ಭಟ್ಕಳ : ಭಟ್ಕಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಘಟಕದಿಂದ ಕನ್ನಡಿಗರ ಹೆಮ್ಮೆಯ ಪ್ರಾತಿನಿಧಿಕ ಸಂಸ್ಥೆ ಕನ್ನಡ ಸಾಹಿತ್ಯ ಪರಿಷತ್ತಿನ ೧೧೧ನೇ ಸಂಸ್ಥಾಪನಾ ದಿನಾಚರಣೆಯು ಮೇ 5 ನೇ ತಾರೀಖಿನ ಸೋಮವಾರ ಸಂಜೆ 5 ಗಂಟೆಗೆ ಶಿರಾಲಿಯ ಡಾ. ಸರಾಫ್ ಕ್ಲಿನಿಕ್ ಆವರಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಸಾಹಿತಿ ಡಾ. ಆರ್ ವಿ. ಸರಾಫ್ ಉದ್ಘಾಟಿಸಲಿದ್ದು, ಕಸಾಪ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಾಹಿತಿ ನಾರಾಯಣ ಯಾಜಿ ಶಿರಾಲಿ, ಮಾನಾಸುತ ಶಂಭು ಹೆಗಡೆ ಉಪಸ್ಥಿತರಿರಲಿದ್ದಾರೆ. ಸಾಹಿತ್ಯಸಕ್ತರು, ಕನ್ನಡಾಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ
ನಾರಾಯಣ ನಾಯ್ಕ, ಸಯ್ಯದ್ ಗೌಸ್ ಮೋಹಿಯುದ್ದಿನ್, ಗೌರವ ಕೋಶಾಧ್ಯಕ್ಷ ಶ್ರೀಧರ್ ಶೇಟ್ ಕೋರಿದ್ದಾರೆ.