ಭಟ್ಕಳ: ತಾಲೂಕಿನ ಅರಣ್ಯ ಅತಿಕ್ರಮಣದಾರರ ಸಭೆ ಅಕ್ಟೋಬರ್ 21 ಮು.೧೦ ಗಂಟೆಗೆ ಭಟ್ಕಳ ಸಿಟಿ ಹಾಲ್ ಹೊಸ ಬಸ್ ನಿಲ್ದಾಣ ಎದುರುಗಡೆ ಸ್ವಾಗತ ಹೋಟೇಲ್ ಪಕ್ಕಾ ಜರುಗಿಸಲು ತೀರ್ಮಾನಿಸಲು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೋಂದಾಯಿತ ಸದಸ್ಯರಿಗೆ ಜಿಪಿಎಸ್ ಮೇಲ್ಮನವಿ ಸ್ವೀಕೃತಿ ಪ್ರತಿ, ಗುರುತಿನ ಪತ್ರ ವಿತರಿಸಲಾಗುವ ಸಭೆಯಲ್ಲಿ ನ.೭ ರಂದು ಬೆಂಗಳೂರಿನಲ್ಲಿ ನಡೆಯಲಿರುವ ಬೆಂಗಳೂರು ಚಲೋ ಕಾರ್ಯಕ್ರಮ ಕುರಿತು ಚರ್ಚಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಆಸಕ್ತರು ಸಭೆಗೆ ಆಗಮಿಸಲು ಅಧ್ಯಕ್ಷ ರವೀಂದ್ರ ನಾಯ್ಕ ಪ್ರಕಟಣೆಯಲ್ಲಿ ನೀಡಿದ್ದಾರೆ