ಭಟ್ಕಳ : ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ ನಿಂದ
ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ನಾಲ್ವಡಿ
ಕೃಷ್ಣರಾಜ ಒಡೆಯರ್ ಜನ್ಮ ದಿನಾಚರಣೆಯನ್ನು ಇಲ್ಲಿನ
ಚಿತ್ರಾಪುರದ ಸಾಹಿತಿ ಶ್ರೀಧರ್ ಶೇಟ್ ಅವರ ನಿವಾಸ ಕಲಾಸಿರಿಯಲ್ಲಿ ಆಚರಿಸಲಾಯಿತು.
ನಾಲ್ವಡಿ ಕ್ರಷ್ಣರಾಜ ಒಡೆಯರ್ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಾಹಿತಿ ಮಾನಾಸುತ ಶಂಭು ಹೆಗಡೆ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮ ದಿನಾಚರಣೆಯನ್ನು ಭಟ್ಕಳ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಘಟಕ ತಪ್ಪದೆ ಆಚರಿಸುತ್ತಾ ಬಂದಿರುವುದು ಸಂತಸದ ಸಂಗತಿ. ಕನ್ನಡ ನಾಡು ನುಡಿಯನ್ನು ಕಟ್ಟುವಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ರವರ ಕೊಡುಗೆಗಳನ್ನು ಇಂದಿನ ಯುವ ಪೀಳಿಗೆ ತಿಳಿದುಕೊಳ್ಳಬೇಕು, ಹಿಂದಿನವರ ಕೊಡುಗೆಗಳನ್ನು ಸದಾ ಸ ಸ್ಮರಿಸಬೇಕು ಎಂದು ನುಡಿದು ಸ್ವರಚಿತ ಕವಿತೆ ವಾಚಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕಾಧ್ಯಕ್ಷ ಗಂಗಾಧರ ನಾಯ್ಕ ಮಾತನಾಡಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪಕರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಕನ್ನಡ ನಾಡಿಗೆ
ಪ್ರಾತಃ ಸ್ಮರಣಿಯರು. ಈ ನಾಡಿನ ಬೌದ್ಧಿಕ ಪ್ರಗತಿಗಾಗಿ ಮೈಸೂರು ವಿಶ್ವವಿದ್ಯಾಲಯ, ಭೌತಿಕ ಪ್ರಗತಿಗಾಗಿ ಕೃಷ್ಣರಾಜಸಾಗರ ಅಣೆಕಟ್ಟು, ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರಗತಿಗಾಗಿ ಕನ್ನಡ ಸಾಹಿತ್ಯ ಪರಿಷತ್ತನ್ನು ಸ್ಥಾಪಿಸಿದರು. ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಉದ್ಯೋಗಿಕವಾಗಿ ಆರ್ಥಿಕವಾಗಿ ಈ ನಾಡನ್ನು ಕಟ್ಟುವಲ್ಲಿ ಕೃಷ್ಣರಾಜ ಒಡೆಯರ್ ಅವರ ಕೊಡುಗೆ ಬಹಳ ದೊಡ್ಡದು. ಇವತ್ತು ಬೆಂಗಳೂರು ವಿಶ್ವಮಾನ್ಯವಾಗಿ ಗುರುತಿಸಿಕೊಳ್ಳುವಲ್ಲಿ, ಹಾಗೆಯೇ ಮೈಸೂರು ಸಾಂಸ್ಕೃತಿಕ ನಗರವಾಗಿ ಗುರುತಿಸಿಕೊಳ್ಳುವಲ್ಲಿ ಒಡೆಯರ್ ಅವರ
ದೂರದ್ರಷ್ಟಿಯಿದೆ. ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸಾಹಿತಿ ಎಂ.ಡಿ. ಪಕ್ಕಿ ಸಾಂದರ್ಭಿಕವಾಗಿ ಮಾತನಾಡಿದರು. ಸಾಹಿತಿ ಶ್ರೀಧರ್ ಶೆಟ್ಟಿ ಎಲ್ಲರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳ ಮಾಡಿದರು. ಕವಯತ್ರಿ ಶಿಕ್ಷಕಿ ಹೇಮಲತಾ ರಾವ್ ವಂದಿಸಿದರು. ಕಾರ್ಯಕ್ರಮದಲ್ಲಿ ಯುವಕವಿ ನಂದನ್ ನಾಯ್ಕ, ಶ್ರೀಶಾ ಶ್ರೀಧರ ಶೇಟ್ ಮುಂತಾದವರು ಉಪಸ್ಥಿತರಿದ್ದರು