78ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ *ಹರ್ ಘರ್ ತಿರಂಗ* ಕಾರ್ಯಕ್ರಮದ ಅಂಗವಾಗಿ ಸೋಮವಾರ ಸಂಜೆ *ಬಿಜೆಪಿ ಯುವ ಮೋರ್ಚಾ ಭಟ್ಕಳ ಘಟಕದಿಂದ ಬೈಕ್ ಜಾಥಾ
ಭಟ್ಕಳ-78ನೇ ಸ್ವಾತಂತ್ರ್ಯೋತ್ಸವದ ನಿಮಿತ್ತ *ಹರ್ ಘರ್ ತಿರಂಗ* ಕಾರ್ಯಕ್ರಮದ ಅಂಗವಾಗಿ ಸೋಮವಾರ ಸಂಜೆ *ಬಿಜೆಪಿ ಯುವ ಮೋರ್ಚಾ ಭಟ್ಕಳ ಘಟಕದಿಂದ ಬೈಕ್ ರ್ಯಾಲಿ* ಮೂಲಕ ತಿರಂಗ ಯಾತ್ರೆಯನ್ನು ಭಟ್ಕಳ ದ ಬಿಜೆಪಿ ಪಕ್ಷದ ಕಾರ್ಯಾಲಯದಿಂದ ಹಮ್ಮಿಕೊಳ್ಳಲಾಯಿತು.ಬೈಕ್ ರ್ಯಾಲಿ ಪಕ್ಷದ ಕಾರ್ಯಾಲಯದಿಂದ ಪ್ರಾರಂಭವಾಗಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಚನ್ನಪಟ್ಟಣ ಶ್ರೀ ಹನುಮಂತ ದೇವಸ್ಥಾನದ ಆವರಣದಲ್ಲಿ ಮುಕ್ತಾಯಗೊಳಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಸುನೀಲ್ ಬಿ.ನಾಯ್ಕ , ಜಿಲ್ಲಾ ಕಾರ್ಯದರ್ಶಿಗಳಾದ ಶ್ರೀ ಸುಬ್ರಾಯ ದೇವಾಡಿಗ, ಮಂಡಲ ಅಧ್ಯಕ್ಷರಾದ ಶ್ರೀ ಲಕ್ಷ್ಮೀನಾರಾಯಣ ನಾಯ್ಕ, ಮಂಡಲದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ್ ನಾಯ್ಕ ,ಮಂಡಲ ಯುವ ಮೋರ್ಚಾ ಅಧ್ಯಕ್ಷರಾದ ಶ್ರೀ ಸುನೀಲ್ ಕಾಮತ್ ಪ್ರಮುಖರಾದ ದಿನೇಶ್ ನಾಯ್ಕ, ಮೋಹನ್ ನಾಯ್ಕ ಮೊದಲಾದವರು, ಮಂಡಲದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಹಾಜರಿದ್ದರು.