ ಜಿಲ್ಲಾ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಶ್ರೀಮತಿ ಡಾ.ಅಂಜಲಿ ನಿಂಬಾಳ್ಕರ್ ನಾಮಪತ್ರ ಸಲ್ಲಿಕೆ

Please login to join discussion

ಕ್ಯಾಲೆಂಡರ್

July 2025
M T W T F S S
 123456
78910111213
14151617181920
21222324252627
28293031  
« Jun    

Browse by Category

  • Uncategorized
  • ಉಡುಪಿ
  • ಉತ್ತರ ಕನ್ನಡ
  • ಉತ್ತರ ಕರ್ನಾಟಕ
  • ಕ್ರೀಡಾ ಸುದ್ದಿ
  • ಕ್ರೈಮ್ ನ್ಯೂಸ್
  • ಜಾಹೀರಾತು
  • ದಕ್ಷಿಣ ಕನ್ನಡ
  • ದೇಶಿ ಸುದ್ದಿ
  • ನಮ್ಮ ಕರಾವಳಿ
  • ಬಾಗಲಕೋಟೆ
  • ಬೆಂಗಳೂರು
  • ಬೆಳಗಾವಿ
  • ಬ್ರೇಕಿಂಗ್ ನ್ಯೂಸ್
  • ರಾಜಕೀಯ ಸುದ್ದಿ
  • ರಾಜ್ಯ ಸುದ್ದಿ
  • ವಿದೇಶಿ ಸುದ್ದಿ
  • ಸಾಹಿತ್ಯ/ಕವನ
  • ಸಿನೆಮಾ ಹಂಗಾಮ
  • About
  • Advertise
  • Privacy & Policy
  • Contact

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
No Result
View All Result
  • ಮುಖ್ಯಾಂಶ
    • ರಾಜಕೀಯ ಸುದ್ದಿ
    • ರಾಜ್ಯ ಸುದ್ದಿ
    • ದೇಶಿ ಸುದ್ದಿ
    • ವಿದೇಶಿ ಸುದ್ದಿ
  • ಬ್ರೇಕಿಂಗ್ ನ್ಯೂಸ್
  • ನಮ್ಮ ಕರಾವಳಿ
  • ಉಡುಪಿ
  • ದಕ್ಷಿಣ ಕನ್ನಡ
  • ಉತ್ತರ ಕನ್ನಡ
  • ತಂತ್ರಜ್ಞಾನ
  • ಕ್ರೀಡಾ ಸುದ್ದಿ
  • ಆರೋಗ್ಯ
  • ಮನೋರಂಜನೆ
    • ಸಿನೆಮಾ ಹಂಗಾಮ
  • ಇತರೆ ಸುದ್ದಿ ಗಳು

© 2022 Kannada Today News * MSME Udyam Registration No : UDYAM-KR-27-0042166 * - Hosted and Devoloped By Bluechipinfosystem.