ಭಟ್ಕಳ: ಕಾರವಾರದ ಕನ್ನಡಪ್ರಭ ಪತ್ರಿಕೆ ವರದಿಗಾರರಾಗಿದ್ದ ಗುರುಪ್ರಸಾದ ಹೆಗಡೆ(34) ಶುಕ್ರವಾರ ನಿಧನರಾದರು. ಶಿರಸಿ ತಾಲ್ಲೂಕಿನ ಮಂಜುಗುಣಿಯ ತೋಟದಳ್ಳಿ ಗ್ರಾಮದ ನಿವಾಸಿಯಾಗಿದ್ದ ಗುರುಪ್ರಸಾದ ಶಿರಸಿಯಲ್ಲಿಯೂ ಹಲವು ವರ್ಷಗಳ ಕಾಲ ಪತ್ರಕರ್ತರಾಗಿ ಕಾರ್ಯನಿರ್ವಹಿಸಿದ್ದರು.
ಕಳೆದ 9 ವರ್ಷಗಳಿಂದ ಕಾರವಾರದಲ್ಲಿ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಗುರುಪ್ರಸಾದ ಸದಾ ನಗುಮೊಗದ ಸ್ನೇಹಿತನಾಗಿ, ಎಲ್ಲರೊಂದಿಗೆ ಉತ್ತಮ ಸ್ನೇಹ ಬಾಂಧವ್ಯ ಹೊಂದಿದ್ದರು. ವರದಿಗಾರಿಕೆಯಲ್ಲಿ ವಸ್ತನಿಷ್ಠ, ಪ್ರಾಮಾಣಿಕ, ನಿಷ್ಪಕ್ಷಪಾತತೆಯನ್ನು ಹೊಂದಿದ್ದ ಎಲ್ಲರ ನೆಚ್ಚಿನ `ಗುರು’ ನೇರ ನುಡಿಯಿಂದಲೇ ಎಲ್ಲರ ಪ್ರೀತಿಯನ್ನು ಗಳಿಸಿ , ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು.
ಕಳೆದ ಕೆಲ ತಿಂಗಳಿನಿಂದ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು ಬನವಾಸಿಯ ಅವರ ಸಂಬಂಧಿಗಳ ಮನೆಯಲ್ಲಿ ಉಳಿದುಕೊಂಡು ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಉತ್ತರ ಕನ್ನಡ ಜಿಲ್ಲಾ ಘಟಕದ ಪರವಾಗಿ ಜಿಲ್ಲಾ ಅಧ್ಯಕ್ಷ ನಾಗರಾಜ್ ಅರ್ಜುನ್ ದೈವಜ್ಞ ಸಂತಾಪ ಸೂಚಿಸಿದ್ದಾರೆ..
ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಆ ದೇವರು ಅವರ ಕುಟುಂಬಕ್ಕೆ ನೀಡಲಿ ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಬಳಗ ಶ್ರದ್ಧಾಂಜಲಿ ಅರ್ಪಿಸಿದೆ.ಅವರ ಅಗಲಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘದ ಕರಾವಳಿ ಕರ್ನಾಟಕ ವಿಭಾಗದ ಅಧ್ಯಕ್ಷ ಕುಮಾರ.ನಾಯ್ಕ ಸಂತಾಪ ಸೂಚಿಸಿ ಅವರ ಅಗಲಿಕೆ ಉತ್ತರ ಕನ್ನಡ ಜಿಲ್ಲಾ ಪತ್ರಿಕಾ ರಂಗಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತಿಳಿಸಿದ್ದಾರೆ.